ಶನಿವಾರ, ಮಾರ್ಚ್ 25, 2023
22 °C

ಉಡುಪಿ: ತುಳು ಅಪ್ಪೆ ಭಾವಚಿತ್ರ ಅನಾವರಣ 11ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಾಗರಿಕರ ಹಿತರಕ್ಷಣಾ ವೇದಿಕೆ ಕೊಂಡಕೂರು ಸಂಸ್ಥೆಯಿಂದ ನ.11ರಂದು ಮಧ್ಯಾಹ್ನ 12.30ಕ್ಕೆ ಸಾಯಿಬಾಬಾ ಮಂದಿರದ ವಠಾರದಲ್ಲಿ ತುಳು ಅಪ್ಪೆ ಭಾವಚಿತ್ರ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷರಾದ ರಘುನಾಥ ಮಾಬಿಯಾನ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸತತ ಪರಿಶ್ರಮದಿಂದ ‘ತುಳು ಅಪ್ಪೆ’ ಭಾವಚಿತ್ರ ಸಿದ್ಧಪಡಿಸಲಾಗಿದ್ದು, ಸುಂದರವಾಗಿ ಮೂಡಿಬಂದಿದೆ. ಹಿಂದೆ, ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಬಿಡುಗಡೆಮಾಡಿದ ಕೋಟಿ ಚೆನ್ನಯ್ಯರ ಭಾವಚಿತ್ರವನ್ನು ತುಳುವರು ಬಹಳ ಇಷ್ಟಪಟ್ಟಿದ್ದರು ಎಂದರು. 

ಕಾರ್ಯಕ್ರಮ ನಡೆಯುವ ದಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬನ್ನಂಜೆ ಬಾಬು ಅಮೀನ್ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಮಹೇಶ್ ಸುವರ್ಣ, ಧೀರಜ್‌, ಪಿ.ಎನ್‌.ಆಚಾರ್ಯ, ಅಶೋಕ್ ಪೂಜಾರಿ, ಮಹಾಬಲ ಅಮೀನ್, ರಾಮಚಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು