<p><strong>ಉಡುಪಿ: </strong>ಜಿಲ್ಲೆಯಲ್ಲಿ ಇದುವರೆಗೂ 820 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇವರೆಲ್ಲರೂ 14 ದಿನಗಳ ಹೋಂ ಕ್ವಾರಂಟೈನ್ನಲ್ಲಿರಲಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ 207 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಗೆ ಮುಂಬೈ ಸೇರಿದಂತೆ ಇತರೆ ರಾಜ್ಯಗಳಿಂದ ಬರುತ್ತಿರುವವರನ್ನು ಹೋಂ ಕ್ವಾರಂಟೈನ್ ಮಾಡಿ ಮನೆಯನ್ನು ಸೀಲ್ಡೌನ್ ಮಾಡಲಾಗುತ್ತಿದೆ. ಹಾಗಾಗಿ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.</p>.<p>ಹೋಂ ಕ್ವಾರಂಟೈನ್ ಮನೆಗಳಿಗೆ ಯಾರೂ ಭೇಟಿ ನೀಡಬಾರದು. ಹೋಂ ಕ್ವಾರಂಟೈನ್ನಲ್ಲಿರುವವರು ಹೊರಬಂದರೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.</p>.<p><strong>ಇಬ್ಬರಿಗೆ ಕೋವಿಡ್ ಸೋಂಕು:</strong>ಸೋಮವಾರ ಇಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಮುಂಬೈನಿಂದ ಎರಡು ದಿನಗಳ ಹಿಂದೆ ಜಿಲ್ಲೆಗೆ ಬಂದಿದ್ದ ಒಬ್ಬರಲ್ಲಿ ಹಾಗೂ ಸೋಂಕಿತ ಲ್ಯಾಬ್ ಟೆಕ್ನಿಷಿಯನ್ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಇದುವರೆಗೂ 820 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇವರೆಲ್ಲರೂ 14 ದಿನಗಳ ಹೋಂ ಕ್ವಾರಂಟೈನ್ನಲ್ಲಿರಲಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ 207 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಗೆ ಮುಂಬೈ ಸೇರಿದಂತೆ ಇತರೆ ರಾಜ್ಯಗಳಿಂದ ಬರುತ್ತಿರುವವರನ್ನು ಹೋಂ ಕ್ವಾರಂಟೈನ್ ಮಾಡಿ ಮನೆಯನ್ನು ಸೀಲ್ಡೌನ್ ಮಾಡಲಾಗುತ್ತಿದೆ. ಹಾಗಾಗಿ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.</p>.<p>ಹೋಂ ಕ್ವಾರಂಟೈನ್ ಮನೆಗಳಿಗೆ ಯಾರೂ ಭೇಟಿ ನೀಡಬಾರದು. ಹೋಂ ಕ್ವಾರಂಟೈನ್ನಲ್ಲಿರುವವರು ಹೊರಬಂದರೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.</p>.<p><strong>ಇಬ್ಬರಿಗೆ ಕೋವಿಡ್ ಸೋಂಕು:</strong>ಸೋಮವಾರ ಇಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಮುಂಬೈನಿಂದ ಎರಡು ದಿನಗಳ ಹಿಂದೆ ಜಿಲ್ಲೆಗೆ ಬಂದಿದ್ದ ಒಬ್ಬರಲ್ಲಿ ಹಾಗೂ ಸೋಂಕಿತ ಲ್ಯಾಬ್ ಟೆಕ್ನಿಷಿಯನ್ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>