ಉಡುಪಿ: ಯಕ್ಷಗಾನ ಕಲಾರಂಗದ ಸಕ್ರಿಯ, ಹಿರಿಯ ಕಾರ್ಯಕರ್ತರಿಗೆ ವಿಜಯ ಕುಮಾರ್ ಮುದ್ರಾಡಿ ಅವರು ಸ್ಥಾಪಿಸಿರುವ ಯಕ್ಷಚೇತನ ಪ್ರಶಸ್ತಿಯನ್ನು ಈ ಬಾರಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ, ಸಂಸ್ಥೆಯ ಕೋಶಾಧಿಕಾರಿ ಕೆ.ಮನೋಹರ ಅವರಿಗೆ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.