ಉಡುಪಿ: ಮಲ್ಪೆ ಬೀಚ್ನಲ್ಲಿ ಈಜುವಾಗ ಸಮುದ್ರ ಪಾಲಾಗಿದ್ದ ಕೊಡಗು ಜಿಲ್ಲೆಯ ಅಮ್ಮತ್ತಿಯ ಯು.ಜೆ.ದೇಚಮ್ಮ (20) ಶವ ಸೋಮವಾರ ಸಮೀಪದ ಸೀವಾಕ್ ಪ್ರದೇಶದಲ್ಲಿ ಪತ್ತೆಯಾಗಿದೆ.
ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ವಿವರ:ಮೈಸೂರಿನ ಎಂ.ಯು.ಶೈನಿ, ನವ್ಯ ಮಂದಣ್ಣ, ನಿಖಿಲ್ ಗೌಡ, ದೇಚಮ್ಮ ಶನಿವಾರ ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜುವಾಗ ಎಲ್ಲರೂ ನೀರಿನ ಸೆಳೆತಕ್ಕೆ ಸಿಲುಕಿದ್ದರು. ಕೂಡಲೇ ಮೀನುಗಾರರು ಮೂವರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದರು. ಆದರೆ, ದೇಚಮ್ಮ ಮಾತ್ರ ನಾಪತ್ತೆಯಾಗಿದ್ದರು.