ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಸಿ ಬಳಿ ಧರೆಗುರುಳಿದ ಮರ: ನಾಲ್ಕು ಕಾರು ಜಖಂ

ಪ್ರಾಣಹಾನಿ ಸಂಭವಿಸಿಲ್ಲ
Last Updated 21 ಜೂನ್ 2019, 14:23 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆ ಆವರಣದಲ್ಲಿದ್ದ ಬೃಹತ್ ಮರವೊಂದು ಶುಕ್ರವಾರ ಧರೆಗುರುಳಿದ್ದು, ನಾಲ್ಕು ಕಾರುಗಳು ಜಖಂಗೊಂಡಿವೆ.

ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಪಕ್ಕದಲ್ಲಿ ಈ ಅವಘಡ ಸಂಭವಿಸಿದೆ. ತುಂಬಾ ಹಳೆಯದಾದ ಮೇ ಫ್ಲವರ್ ಮರ ಗಾಳಿಗೆ ಮುರಿದುಬಿದ್ದಿದ್ದು, ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. 2 ಕಾರುಗಳಿಗೆ ಅಲ್ಪ ಪ್ರಮಾಣದ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆಸ್ಪತ್ರೆ ಆವರಣದಲ್ಲಿ ಹೆಚ್ಚಾಗಿ ರೋಗಿಗಳು ಓಡಾಡುತ್ತಿರುತ್ತಾರೆ. ಮರ ಬಿದ್ದ ಸಮಯದಲ್ಲಿಅದೃಷ್ಟವಶಾತ್ ಕೆಳಗೆ ಯಾರೂ ಇರಲಿಲ್ಲವಾದ್ದರಿಂದ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ.

ಆಸ್ಪತ್ರೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮರದ ರೆಂಬೆಕೊಂಬೆಗಳನ್ನು ಕತ್ತರಿಸಿ ತೆರವುಗೊಳಿಸಿದರು. ಮರ ಬಿದ್ದಿದ್ದರಿಂದ ಕೆಲಕಾಲ ಆಸ್ಪತ್ರೆ ಆವರಣದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT