ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಶ್ಯಾವಾಟಿಕೆ: ಇಬ್ಬರ ಬಂಧನ, ಐವರು ಮಹಿಳೆಯರ ರಕ್ಷಣೆ

Published 23 ಜುಲೈ 2023, 6:53 IST
Last Updated 23 ಜುಲೈ 2023, 6:53 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಮನೆಯಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ಮೂವರು ಹಾಗೂ ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈನ ಇಬ್ಬರ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

4 ಮೊಬೈಲ್‌, 1 ಕಾರು, 2 ಬೈಕ್‌ ಹಾಗೂ ₹10 ಸಾವಿರ ನಗದು ವಶಪಡಿಸಿಕೊಳ್ಳಲಾಗಿದ್ದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನೈತಿಕ ಚಟುವಟಿಕೆಗೆ ವ್ಯಕ್ತಿಗಳಿಂದ ಹಣವನ್ನು ಪಡೆದು ಕೊಠಡಿಗಳನ್ನು ಒದಗಿಸುತ್ತಿದ್ದ ಪ್ರಮುಖ ಆರೋಪಿ ಖಾಲಿದ್‌ ಪರಾರಿಯಾಗಿದ್ದಾನೆ.

ಮತ್ತೊಂದೆಡೆ ಶಾಂತಿನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಮನೆಯನ್ನು ಜಪ್ತಿ ಮಾಡಲಾಗಿದೆ.

ಎಸ್‌ಪಿ ಹಾಕೆ ಅಕ್ಷಯ್ ಮಚಿಂದ್ರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಎಸ್‌ಪಿ ಟಿ.ಸಿದ್ದಲಿಂಗಪ್ಪ, ಡಿವೈಎಸ್‌ಪಿ ದಿನಕರ ಅವರ ನಿರ್ದೇಶನದಂತೆ ಬ್ರಹ್ಮಾವರ ಇನ್‌ಸ್ಟೆಕ್ಟರ್ ದಿವಾಕರ್‌, ಮಣಿಪಾಲ ಇನ್‌ಸ್ಟೆಕ್ಟರ್ ಟಿ.ವಿ.ದೇವರಾಜ, ನೇತೃತ್ವದಲ್ಲಿ ಮಣಿಪಾಲ ಪಿಎಸ್‌ಐ ಅಬ್ದುಲ್‌ ಖಾದರ್, ಹೆಡ್‌ ಕಾನ್‌ಸ್ಟೆಬಲ್‌ ಸುಕುಮಾರ್‌ ಶೆಟ್ಟಿ, ಇಮ್ರಾನ್‌, ಸುರೇಶ್‌ ಕುಮಾರ್‌, ಜ್ಯೋತಿ ನಾಯಕ್, ಕಾನ್‌ಸ್ಟೆಬಲ್‌ ಅರುಣ ಒಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT