ಕೊಂಕಣ ರೈಲು ನಿಲ್ದಾಣದ ಸಂಪರ್ಕ ರಸ್ತೆಯಿಂದ ಶಿರೂರು ಪಾದಚಾರಿ ಒಳಸುರಂಗದವರೆಗೆ ಸಂಪರ್ಕ ರಸ್ತೆ ನಿರ್ಮಿಸಬೇಕು, ಗಂಗಾ ಕಲ್ಯಾಣ ಯೋಜನೆಯ 2 ಕೊಳವೆ ಬಾವಿಗಳನ್ನು ಪುನಃ ಕೊರೆಸಬೇಕು, ದೇವತಾ ಕೆರೆಯ ಹೂಳೆತ್ತಿಸಬೇಕು, ಟೋಲ್ ಸಮೀಪ ಎರಡು ಬದಿಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಿಸಬೇಕು, ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯ ಯುವಕ ಯುವತಿಯರಿಗೆ ಅವರ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ನೀಡಬೇಕು, ಅಳ್ವೆಗದ್ದೆ ಕ್ರಾಸ್ನಲ್ಲಿ ರಿಕ್ಷಾ ನಿಲ್ದಾಣ ನಿರ್ಮಿಸಬೇಕು, ಮೇಲಿನ ಎಲ್ಲಾ ಬೇಡಿಕೆಗಳ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಹಲವು ಬಾರಿ ಮನವಿ ನೀಡಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ.