<p><strong>ಉಡುಪಿ:</strong> ನಗರವು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದರೂ ಸಮರ್ಪಕ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಜನರು ಎಲ್ಲೆಂದರೆ ವಾಹನಗಳನ್ನು ನಿಲ್ಲಿಸುವುದರಿಂದ ನಗರ ವ್ಯಾಪ್ತಿಯಲ್ಲಿ ವಾಹನ ದಟ್ಟಣೆಯೂ ಉಂಟಾಗುತ್ತಿದೆ.</p>.<p>ನಗರಸಭೆ ಮುಂಭಾಗದ ರಸ್ತೆ, ಸರ್ವಿಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಉಳಿದ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ.</p>.<p>ಕಲ್ಸಂಕದಲ್ಲಿ ಸಿಗ್ನಲ್ ದೀಪ ಅಳವಡಿಸಿದರೂ ಫ್ರೀ ಲೆಫ್ಟ್ನಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಗುಂಡಿಬೈಲು ಮೊದಲಾದೆಡೆ ತೆರಳುವವರಿಗೆ ಸಮಸ್ಯೆಯಾಗುತ್ತಿದೆ. ಫ್ರೀ ಲಿಫ್ಟ್ ಸಮೀಪದ ಅಂಗಡಿಗಳ ಮುಂಭಾಗದಲ್ಲಿ ಕೆಲವರು ಕಾರು ಮೊದಲಾದ ವಾಹನಗಳನ್ನು ನಿಲ್ಲಿಸುವುದರಿಂದ ಫ್ರೀ ಲೆಫ್ಟ್ನಲ್ಲಿ ತೆರಳಲು ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ.</p>.<p>ವಾಣಿಜ್ಯ ಸಂಸ್ಥೆಗಳು, ಅಂಗಡಿಗಳ ಮುಂಭಾಗದಲ್ಲಿ ಜನರು ವಾಹನ ನಿಲ್ಲಿಸುವುದರಿಂದಲೂ ಸಮಸ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಜನರು.</p>.<p>ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯೂ ವಾಹನ ಪಾರ್ಕಿಂಗ್ಗೆ ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ದ್ವಿಚಕ್ರ ವಾಹನಗಳನ್ನು ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿಯಲ್ಲೆ ಜನರು ನಿಲ್ಲಿಸುತ್ತಿದ್ದಾರೆ.</p>.<p>ಸರ್ವಿಸ್ ಬಸ್ ನಿಲ್ದಾಣದ ಬಳಿಯ ಕೆಲವೆಡೆ ವಾಹನಗಳನ್ನು ನಿಲ್ಲಿಸಿದರೆ ವಾಣಿಜ್ಯ ಸಂಸ್ಥೆಗಳ ಭದ್ರತಾ ಸಿಬ್ಬಂದಿ ಬಂದು ಬೆದರಿಸುತ್ತಾರೆ ಎಂದೂ ಸಾರ್ವಜನಿಕರು ದೂರಿದ್ದಾರೆ.</p>.<p>ನಗರಸಭೆಯ ಮುಂಭಾಗದ ರಸ್ತೆಯಲ್ಲೂ ದ್ವಿಚಕ್ರ ವಾಹನ, ಕಾರುಗಳನ್ನು ನಿಲ್ಲಿಸುವುದರಿಂದ ಅಲ್ಲೂ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ ಎಂದೂ ಹೇಳುತ್ತಾರೆ.</p>.<p>ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ವಿಶ್ವೇಶ್ವರಯ್ಯ ಕಟ್ಟಡದ ಜಾಗದಲ್ಲಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ನಗರಸಭೆ ಆಡಳಿತ ಮಂಡಳಿ ಇದ್ದಾಗ ಸಂಬಂಧಪಟ್ಟವರು ಹೇಳುತ್ತಿದ್ದರೂ ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುತ್ತಾರೆ ನಗರವಾಸಿಗಳು.</p>.<p>ನಗರದ ಬನ್ನಂಜೆಯಿಂದ ಕಲ್ಸಂಕದ ವರೆಗೂ ರಸ್ತೆ ಬದಿಯಲ್ಲಿ ಕಾರುಗಳು ಸೇರಿದಂತೆ ವಿವಿಧ ವಾಹನಗಳನ್ನು ನಿಲ್ಲಿಸುವುದಕ್ಕೆ ಸಂಬಂಧಪಟ್ಟವರು ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.</p>.<p> <strong>‘ಪಾರ್ಕಿಂಗ್ಗೆ ಜಾಗ ಪರಿಶೀಲಿಸುತ್ತಿದ್ದೇವೆ’</strong> </p><p>ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣವಿದ್ದ ಜಾಗದಲ್ಲಿ ರಸ್ತೆ ಸಣ್ಣದಿದೆ ಮತ್ತುಅಲ್ಲಿ ದೈವಸ್ಥಾನವೂ ಇರುವುದರಿಂದ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಈ ಕಾರಣಕ್ಕೆ ನಗರದಲ್ಲಿ ಬೇರೆ ಜಾಗ ಪರಿಶೀಲಿಸುತ್ತಿದ್ದೇವೆ ಎಂದು ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ತಿಳಿಸಿದರು. ಪಾರ್ಕಿಂಗ್ಗೆ ಜಾಗ ಇಡದ 58 ಕಟ್ಟಡಗಳ ಪರಿಶೀಲನೆಯನ್ನು ಹಿಂದೆ ನಗರಸಭೆ ಅಧಿಕಾರಿಗಳು ಎಂಜಿನಿಯರ್ಗಳು ನಡೆಸಿದ್ದರು. ಆಗ ಆ ಕಟ್ಟಡಗಳು 2009ಕ್ಕಿಂತ ಮೊದಲು ನಿರ್ಮಾಣಗೊಂಡಿರುವುದಾಗಿ ತಿಳಿದು ಬಂದಿತ್ತು. 2009 ನಂತರ ನಿರ್ಮಿಸುವ ಕಟ್ಟಡಗಳಿಗೆ ಪಾರ್ಕಿಂಗ್ ಕಡ್ಡಾಯವಾಗಿದೆ ಎಂದಿದ್ದಾರೆ. ವಾಹನ ಪಾರ್ಕಿಂಗ್ ವ್ಯವಸ್ಥೆಇಲ್ಲದ ಕಟ್ಟಡಗಳಿಗೆ ಡೋರ್ ನಂಬರ್ ನೀಡಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ಕುರಿತು ಪರಿಶೀಲಿಸಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿದ್ದರೆ ಆ ಕಟ್ಟಡಗಳ ಡೋರ್ ನಂಬರ್ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಗರವು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದರೂ ಸಮರ್ಪಕ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಜನರು ಎಲ್ಲೆಂದರೆ ವಾಹನಗಳನ್ನು ನಿಲ್ಲಿಸುವುದರಿಂದ ನಗರ ವ್ಯಾಪ್ತಿಯಲ್ಲಿ ವಾಹನ ದಟ್ಟಣೆಯೂ ಉಂಟಾಗುತ್ತಿದೆ.</p>.<p>ನಗರಸಭೆ ಮುಂಭಾಗದ ರಸ್ತೆ, ಸರ್ವಿಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಉಳಿದ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ.</p>.<p>ಕಲ್ಸಂಕದಲ್ಲಿ ಸಿಗ್ನಲ್ ದೀಪ ಅಳವಡಿಸಿದರೂ ಫ್ರೀ ಲೆಫ್ಟ್ನಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಗುಂಡಿಬೈಲು ಮೊದಲಾದೆಡೆ ತೆರಳುವವರಿಗೆ ಸಮಸ್ಯೆಯಾಗುತ್ತಿದೆ. ಫ್ರೀ ಲಿಫ್ಟ್ ಸಮೀಪದ ಅಂಗಡಿಗಳ ಮುಂಭಾಗದಲ್ಲಿ ಕೆಲವರು ಕಾರು ಮೊದಲಾದ ವಾಹನಗಳನ್ನು ನಿಲ್ಲಿಸುವುದರಿಂದ ಫ್ರೀ ಲೆಫ್ಟ್ನಲ್ಲಿ ತೆರಳಲು ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ.</p>.<p>ವಾಣಿಜ್ಯ ಸಂಸ್ಥೆಗಳು, ಅಂಗಡಿಗಳ ಮುಂಭಾಗದಲ್ಲಿ ಜನರು ವಾಹನ ನಿಲ್ಲಿಸುವುದರಿಂದಲೂ ಸಮಸ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಜನರು.</p>.<p>ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯೂ ವಾಹನ ಪಾರ್ಕಿಂಗ್ಗೆ ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ದ್ವಿಚಕ್ರ ವಾಹನಗಳನ್ನು ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿಯಲ್ಲೆ ಜನರು ನಿಲ್ಲಿಸುತ್ತಿದ್ದಾರೆ.</p>.<p>ಸರ್ವಿಸ್ ಬಸ್ ನಿಲ್ದಾಣದ ಬಳಿಯ ಕೆಲವೆಡೆ ವಾಹನಗಳನ್ನು ನಿಲ್ಲಿಸಿದರೆ ವಾಣಿಜ್ಯ ಸಂಸ್ಥೆಗಳ ಭದ್ರತಾ ಸಿಬ್ಬಂದಿ ಬಂದು ಬೆದರಿಸುತ್ತಾರೆ ಎಂದೂ ಸಾರ್ವಜನಿಕರು ದೂರಿದ್ದಾರೆ.</p>.<p>ನಗರಸಭೆಯ ಮುಂಭಾಗದ ರಸ್ತೆಯಲ್ಲೂ ದ್ವಿಚಕ್ರ ವಾಹನ, ಕಾರುಗಳನ್ನು ನಿಲ್ಲಿಸುವುದರಿಂದ ಅಲ್ಲೂ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ ಎಂದೂ ಹೇಳುತ್ತಾರೆ.</p>.<p>ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ವಿಶ್ವೇಶ್ವರಯ್ಯ ಕಟ್ಟಡದ ಜಾಗದಲ್ಲಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ನಗರಸಭೆ ಆಡಳಿತ ಮಂಡಳಿ ಇದ್ದಾಗ ಸಂಬಂಧಪಟ್ಟವರು ಹೇಳುತ್ತಿದ್ದರೂ ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುತ್ತಾರೆ ನಗರವಾಸಿಗಳು.</p>.<p>ನಗರದ ಬನ್ನಂಜೆಯಿಂದ ಕಲ್ಸಂಕದ ವರೆಗೂ ರಸ್ತೆ ಬದಿಯಲ್ಲಿ ಕಾರುಗಳು ಸೇರಿದಂತೆ ವಿವಿಧ ವಾಹನಗಳನ್ನು ನಿಲ್ಲಿಸುವುದಕ್ಕೆ ಸಂಬಂಧಪಟ್ಟವರು ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.</p>.<p> <strong>‘ಪಾರ್ಕಿಂಗ್ಗೆ ಜಾಗ ಪರಿಶೀಲಿಸುತ್ತಿದ್ದೇವೆ’</strong> </p><p>ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣವಿದ್ದ ಜಾಗದಲ್ಲಿ ರಸ್ತೆ ಸಣ್ಣದಿದೆ ಮತ್ತುಅಲ್ಲಿ ದೈವಸ್ಥಾನವೂ ಇರುವುದರಿಂದ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಈ ಕಾರಣಕ್ಕೆ ನಗರದಲ್ಲಿ ಬೇರೆ ಜಾಗ ಪರಿಶೀಲಿಸುತ್ತಿದ್ದೇವೆ ಎಂದು ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ತಿಳಿಸಿದರು. ಪಾರ್ಕಿಂಗ್ಗೆ ಜಾಗ ಇಡದ 58 ಕಟ್ಟಡಗಳ ಪರಿಶೀಲನೆಯನ್ನು ಹಿಂದೆ ನಗರಸಭೆ ಅಧಿಕಾರಿಗಳು ಎಂಜಿನಿಯರ್ಗಳು ನಡೆಸಿದ್ದರು. ಆಗ ಆ ಕಟ್ಟಡಗಳು 2009ಕ್ಕಿಂತ ಮೊದಲು ನಿರ್ಮಾಣಗೊಂಡಿರುವುದಾಗಿ ತಿಳಿದು ಬಂದಿತ್ತು. 2009 ನಂತರ ನಿರ್ಮಿಸುವ ಕಟ್ಟಡಗಳಿಗೆ ಪಾರ್ಕಿಂಗ್ ಕಡ್ಡಾಯವಾಗಿದೆ ಎಂದಿದ್ದಾರೆ. ವಾಹನ ಪಾರ್ಕಿಂಗ್ ವ್ಯವಸ್ಥೆಇಲ್ಲದ ಕಟ್ಟಡಗಳಿಗೆ ಡೋರ್ ನಂಬರ್ ನೀಡಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ಕುರಿತು ಪರಿಶೀಲಿಸಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿದ್ದರೆ ಆ ಕಟ್ಟಡಗಳ ಡೋರ್ ನಂಬರ್ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>