<p><strong>ಉಡುಪಿ:</strong> ಇಲ್ಲಿನ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಶೌಚಾಲಯ ಶುಚಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಇಒ, ಶಾಲೆಯ ಮುಖ್ಯೋಪಾಧ್ಯಾಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಶಾಲೆಯಲ್ಲಿ ಅಧ್ಯಾಪಕರೊಬ್ಬರ ಸೂಚನೆಯ ಮೇರೆಗೆ ವಿದ್ಯಾರ್ಥಿಯೊಬ್ಬ ಶೌಚಾಲಯ ಶುಚಿಗೊಳಿಸುತ್ತಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟಗೊಂಡಿತ್ತು.</p>.<p>‘ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಶೌಚಾಲಯ ಶುಚಿಗೊಳಿಸುತ್ತಿರುವುದರ ಬಗ್ಗೆ ದೂರುಗಳು ಬಂದಿದ್ದು, ಮಕ್ಕಳ ಹಕ್ಕುಗಳ ನಿಯಮದ ಅರಿವಿದ್ದೂ ಮಕ್ಕಳಿಂದ ಈ ಕೆಲಸ ಮಾಡಿಸಿರುವುದರ ಔಚಿತ್ಯವೇನು ಎಂಬುದರ ಕುರಿತು ಖುದ್ದಾಗಿ ಕಚೇರಿಗೆ ಬಂದು ಮಾಹಿತಿ ನೀಡಬೇಕು’ ಎಂದು ಬಿಇಒ ಶಬಾನಾ ಅಂಜುಂ ಅವರು ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೊ ಅವರಿಗೆ ನೀಡಿರುವ ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<p>ಕೈಗವಸಾಗಲಿ, ಚಪ್ಪಲಿಯಾಗಲಿ ಧರಿಸದೆ ಶಾಲಾ ಸಮವಸ್ತ್ರದಲ್ಲಿಯೋ ವಿದ್ಯಾರ್ಥಿಯೊಬ್ಬ ಶೌಚಾಲಯವನ್ನು ನೀರು ಹಾಕಿ ಪೊರಕೆಯಿಂದ ಶುಚಿಗೊಳಿಸಿರುವುದು ಗುರುವಾರ ಕಂಡು ಬಂದಿತ್ತು.</p>.<p>‘ಶಾಲೆಗೆ ನೋಟಿಸ್ ಜಾರಿ ಮಾಡಲು ಬಿಇಒಗೆ ಸೂಚಿಸಿದ್ದೇನೆ. ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಕೆ. ತಿಳಿಸಿದರು.</p>.<p>‘ನನ್ನ ಗಮನಕ್ಕೆ ಬಾರದೆ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಶೌಚಾಲಯ ಶುಚಿಗೊಳಿಸಲು ಸೂಚಿಸಿದ್ದರು’ ಎಂದು ಶಾಲಾ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೊ ಸ್ಪಷ್ಟನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಇಲ್ಲಿನ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಶೌಚಾಲಯ ಶುಚಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಇಒ, ಶಾಲೆಯ ಮುಖ್ಯೋಪಾಧ್ಯಾಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಶಾಲೆಯಲ್ಲಿ ಅಧ್ಯಾಪಕರೊಬ್ಬರ ಸೂಚನೆಯ ಮೇರೆಗೆ ವಿದ್ಯಾರ್ಥಿಯೊಬ್ಬ ಶೌಚಾಲಯ ಶುಚಿಗೊಳಿಸುತ್ತಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟಗೊಂಡಿತ್ತು.</p>.<p>‘ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಶೌಚಾಲಯ ಶುಚಿಗೊಳಿಸುತ್ತಿರುವುದರ ಬಗ್ಗೆ ದೂರುಗಳು ಬಂದಿದ್ದು, ಮಕ್ಕಳ ಹಕ್ಕುಗಳ ನಿಯಮದ ಅರಿವಿದ್ದೂ ಮಕ್ಕಳಿಂದ ಈ ಕೆಲಸ ಮಾಡಿಸಿರುವುದರ ಔಚಿತ್ಯವೇನು ಎಂಬುದರ ಕುರಿತು ಖುದ್ದಾಗಿ ಕಚೇರಿಗೆ ಬಂದು ಮಾಹಿತಿ ನೀಡಬೇಕು’ ಎಂದು ಬಿಇಒ ಶಬಾನಾ ಅಂಜುಂ ಅವರು ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೊ ಅವರಿಗೆ ನೀಡಿರುವ ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<p>ಕೈಗವಸಾಗಲಿ, ಚಪ್ಪಲಿಯಾಗಲಿ ಧರಿಸದೆ ಶಾಲಾ ಸಮವಸ್ತ್ರದಲ್ಲಿಯೋ ವಿದ್ಯಾರ್ಥಿಯೊಬ್ಬ ಶೌಚಾಲಯವನ್ನು ನೀರು ಹಾಕಿ ಪೊರಕೆಯಿಂದ ಶುಚಿಗೊಳಿಸಿರುವುದು ಗುರುವಾರ ಕಂಡು ಬಂದಿತ್ತು.</p>.<p>‘ಶಾಲೆಗೆ ನೋಟಿಸ್ ಜಾರಿ ಮಾಡಲು ಬಿಇಒಗೆ ಸೂಚಿಸಿದ್ದೇನೆ. ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಕೆ. ತಿಳಿಸಿದರು.</p>.<p>‘ನನ್ನ ಗಮನಕ್ಕೆ ಬಾರದೆ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಶೌಚಾಲಯ ಶುಚಿಗೊಳಿಸಲು ಸೂಚಿಸಿದ್ದರು’ ಎಂದು ಶಾಲಾ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೊ ಸ್ಪಷ್ಟನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>