ಉಡುಪಿಯಿಂದ ಕುಂದಾಪುರ, ಹೆಬ್ರಿ, ಕಾರ್ಕಳ, ಕಾಪು ಮಲ್ಲಾರು, ಬೈಂದೂರು, ಮಣಿಪಾಲ, ಬಾರ್ಕೂರು ಸಿದ್ದಾಪುರ, ಅಲೆವೂರು ಮಲ್ಪೆ, ಹೂಡೆ ಹಾಗೂ ಬ್ರಹ್ಮಾವರ ಭಾಗಕ್ಕೆ 20 ಕೆಎಸ್ಆರ್ಟಿಸಿ ಬಸ್ಗಳು ಹಾಗೂ 16 ಖಾಸಗಿ ಬಸ್ಗಳು ಸಂಚರಿಸಲಿವೆ. ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ಓಡಾಡಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.