<p><em><strong>ವರದಿ: ಹಮೀದ್ ಪಡುಬಿದ್ರಿ</strong></em></p><p><strong>ಪಡುಬಿದ್ರಿ</strong> (ಉಡುಪಿ ಜಿಲ್ಲೆ): ದಸರಾ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಏಕಕಾಲದಲ್ಲಿ 151 ಕಲಾವಿದರು ವೀಣೆ ನುಡಿಸುವ ಮೂಲಕ ದೇವಿಯೆದುರು ಏಕಪಂಚಷತ್ಯಧಿಕ ಏಕಶತಮ್ ವೀಣಾವಲ್ಲರಿ ಸೇವೆ ಸಲ್ಲಿಸಿದರು.</p><p>ಗುರುವಾರ ಸಂಜೆ ವಿದುಷಿ ಪವನ ಬಿ.ಆಚಾರ್ ನಿರ್ದೇಶನದಲ್ಲಿ ವೀಣಾ ವಾದಕರು ಏಕಕಾಲದಲ್ಲಿ 151 ವೀಣೆಗಳನ್ನು ನುಡಿಸಿದರು. ಕಲಾವಿದರು ಒಂದು ಗಂಟೆ ಸತತವಾಗಿ ವೀಣೆಗಳನ್ನು ನುಡಿಸುವ ಮೂಲಕ ನೆರೆದಿದ್ದ ಜನರಿಗೆ ಸಂಗೀತದ ರಸದೌತಣ ಉಣ ಬಡಿಸಿದರು.</p><p>ಏಕಕಾಲದಲ್ಲಿ ಹೊರಹೊಮ್ಮಿದ ವೀಣೆಗಳ ನಾದಸ್ವರ ಸಾಗರದ ಅಲೆಗಳಂತೆ ತೇಲಿಬಂದು ಸಂಗೀತ ಪ್ರಿಯರ ಮೈ ಮನಸ್ಸಿಗೆ ಮುದ ನೀಡಿತು. ಸಾವಿರಾರು ಮಂದಿ ಕಾರ್ಯಕ್ರಮದ ಸವಿ ಸವಿದರು.</p><p>ಕಾರ್ಯಕ್ರಮದಲ್ಲಿ ವಿದುಷಿ ಪವನ ಬಿ. ಆಚಾರ್ ಅವರಿಗೆ ವೀಣಾ ವಿಭೂಷಣೆ ಪ್ರಶಸ್ತಿಯನ್ನು ಕ್ಷೇತ್ರದ ಗೌರವ ಸಲಹೆಗಾರ ಜಿ.ಶಂಕರ್ ಹಾಗೂ ಶಾಲಿನಿ ದಂಪತಿ ವಿತರಿಸಿದರು. ಬಳಿಕ ಮಾತನಾಡಿದ ಜಿ.ಶಂಕರ್, ‘ಕಳೆದ ಬಾರಿ 101 ವೀಣೆಗಳ ವಾದನ ನಡೆದಿತ್ತು. ಈ ಬಾರಿ 151 ಹಾಗೂ ಮುಂದಿನ ಬಾರಿ 200 ವೀಣೆಗಳ ವಾದನ ಆಯೋಜಿಸಲಾಗುವುದು’ ಎಂದರು.</p><p>ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ದೇವಳದ ಅರ್ಚಕ ರಾಘವೇಂದ್ರ ಉಪಾಧ್ಯಾಯ, ವ್ಯವಸ್ಥಾಪಕ ಸತೀಶ್ ಅಮೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em><strong>ವರದಿ: ಹಮೀದ್ ಪಡುಬಿದ್ರಿ</strong></em></p><p><strong>ಪಡುಬಿದ್ರಿ</strong> (ಉಡುಪಿ ಜಿಲ್ಲೆ): ದಸರಾ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಏಕಕಾಲದಲ್ಲಿ 151 ಕಲಾವಿದರು ವೀಣೆ ನುಡಿಸುವ ಮೂಲಕ ದೇವಿಯೆದುರು ಏಕಪಂಚಷತ್ಯಧಿಕ ಏಕಶತಮ್ ವೀಣಾವಲ್ಲರಿ ಸೇವೆ ಸಲ್ಲಿಸಿದರು.</p><p>ಗುರುವಾರ ಸಂಜೆ ವಿದುಷಿ ಪವನ ಬಿ.ಆಚಾರ್ ನಿರ್ದೇಶನದಲ್ಲಿ ವೀಣಾ ವಾದಕರು ಏಕಕಾಲದಲ್ಲಿ 151 ವೀಣೆಗಳನ್ನು ನುಡಿಸಿದರು. ಕಲಾವಿದರು ಒಂದು ಗಂಟೆ ಸತತವಾಗಿ ವೀಣೆಗಳನ್ನು ನುಡಿಸುವ ಮೂಲಕ ನೆರೆದಿದ್ದ ಜನರಿಗೆ ಸಂಗೀತದ ರಸದೌತಣ ಉಣ ಬಡಿಸಿದರು.</p><p>ಏಕಕಾಲದಲ್ಲಿ ಹೊರಹೊಮ್ಮಿದ ವೀಣೆಗಳ ನಾದಸ್ವರ ಸಾಗರದ ಅಲೆಗಳಂತೆ ತೇಲಿಬಂದು ಸಂಗೀತ ಪ್ರಿಯರ ಮೈ ಮನಸ್ಸಿಗೆ ಮುದ ನೀಡಿತು. ಸಾವಿರಾರು ಮಂದಿ ಕಾರ್ಯಕ್ರಮದ ಸವಿ ಸವಿದರು.</p><p>ಕಾರ್ಯಕ್ರಮದಲ್ಲಿ ವಿದುಷಿ ಪವನ ಬಿ. ಆಚಾರ್ ಅವರಿಗೆ ವೀಣಾ ವಿಭೂಷಣೆ ಪ್ರಶಸ್ತಿಯನ್ನು ಕ್ಷೇತ್ರದ ಗೌರವ ಸಲಹೆಗಾರ ಜಿ.ಶಂಕರ್ ಹಾಗೂ ಶಾಲಿನಿ ದಂಪತಿ ವಿತರಿಸಿದರು. ಬಳಿಕ ಮಾತನಾಡಿದ ಜಿ.ಶಂಕರ್, ‘ಕಳೆದ ಬಾರಿ 101 ವೀಣೆಗಳ ವಾದನ ನಡೆದಿತ್ತು. ಈ ಬಾರಿ 151 ಹಾಗೂ ಮುಂದಿನ ಬಾರಿ 200 ವೀಣೆಗಳ ವಾದನ ಆಯೋಜಿಸಲಾಗುವುದು’ ಎಂದರು.</p><p>ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ದೇವಳದ ಅರ್ಚಕ ರಾಘವೇಂದ್ರ ಉಪಾಧ್ಯಾಯ, ವ್ಯವಸ್ಥಾಪಕ ಸತೀಶ್ ಅಮೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>