<p><strong>ಕೋಟ (ಬ್ರಹ್ಮಾವರ):</strong> ‘ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಶ್ರೇಷ್ಠ ಕವಿ. ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಾಧನೆ ಅನನ್ಯವಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ. ಅವರ ಕಣ್ಮರೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದು ಪ್ರೊ.ಉಪೇಂದ್ರ ಸೋಮಯಾಜಿ ಹೇಳಿದರು.</p>.<p>ಕೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕೋಟ ಮಿತ್ರ ಮಂಡಳಿ, ಕೋಟೇಶ್ವರದ ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆ ಆಶ್ರಯದಲ್ಲಿ ಅಯೋಜಿಸಿದ್ದ ಎಚ್.ಎಸ್. ವೆಂಕಟೇಶ ಮೂರ್ತಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎಚ್ಎಸ್ವಿ ಅವರು ನಾಡು– ನುಡಿ, ಸಂಸ್ಕೃತಿ, ಸಾಹಿತ್ಯ ಸಂರಕ್ಷಣೆ, ಅಭಿವೃದ್ಧಿಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ ಎಲ್ಲರ ಪ್ರೀತಿ ಪಾತ್ರರಾದವರು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಎಚ್.ಎಸ್.ವಿ. ಅವರು ತಮ್ಮ ಮೇಲೆ ಬೀರಿದ ಪ್ರಭಾವದ ಬಗ್ಗೆ ಮೆಲಕು ಹಾಕಿದರು.</p>.<p>ಮಾಧ್ಯಮ ಪ್ರತಿನಿಧಿ ನರಸಿಂಹಮೂರ್ತಿ ರಾವ್, ಸುವ್ರತಾ, ಶರಧಿ, ಶ್ರೀದೇವಿ ಹಂದೆ, ನಿವೃತ್ತ ಮುಖ್ಯಶಿಕ್ಷಕ ಶ್ರೀಪತಿ ಹೇರ್ಳೆ, ಸಾಹಿತಿ ಪಾರಂಪಳ್ಳಿ ನರಸಿಂಹ ಐತಾಳ, ಸೂರ್ಯನಾರಾಯಣ, ವೆಂಕಟಕೃಷ್ಣ ಸೋಮಯಾಜಿ ಭಾಗವಹಿಸಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ (ಬ್ರಹ್ಮಾವರ):</strong> ‘ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಶ್ರೇಷ್ಠ ಕವಿ. ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಾಧನೆ ಅನನ್ಯವಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ. ಅವರ ಕಣ್ಮರೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದು ಪ್ರೊ.ಉಪೇಂದ್ರ ಸೋಮಯಾಜಿ ಹೇಳಿದರು.</p>.<p>ಕೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕೋಟ ಮಿತ್ರ ಮಂಡಳಿ, ಕೋಟೇಶ್ವರದ ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆ ಆಶ್ರಯದಲ್ಲಿ ಅಯೋಜಿಸಿದ್ದ ಎಚ್.ಎಸ್. ವೆಂಕಟೇಶ ಮೂರ್ತಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎಚ್ಎಸ್ವಿ ಅವರು ನಾಡು– ನುಡಿ, ಸಂಸ್ಕೃತಿ, ಸಾಹಿತ್ಯ ಸಂರಕ್ಷಣೆ, ಅಭಿವೃದ್ಧಿಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ ಎಲ್ಲರ ಪ್ರೀತಿ ಪಾತ್ರರಾದವರು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಎಚ್.ಎಸ್.ವಿ. ಅವರು ತಮ್ಮ ಮೇಲೆ ಬೀರಿದ ಪ್ರಭಾವದ ಬಗ್ಗೆ ಮೆಲಕು ಹಾಕಿದರು.</p>.<p>ಮಾಧ್ಯಮ ಪ್ರತಿನಿಧಿ ನರಸಿಂಹಮೂರ್ತಿ ರಾವ್, ಸುವ್ರತಾ, ಶರಧಿ, ಶ್ರೀದೇವಿ ಹಂದೆ, ನಿವೃತ್ತ ಮುಖ್ಯಶಿಕ್ಷಕ ಶ್ರೀಪತಿ ಹೇರ್ಳೆ, ಸಾಹಿತಿ ಪಾರಂಪಳ್ಳಿ ನರಸಿಂಹ ಐತಾಳ, ಸೂರ್ಯನಾರಾಯಣ, ವೆಂಕಟಕೃಷ್ಣ ಸೋಮಯಾಜಿ ಭಾಗವಹಿಸಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>