<p><strong>ಉಡುಪಿ</strong>: ಬಿಜೆಪಿ ಸರ್ಕಾರದ ಅವಧಿಯಲ್ಲಿ 1ಕಿ.ಮೀ ಕಾಮಗಾರಿ ಮಾಡಿ 10 ಕಿ.ಮೀ ಕಾಮಗಾರಿಗೆ ಬಿಲ್ ಕೊಟ್ಟಿದ್ದಾರೆ. 24 ಗಂಟೆಯೊಳಗೆ ಕಾಮಗಾರಿ ಮಂಜೂರಾಗಿ ಕೆಲಸವನ್ನೂ ಮುಗಿಸಲಾಗಿದೆ. ವಾಸ್ತವದಲ್ಲಿ ಇದೆಲ್ಲ ಸಾಧ್ಯವೇ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.</p>.<p>ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಸಮರ್ಪಕವಾಗಿ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಮಾತ್ರ ಸರ್ಕಾರ ಬಿಲ್ ಪಾವತಿಸಲಿದೆ. ಬಿಬಿಎಂಪಿ ನಡೆದಿರುವ ಅವ್ಯವಹಾರದ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆಗೆ ಕೈಹಾಕಿಲ್ಲ. ಹಿಂದಿನ ಸರ್ಕಾರದ ಕಾಮಗಾರಿಗಳು ನಡೆಯುತ್ತಿವೆ. ಹೊಸ ಕಾಮಗಾರಿಗಳು ನಡೆಯದಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರಲಿದೆ. ಕಾಂಗ್ರೆಸ್ ಕಮಿಷನ್ ಕೇಳಿರುವ ಯಾವ ಪ್ರಕರಣಗಳು ಇಲ್ಲ ಎಂದು ಸಚಿವೆ ಹೇಳಿದರು.</p>.<p>ಬಿಜೆಪಿ ಸಾಲ ಮಾಡಿ ಹೋಗಿರುವಾಗ ಗುತ್ತಿಗೆದಾರರಿಗೆ ನಾಲ್ಕು ವರ್ಷದ ಬಾಕಿ ಬಿಲ್ ಒಂದೇ ಬಾರಿ ಪಾವತಿಸುವುದು ಹೇಗೆ. ರಾಜ್ಯದ ಬೊಕ್ಕಸದ ಪರಿಸ್ಥಿತಿ ಎಲ್ಲರಿಗೂ ಗೊತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರೆಯಾಗದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲಿದ್ದಾರೆ ಎಂದರು.</p>.<blockquote>ಸಮರ್ಪಕವಾಗಿ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಮಾತ್ರ ಬಿಲ್ ಪಾವತಿ ಬಿಬಿಎಂಪಿ ನಡೆದಿರುವ ಅವ್ಯವಹಾರದ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ ಕಾಂಗ್ರೆಸ್ ಕಮಿಷನ್ ಕೇಳಿರುವ ಯಾವ ಪ್ರಕರಣಗಳು ಇಲ್ಲ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಬಿಜೆಪಿ ಸರ್ಕಾರದ ಅವಧಿಯಲ್ಲಿ 1ಕಿ.ಮೀ ಕಾಮಗಾರಿ ಮಾಡಿ 10 ಕಿ.ಮೀ ಕಾಮಗಾರಿಗೆ ಬಿಲ್ ಕೊಟ್ಟಿದ್ದಾರೆ. 24 ಗಂಟೆಯೊಳಗೆ ಕಾಮಗಾರಿ ಮಂಜೂರಾಗಿ ಕೆಲಸವನ್ನೂ ಮುಗಿಸಲಾಗಿದೆ. ವಾಸ್ತವದಲ್ಲಿ ಇದೆಲ್ಲ ಸಾಧ್ಯವೇ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.</p>.<p>ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಸಮರ್ಪಕವಾಗಿ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಮಾತ್ರ ಸರ್ಕಾರ ಬಿಲ್ ಪಾವತಿಸಲಿದೆ. ಬಿಬಿಎಂಪಿ ನಡೆದಿರುವ ಅವ್ಯವಹಾರದ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆಗೆ ಕೈಹಾಕಿಲ್ಲ. ಹಿಂದಿನ ಸರ್ಕಾರದ ಕಾಮಗಾರಿಗಳು ನಡೆಯುತ್ತಿವೆ. ಹೊಸ ಕಾಮಗಾರಿಗಳು ನಡೆಯದಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರಲಿದೆ. ಕಾಂಗ್ರೆಸ್ ಕಮಿಷನ್ ಕೇಳಿರುವ ಯಾವ ಪ್ರಕರಣಗಳು ಇಲ್ಲ ಎಂದು ಸಚಿವೆ ಹೇಳಿದರು.</p>.<p>ಬಿಜೆಪಿ ಸಾಲ ಮಾಡಿ ಹೋಗಿರುವಾಗ ಗುತ್ತಿಗೆದಾರರಿಗೆ ನಾಲ್ಕು ವರ್ಷದ ಬಾಕಿ ಬಿಲ್ ಒಂದೇ ಬಾರಿ ಪಾವತಿಸುವುದು ಹೇಗೆ. ರಾಜ್ಯದ ಬೊಕ್ಕಸದ ಪರಿಸ್ಥಿತಿ ಎಲ್ಲರಿಗೂ ಗೊತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರೆಯಾಗದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲಿದ್ದಾರೆ ಎಂದರು.</p>.<blockquote>ಸಮರ್ಪಕವಾಗಿ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಮಾತ್ರ ಬಿಲ್ ಪಾವತಿ ಬಿಬಿಎಂಪಿ ನಡೆದಿರುವ ಅವ್ಯವಹಾರದ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ ಕಾಂಗ್ರೆಸ್ ಕಮಿಷನ್ ಕೇಳಿರುವ ಯಾವ ಪ್ರಕರಣಗಳು ಇಲ್ಲ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>