ಉಚ್ಚಿಲ ಪೆಟ್ರೋಲ್ ಬಂಕ್ನಿಂದ ಪೋಸ್ಟ್ ಆಫೀಸ್ವರೆಗೆ ಎರಡು ಕಿಲೋಮೀಟರ್ ಉದ್ದದ ಸರ್ವಿಸ್ ರಸ್ತೆ ನಿರ್ಮಾಣ ಆಗುತ್ತಿದೆ. ಕಳೆದ ಒಂದು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದು ರಸ್ತೆ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಹೆದ್ದಾರಿಯ ಇಕ್ಕೆಲಗಳಲ್ಲಿ ಅಗೆದಿದ್ದು, ಮಳೆ ನೀರು ಸಾಗುವ ಹಾದಿಯನ್ನು ಮುಚ್ಚಿದ್ದಾರೆ. ಇದರಿಂದ ಹೆದ್ದಾರಿ ಪಕ್ಕದ ನಿವಾಸಿ ಪ್ರಕಾಶ್ ದೇವಾಡಿಗ ಅವರ ಮನೆಗೆ ಮಳೆ ನೀರು ನುಗ್ಗಿದೆ.