ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ತುಳು ಅಪ್ಪೆ ಭಾವಚಿತ್ರ ಅನಾವರಣ 11ರಂದು

Last Updated 8 ನವೆಂಬರ್ 2021, 13:36 IST
ಅಕ್ಷರ ಗಾತ್ರ

ಉಡುಪಿ: ನಾಗರಿಕರ ಹಿತರಕ್ಷಣಾ ವೇದಿಕೆ ಕೊಂಡಕೂರು ಸಂಸ್ಥೆಯಿಂದ ನ.11ರಂದು ಮಧ್ಯಾಹ್ನ 12.30ಕ್ಕೆ ಸಾಯಿಬಾಬಾ ಮಂದಿರದ ವಠಾರದಲ್ಲಿ ತುಳು ಅಪ್ಪೆ ಭಾವಚಿತ್ರ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷರಾದ ರಘುನಾಥ ಮಾಬಿಯಾನ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸತತ ಪರಿಶ್ರಮದಿಂದ ‘ತುಳು ಅಪ್ಪೆ’ ಭಾವಚಿತ್ರ ಸಿದ್ಧಪಡಿಸಲಾಗಿದ್ದು, ಸುಂದರವಾಗಿ ಮೂಡಿಬಂದಿದೆ. ಹಿಂದೆ, ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಬಿಡುಗಡೆಮಾಡಿದ ಕೋಟಿ ಚೆನ್ನಯ್ಯರ ಭಾವಚಿತ್ರವನ್ನು ತುಳುವರು ಬಹಳ ಇಷ್ಟಪಟ್ಟಿದ್ದರು ಎಂದರು.

ಕಾರ್ಯಕ್ರಮ ನಡೆಯುವ ದಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬನ್ನಂಜೆ ಬಾಬು ಅಮೀನ್ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಮಹೇಶ್ ಸುವರ್ಣ, ಧೀರಜ್‌, ಪಿ.ಎನ್‌.ಆಚಾರ್ಯ, ಅಶೋಕ್ ಪೂಜಾರಿ, ಮಹಾಬಲ ಅಮೀನ್, ರಾಮಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT