<p><strong>ಉಡುಪಿ</strong>: ಹಲವು ದಿನಗಳಿಂದ ಬಿಸಿಲಿನ ವಾತಾವರಣವಿದ್ದರೂ ಹದಗೆಟ್ಟಿರುವ ಸರ್ವಿಸ್ ರಸ್ತೆ ದುರಸ್ತಿಗೆ ಸಂಬಂಧಪಟ್ಟವರು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಉಡುಪಿಯ ಕಿನ್ನಿಮುಲ್ಕಿಯಿಂದ ಕರಾವಳಿ ಬೈಪಾಸ್ವರೆಗೆ ಹಾಗೂ ಕರಾವಳಿ ಬೈಪಾಸ್ನಿಂದ ಕಿನ್ನಿಮುಲ್ಕಿವರೆಗಿನ ಸರ್ವಿಸ್ ರಸ್ತೆ ಸಂಪೂರ್ಣ ಹದಗೆಟ್ಟು ತಿಂಗಳುಗಳೇ ಕಳೆದರೂ ಇನ್ನೂ ದುರಸ್ತಿ ಕಾರ್ಯ ನಡೆದಿಲ್ಲ.</p>.<p>ಅಂಬಲಪಾಡಿಯಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಎಲ್ಲಾ ವಾಹನಗಳು ಈ ಸರ್ವಿಸ್ ರಸ್ತೆಯಲ್ಲೇ ಸಾಗುತ್ತಿವೆ.</p>.<p>ಮಳೆಗಾಲದಲ್ಲಿ ರಸ್ತೆ ಹೊಂಡಗಳಲ್ಲಿ ಮಳೆನೀರು ನಿಂತು ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸಿದ್ದರು. ಈಗ ಮಳೆ ನಿಂತರೂ ವಾಹನಗಳು ಗುಂಡಿಗಳಿಗೆ ಬಿದ್ದು, ತೆವಳಿಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.</p>.<p>ಈ ಸರ್ವಿಸ್ ರಸ್ತೆಗಳಲ್ಲಿ ಬೃಹದಾಕಾರದ ಹೊಂಡಗಳು ನಿರ್ಮಾಣವಾಗಿದ್ದು, ಅವುಗಳಿಗೆ ತೇಪೆ ಕಾರ್ಯ ಮಾಡುವ ಬದಲು ಸಂಬಂಧಪಟ್ಟವರು ದೊಡ್ಡ ದೊಡ್ಡ ಜಲ್ಲಿ ಕಲ್ಲುಗಳನ್ನು ಸುರಿದಿದ್ದಾರೆ. ಇದರಿಂದ ನಿತ್ಯ ದ್ವಿಚಕ್ರವಾಹನ ಸವಾರರು ಆಯತಪ್ಪಿ ಬಿಳುತ್ತಿದ್ದಾರೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.</p>.<p>ಅಂಬಲಪಾಡಿ ಬೈಪಾಸ್ನಲ್ಲಿ ಮೂರು ರಸ್ತೆ ಸೇರುವಲ್ಲಿ ಸರ್ವಿಸ್ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸಬೇಕಾಗಿದೆ.</p>.<p>ಕಿರಿದಾದ ಸರ್ವಿಸ್ ರಸ್ತೆಗಳಲ್ಲಿ ನಿತ್ಯ ಟ್ರಕ್ ಸೇರಿದಂತೆ ಘನವಾಹನಗಳು ಸಂಚರಿಸುತ್ತಿದ್ದು, ರಸ್ತೆ ಹೊಂಡಗಳಿಗೆ ಸುರಿದಿರುವ ದೊಡ್ಡ ಜಲ್ಲಿಕಲ್ಲುಗಳಿಗೆ ಸಿಲುಕಿ ದ್ವಿಚಕ್ರ ವಾಹನ ಸವಾರರು ಅಪಾಯಕ್ಕೊಳಗಾಗುವ ಸಾಧ್ಯತೆ ಇದೆ.</p>.<p>ಕೆಲ ದಿನಗಳ ಹಿಂದೆ ಅಂಬಲಪಾಡಿಯ ಸರ್ವಿಸ್ ರಸ್ತೆಯಲ್ಲಿ ರಸ್ತೆ ಹೊಂಡದಿಂದಾಗಿ ಬೈಕ್ ಮಗುಚಿ, ಸವಾರರೊಬ್ಬರು ಟ್ರಕ್ ಚಕ್ರಗಳ ಅಡಿಗೆ ಬಿದ್ದು ಮೃತಪಟ್ಟಿದ್ದರು. ಆದರೂ ಅಧಿಕಾರಿಗಳಾಗಲಿ, ಮೇಲ್ಸೇತುವೆ ಕಾಮಗಾರಿ ನಡೆಸುವವರಾಗಲಿ ಎಚ್ಚೆತ್ತುಕೊಂಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಸರ್ವಿಸ್ ರಸ್ತೆಯ ಹೊಂಡಗಳಿಗೆ ಜಲ್ಲಿ ಕಲ್ಲುಗಳನ್ನು ಸುರಿದಿರುವುದರಿಂದ ಬಿಸಿಲಿನ ವಾತಾವರಣವಿರುವಾಗ ದೂಳಿನಿಂದ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಈ ಸರ್ವಿಸ್ ರಸ್ತೆಗೆ ಡಾಂಬರು ಹಾಕಬೇಕು. ಹದಗೆಟ್ಟಿರುವ ರಸ್ತೆಯಲ್ಲಿ ರಾಂಗ್ಸೈಡ್ ಸಂಚಾರ ಮಾಡುವವರಿಂದಲೂ ಸಮಸ್ಯೆಗಳು ಉಂಟಾಗುತ್ತಿದ್ದು, ಅವರಿಗೂ ಸಂಬಂಧಪಟ್ಟವರು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಂಗ್ಸೈಡ್ ಸಂಚಾರದಿಂದಲೂ ಸಮಸ್ಯೆ ದ್ವಿಚಕ್ರ ವಾಹನ ಸವಾರರಿಗೆ ನಿತ್ಯ ತೊಂದರೆ</p>.<p><strong>ಹದಗೆಟ್ಟಿರುವ ಸರ್ವಿಸ್ ರಸ್ತೆಯಲ್ಲಿ ವಾಹನಗಳು ತೆವಳಿಕೊಂಡು ಹೋಗಬೇಕಾದ ಕಾರಣ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ. ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ</strong></p><p><strong>- ಪ್ರಶಾಂತ್ ಕಡೇಕಾರ್</strong></p>.<p> <strong>‘ದೊಡ್ಡ ಮಟ್ಟದಲ್ಲಿ ಹೋರಾಟ’ </strong></p><p>ಅಂಬಲಪಾಡಿಯ ಸರ್ವಿಸ್ ರಸ್ತೆ ಹದಗೆಟ್ಟು ತಿಂಗಳುಗಳೇ ಕಳೆದರೂ ಸಂಬಂಧಪಟ್ಟವರು ದುರಸ್ತಿಗೆ ಮುಂದಾಗಿಲ್ಲ ಇನ್ನಾದರೂ ದುರಸ್ತಿಗೆ ಮುಂದಾಗದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ. ಈ ಸರ್ವಿಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿ ಪ್ರಾಣಾಪಾಯವಾಗಿದ್ದರೂ ಸಂಬಂಧಪಟ್ಟವರು ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ರಸ್ತೆ ತೀರಾ ಹದಗೆಟ್ಟಿರುವುದರಿಂದ ಆಂಬುಲೆನ್ಸ್ಗಳಿಗೂ ಸಂಚರಿಸಲು ಸಮಸ್ಯೆಯಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಹಲವು ದಿನಗಳಿಂದ ಬಿಸಿಲಿನ ವಾತಾವರಣವಿದ್ದರೂ ಹದಗೆಟ್ಟಿರುವ ಸರ್ವಿಸ್ ರಸ್ತೆ ದುರಸ್ತಿಗೆ ಸಂಬಂಧಪಟ್ಟವರು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಉಡುಪಿಯ ಕಿನ್ನಿಮುಲ್ಕಿಯಿಂದ ಕರಾವಳಿ ಬೈಪಾಸ್ವರೆಗೆ ಹಾಗೂ ಕರಾವಳಿ ಬೈಪಾಸ್ನಿಂದ ಕಿನ್ನಿಮುಲ್ಕಿವರೆಗಿನ ಸರ್ವಿಸ್ ರಸ್ತೆ ಸಂಪೂರ್ಣ ಹದಗೆಟ್ಟು ತಿಂಗಳುಗಳೇ ಕಳೆದರೂ ಇನ್ನೂ ದುರಸ್ತಿ ಕಾರ್ಯ ನಡೆದಿಲ್ಲ.</p>.<p>ಅಂಬಲಪಾಡಿಯಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಎಲ್ಲಾ ವಾಹನಗಳು ಈ ಸರ್ವಿಸ್ ರಸ್ತೆಯಲ್ಲೇ ಸಾಗುತ್ತಿವೆ.</p>.<p>ಮಳೆಗಾಲದಲ್ಲಿ ರಸ್ತೆ ಹೊಂಡಗಳಲ್ಲಿ ಮಳೆನೀರು ನಿಂತು ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸಿದ್ದರು. ಈಗ ಮಳೆ ನಿಂತರೂ ವಾಹನಗಳು ಗುಂಡಿಗಳಿಗೆ ಬಿದ್ದು, ತೆವಳಿಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.</p>.<p>ಈ ಸರ್ವಿಸ್ ರಸ್ತೆಗಳಲ್ಲಿ ಬೃಹದಾಕಾರದ ಹೊಂಡಗಳು ನಿರ್ಮಾಣವಾಗಿದ್ದು, ಅವುಗಳಿಗೆ ತೇಪೆ ಕಾರ್ಯ ಮಾಡುವ ಬದಲು ಸಂಬಂಧಪಟ್ಟವರು ದೊಡ್ಡ ದೊಡ್ಡ ಜಲ್ಲಿ ಕಲ್ಲುಗಳನ್ನು ಸುರಿದಿದ್ದಾರೆ. ಇದರಿಂದ ನಿತ್ಯ ದ್ವಿಚಕ್ರವಾಹನ ಸವಾರರು ಆಯತಪ್ಪಿ ಬಿಳುತ್ತಿದ್ದಾರೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.</p>.<p>ಅಂಬಲಪಾಡಿ ಬೈಪಾಸ್ನಲ್ಲಿ ಮೂರು ರಸ್ತೆ ಸೇರುವಲ್ಲಿ ಸರ್ವಿಸ್ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸಬೇಕಾಗಿದೆ.</p>.<p>ಕಿರಿದಾದ ಸರ್ವಿಸ್ ರಸ್ತೆಗಳಲ್ಲಿ ನಿತ್ಯ ಟ್ರಕ್ ಸೇರಿದಂತೆ ಘನವಾಹನಗಳು ಸಂಚರಿಸುತ್ತಿದ್ದು, ರಸ್ತೆ ಹೊಂಡಗಳಿಗೆ ಸುರಿದಿರುವ ದೊಡ್ಡ ಜಲ್ಲಿಕಲ್ಲುಗಳಿಗೆ ಸಿಲುಕಿ ದ್ವಿಚಕ್ರ ವಾಹನ ಸವಾರರು ಅಪಾಯಕ್ಕೊಳಗಾಗುವ ಸಾಧ್ಯತೆ ಇದೆ.</p>.<p>ಕೆಲ ದಿನಗಳ ಹಿಂದೆ ಅಂಬಲಪಾಡಿಯ ಸರ್ವಿಸ್ ರಸ್ತೆಯಲ್ಲಿ ರಸ್ತೆ ಹೊಂಡದಿಂದಾಗಿ ಬೈಕ್ ಮಗುಚಿ, ಸವಾರರೊಬ್ಬರು ಟ್ರಕ್ ಚಕ್ರಗಳ ಅಡಿಗೆ ಬಿದ್ದು ಮೃತಪಟ್ಟಿದ್ದರು. ಆದರೂ ಅಧಿಕಾರಿಗಳಾಗಲಿ, ಮೇಲ್ಸೇತುವೆ ಕಾಮಗಾರಿ ನಡೆಸುವವರಾಗಲಿ ಎಚ್ಚೆತ್ತುಕೊಂಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಸರ್ವಿಸ್ ರಸ್ತೆಯ ಹೊಂಡಗಳಿಗೆ ಜಲ್ಲಿ ಕಲ್ಲುಗಳನ್ನು ಸುರಿದಿರುವುದರಿಂದ ಬಿಸಿಲಿನ ವಾತಾವರಣವಿರುವಾಗ ದೂಳಿನಿಂದ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಈ ಸರ್ವಿಸ್ ರಸ್ತೆಗೆ ಡಾಂಬರು ಹಾಕಬೇಕು. ಹದಗೆಟ್ಟಿರುವ ರಸ್ತೆಯಲ್ಲಿ ರಾಂಗ್ಸೈಡ್ ಸಂಚಾರ ಮಾಡುವವರಿಂದಲೂ ಸಮಸ್ಯೆಗಳು ಉಂಟಾಗುತ್ತಿದ್ದು, ಅವರಿಗೂ ಸಂಬಂಧಪಟ್ಟವರು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಂಗ್ಸೈಡ್ ಸಂಚಾರದಿಂದಲೂ ಸಮಸ್ಯೆ ದ್ವಿಚಕ್ರ ವಾಹನ ಸವಾರರಿಗೆ ನಿತ್ಯ ತೊಂದರೆ</p>.<p><strong>ಹದಗೆಟ್ಟಿರುವ ಸರ್ವಿಸ್ ರಸ್ತೆಯಲ್ಲಿ ವಾಹನಗಳು ತೆವಳಿಕೊಂಡು ಹೋಗಬೇಕಾದ ಕಾರಣ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ. ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ</strong></p><p><strong>- ಪ್ರಶಾಂತ್ ಕಡೇಕಾರ್</strong></p>.<p> <strong>‘ದೊಡ್ಡ ಮಟ್ಟದಲ್ಲಿ ಹೋರಾಟ’ </strong></p><p>ಅಂಬಲಪಾಡಿಯ ಸರ್ವಿಸ್ ರಸ್ತೆ ಹದಗೆಟ್ಟು ತಿಂಗಳುಗಳೇ ಕಳೆದರೂ ಸಂಬಂಧಪಟ್ಟವರು ದುರಸ್ತಿಗೆ ಮುಂದಾಗಿಲ್ಲ ಇನ್ನಾದರೂ ದುರಸ್ತಿಗೆ ಮುಂದಾಗದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ. ಈ ಸರ್ವಿಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿ ಪ್ರಾಣಾಪಾಯವಾಗಿದ್ದರೂ ಸಂಬಂಧಪಟ್ಟವರು ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ರಸ್ತೆ ತೀರಾ ಹದಗೆಟ್ಟಿರುವುದರಿಂದ ಆಂಬುಲೆನ್ಸ್ಗಳಿಗೂ ಸಂಚರಿಸಲು ಸಮಸ್ಯೆಯಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>