ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಚಕ್ರ ವಾಹನ ಕಳ್ಳನ ಬಂಧನ: 5 ಸ್ಕೂಟರ್ ವಶ

Last Updated 22 ಸೆಪ್ಟೆಂಬರ್ 2022, 3:16 IST
ಅಕ್ಷರ ಗಾತ್ರ

ಉಡುಪಿ: ಹಲವು ಕಡೆಗಳಲ್ಲಿ ಮೋಟಾರ್ ಸೈಕಲ್ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ₹ 2 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಗದಗ ಜಿಲ್ಲೆಯ ಗೋವಿಂದಪ್ಪ ಹೇಮಣ್ಣ ಪೂಜಾರ ಬಂಧಿತ ಆರೋಪಿ. ಈತ ಜ.31ರಂದು ಉಡುಪಿಯಲ್ಲಿ ಸ್ಕೂಟರ್ ಕಳವು ಮಾಡಿದ್ದು ಮಾಲೀಕ ಗಣೇಶ್ ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸಿಡಿಆರ್ ಕರೆ ಆಧರಿಸಿ ಆರೋಪಿಯನ್ನು ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆಯಲ್ಲಿ ಬಂಧಿಸಲಾಗಿದೆ.

ಆರೋಪಿ ದೊಡ್ಡಣಗುಡ್ಡೆ, ಸೋದೆ ಮಠದ ಬಳಿ ವಾಹನ ಕಳವು ಮಾಡಿದ್ದಾನೆ. ಮಂಗಳೂರಿನ ಬಂದರು ಠಾಣೆ, ಬೆಳ್ತಂಗಡಿ ಠಾಣೆ ವ್ಯಾಪ್ತಿಯಲ್ಲಿಯೂ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದಾನೆ. ರಾಣೆಬೆನ್ನೂರು ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಎಎಸ್‌ಐ ಜಯಕರ, ಹೆಡ್‌ ಕಾನ್‌ಸ್ಟೆಬಲ್ ಸತೀಶ್ ಬೆಳ್ಳೆ, ಕಾನ್‌ಸ್ಟೆಬಲ್ ಕಿರನ್‌, ಹೇಮಂತ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT