ಬೆಳಿಗ್ಗೆ ನಗರಸಭೆಯ ಸ್ವಚ್ಛತಾ ಕಾರ್ಮಿಕರು ತೊಟ್ಟಿಯಲ್ಲಿ ಕಸ ಸಂಗ್ರಹಿಸಲು ಹೋದಾಗ ಮಗುವಿನ ಅಳುವ ಶಬ್ಧ ಕೇಳಿ ಶಿಶುವನ್ನು ತೊಟ್ಟಿಯಿಂದ ಹೊರತೆಗೆದು ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ನಗರ ಠಾಣೆ ಪೊಲೀಸರು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಗುವನ್ನು ಸಮೀಪದ ಬಿ.ಆರ್.ಶೆಟ್ಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.