ಉಡುಪಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಖಾಸಗಿ, ಕೆಎಸ್ಆರ್ಟಿಸಿ ಹಾಗೂ ಆಟೊಗಳ ಸಂಚಾರ ಎಂದಿನಂತಿದೆ. ವ್ಯಾಪಾರ ವಹಿವಾಟು ನಡೆಯುತ್ತಿದೆ. ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಬಂದ್ಗೆ ಬೆಂಬಲ ನೀಡಿದೆ. ಹಲವು ಸಂಘಟನೆಗಳು ಬಂದ್ನಲ್ಲಿ ಭಾಗವಹಿಸಿವೆ.