<p><strong>ಉಡುಪಿ</strong>: ನಾಗರಿಕರ ಹಿತರಕ್ಷಣಾ ವೇದಿಕೆ ಕೊಂಡಕೂರು ಸಂಸ್ಥೆಯಿಂದ ನ.11ರಂದು ಮಧ್ಯಾಹ್ನ 12.30ಕ್ಕೆ ಸಾಯಿಬಾಬಾ ಮಂದಿರದ ವಠಾರದಲ್ಲಿ ತುಳು ಅಪ್ಪೆ ಭಾವಚಿತ್ರ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷರಾದ ರಘುನಾಥ ಮಾಬಿಯಾನ್ ತಿಳಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸತತ ಪರಿಶ್ರಮದಿಂದ ‘ತುಳು ಅಪ್ಪೆ’ ಭಾವಚಿತ್ರ ಸಿದ್ಧಪಡಿಸಲಾಗಿದ್ದು, ಸುಂದರವಾಗಿ ಮೂಡಿಬಂದಿದೆ. ಹಿಂದೆ, ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಬಿಡುಗಡೆಮಾಡಿದ ಕೋಟಿ ಚೆನ್ನಯ್ಯರ ಭಾವಚಿತ್ರವನ್ನು ತುಳುವರು ಬಹಳ ಇಷ್ಟಪಟ್ಟಿದ್ದರು ಎಂದರು.</p>.<p>ಕಾರ್ಯಕ್ರಮ ನಡೆಯುವ ದಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬನ್ನಂಜೆ ಬಾಬು ಅಮೀನ್ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಮಹೇಶ್ ಸುವರ್ಣ, ಧೀರಜ್, ಪಿ.ಎನ್.ಆಚಾರ್ಯ, ಅಶೋಕ್ ಪೂಜಾರಿ, ಮಹಾಬಲ ಅಮೀನ್, ರಾಮಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ನಾಗರಿಕರ ಹಿತರಕ್ಷಣಾ ವೇದಿಕೆ ಕೊಂಡಕೂರು ಸಂಸ್ಥೆಯಿಂದ ನ.11ರಂದು ಮಧ್ಯಾಹ್ನ 12.30ಕ್ಕೆ ಸಾಯಿಬಾಬಾ ಮಂದಿರದ ವಠಾರದಲ್ಲಿ ತುಳು ಅಪ್ಪೆ ಭಾವಚಿತ್ರ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷರಾದ ರಘುನಾಥ ಮಾಬಿಯಾನ್ ತಿಳಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸತತ ಪರಿಶ್ರಮದಿಂದ ‘ತುಳು ಅಪ್ಪೆ’ ಭಾವಚಿತ್ರ ಸಿದ್ಧಪಡಿಸಲಾಗಿದ್ದು, ಸುಂದರವಾಗಿ ಮೂಡಿಬಂದಿದೆ. ಹಿಂದೆ, ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಬಿಡುಗಡೆಮಾಡಿದ ಕೋಟಿ ಚೆನ್ನಯ್ಯರ ಭಾವಚಿತ್ರವನ್ನು ತುಳುವರು ಬಹಳ ಇಷ್ಟಪಟ್ಟಿದ್ದರು ಎಂದರು.</p>.<p>ಕಾರ್ಯಕ್ರಮ ನಡೆಯುವ ದಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬನ್ನಂಜೆ ಬಾಬು ಅಮೀನ್ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಮಹೇಶ್ ಸುವರ್ಣ, ಧೀರಜ್, ಪಿ.ಎನ್.ಆಚಾರ್ಯ, ಅಶೋಕ್ ಪೂಜಾರಿ, ಮಹಾಬಲ ಅಮೀನ್, ರಾಮಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>