ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ ಅಲ್ಲಿಯವರೆಗೂ ದೇಶ, ಪ್ರಜೆಗಳು, ನಾಡು ಹಾಗೂ ಕುಟುಂಬಗಳ ಅಭಿವೃದ್ಧಿ ನಿರಂತರವಾಗಿರುತ್ತದೆ. ಇದಕ್ಕೆ ಇಂದಿನ ಭಾರತವೇ ಸಾಕ್ಷಿ. ಸ್ವಾತಂತ್ರ ಹೋರಾಟಗಾರರು ರಕ್ತ ಹರಿಸಿ ಪಡೆದ ಸ್ವಾತಂತ್ರ್ಯವನ್ನು ಕಾಪಾಡುವ ಅತ್ಯಂತ ಗಂಭೀರ ಜವಾಬ್ದಾರಿ ನಮ್ಮದಾಗಿದೆ. ಪ್ರಪಂಚದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಸಮರ್ಥ ನಾಯಕರ ಆಯ್ಕೆಯಿಂದ ಹಿಡಿದು, ನಾಯಕರು ಕರ್ತವ್ಯವನ್ನು ಪಾಲಿಸುವಂತೆ ನೋಡಿಕೊಳ್ಳುವುದು ಪ್ರಜೆಗಳ ಕರ್ತವ್ಯ.