<p><strong>ಉಡುಪಿ: </strong>ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>ದೇವರಿಗೆ ನಿತ್ಯದ ಪೂಜೆಗಳು ಎಂದಿನಂತೆ ನಡೆಯಲಿವೆ. ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.</p>.<p><strong>ಸ್ವಾಮೀಜಿ ಕರೆ:</strong>ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸೋಣ. ಭಾನುವಾರ ಮನೆಯಲ್ಲಿದ್ದುಕೊಂಡು ಸೋಂಕು ವ್ಯಾಪಿಸದಂತೆ ತಡೆಯೋಣ ಎಂದು ಸ್ವಾಮೀಜಿ ಕರೆ ನೀಡಿದರು.</p>.<p>ಕೃಷ್ಣಮಠದಲ್ಲಿ ಎಂದಿನಂತೆ ಪೂಜೆಗಳು ನಡೆಯುತ್ತವೆ. ಆದರೆ, ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಕೃಷ್ಣನ ಜಪ ಮಾಡುವ ಮೂಲಕ ರೋಗವನ್ನು ದೂರವಿಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>ದೇವರಿಗೆ ನಿತ್ಯದ ಪೂಜೆಗಳು ಎಂದಿನಂತೆ ನಡೆಯಲಿವೆ. ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.</p>.<p><strong>ಸ್ವಾಮೀಜಿ ಕರೆ:</strong>ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸೋಣ. ಭಾನುವಾರ ಮನೆಯಲ್ಲಿದ್ದುಕೊಂಡು ಸೋಂಕು ವ್ಯಾಪಿಸದಂತೆ ತಡೆಯೋಣ ಎಂದು ಸ್ವಾಮೀಜಿ ಕರೆ ನೀಡಿದರು.</p>.<p>ಕೃಷ್ಣಮಠದಲ್ಲಿ ಎಂದಿನಂತೆ ಪೂಜೆಗಳು ನಡೆಯುತ್ತವೆ. ಆದರೆ, ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಕೃಷ್ಣನ ಜಪ ಮಾಡುವ ಮೂಲಕ ರೋಗವನ್ನು ದೂರವಿಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>