<p><strong>ಉಡುಪಿ:</strong> ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ಸರ್ಕಲ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಪಂಚರಾಜ್ಯಗಳಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ ಎಂದರು.</p>.<p>ಹಿಂದೆಂದೂ ಇಷ್ಟು ಪ್ರಮಾಣದಲ್ಲಿ ದರ ಏರಿಕೆ ಆಗಿರಲಿಲ್ಲ. ಬೆಲೆ ಏರಿಕೆಯಾಗದಂತೆ ಹಿಂದಿನ ಸರ್ಕಾರಗಳು ಆಡಳಿತದಲ್ಲಿ ಸಮತೋಲನ ಕಾಯ್ದುಕೊಂಡಿದ್ದವು ಎಂದು ಹೇಳಿದರು.</p>.<p>ವಿದೇಶಾಂಗ ನೀತಿಯಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದರಿಂದ ದಿನದಿಂದ ದಿನಕ್ಕೆ ದಿನಬಳಕೆಯ ಸಾಮಗ್ರಿಗಳ ದರ ಏರಿಕೆಯಾಗುತ್ತಿದೆ. ಅಡುಗೆ ಅನಿಲದ ದರ ಏರಿಕೆಯನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.</p>.<p>ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಅಲಭ್ಯತೆ ಹಾಗೂ ದರ ಏರಿಕೆಯಿಂದ ಹಲವು ಹೋಟೆಲ್ಗಳು ಬಾಗಿಲು ಮುಚ್ಚದ್ದು, ಅದರಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಬಿಜೆಪಿಯು ಪೊಳ್ಳು ಭರವಸೆಗಳು ಹಾಗೂ ಕುಟಿಲ ತಂತ್ರದಿಂದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿರುವುದರಿಂದ ಕೇವಲ ಹೋಟೆಲ್ ಮಾಲೀಕರು ಮಾತ್ರ ಸಂಕಷ್ಟ ಅನುಭವಿಸುವುದಲ್ಲ. ಜನರಿಗೂ ಅದರ ಬಿಸಿ ತಟ್ಟುತ್ತಿದೆ. ಹೋಟೆಲ್ಗಳಲ್ಲಿ ಆಹಾರ ಪದಾರ್ಥಗಳ ದರ ಏರಿಕೆಯಾಗಲಿದೆ ಎಂದರು.</p>.<p>ಅಡುಗೆ ಅನಿಲ ಸಮಸ್ಯೆಯಿಂದಾಗಿ ಉಡುಪಿಯಲ್ಲಿ ಸುಮಾರು 53 ಹೋಟೆಲ್ಗಳು ಬಂದ್ ಆಗಿವೆ. ಕೇಂದ್ರ ಸರ್ಕಾರವು ಉದ್ಯಮಿಗಳಿಗೆ ಅನುಕೂಲವಾಗಲು ದರ ಏರಿಕೆ ಮಾಡುತ್ತದೆ ಎಂದು ಆರೋಪಿಸಿದರು.</p>.<p>ಸುರಯ್ಯ ಅಂಜುಂ ಮಾತನಾಡಿ, ಕಚ್ಚಾತೈಲದ ಬೆಲೆ ಕಡಿಮೆಯಾಗಿದ್ದಾಗ ಜನರಿಗೆ ಅದರ ಪ್ರಯೋಜನ ಸಿಕ್ಕಿಲ್ಲ. ಈಗ ಹೆಚ್ಚಾದಾಗ ಅದರ ಹೊರೆಯನ್ನು ಜನರ ಮೇಲೆ ಹೊರಿಸಲಾಗುತ್ತಿದೆ ಎಂದರು.</p>.<p>ಪ್ರಮುಖರಾದ ನಾಗೇಶ್ ಉದ್ಯಾವರ, ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-29-1562254646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ಸರ್ಕಲ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಪಂಚರಾಜ್ಯಗಳಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ ಎಂದರು.</p>.<p>ಹಿಂದೆಂದೂ ಇಷ್ಟು ಪ್ರಮಾಣದಲ್ಲಿ ದರ ಏರಿಕೆ ಆಗಿರಲಿಲ್ಲ. ಬೆಲೆ ಏರಿಕೆಯಾಗದಂತೆ ಹಿಂದಿನ ಸರ್ಕಾರಗಳು ಆಡಳಿತದಲ್ಲಿ ಸಮತೋಲನ ಕಾಯ್ದುಕೊಂಡಿದ್ದವು ಎಂದು ಹೇಳಿದರು.</p>.<p>ವಿದೇಶಾಂಗ ನೀತಿಯಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದರಿಂದ ದಿನದಿಂದ ದಿನಕ್ಕೆ ದಿನಬಳಕೆಯ ಸಾಮಗ್ರಿಗಳ ದರ ಏರಿಕೆಯಾಗುತ್ತಿದೆ. ಅಡುಗೆ ಅನಿಲದ ದರ ಏರಿಕೆಯನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.</p>.<p>ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಅಲಭ್ಯತೆ ಹಾಗೂ ದರ ಏರಿಕೆಯಿಂದ ಹಲವು ಹೋಟೆಲ್ಗಳು ಬಾಗಿಲು ಮುಚ್ಚದ್ದು, ಅದರಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಬಿಜೆಪಿಯು ಪೊಳ್ಳು ಭರವಸೆಗಳು ಹಾಗೂ ಕುಟಿಲ ತಂತ್ರದಿಂದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿರುವುದರಿಂದ ಕೇವಲ ಹೋಟೆಲ್ ಮಾಲೀಕರು ಮಾತ್ರ ಸಂಕಷ್ಟ ಅನುಭವಿಸುವುದಲ್ಲ. ಜನರಿಗೂ ಅದರ ಬಿಸಿ ತಟ್ಟುತ್ತಿದೆ. ಹೋಟೆಲ್ಗಳಲ್ಲಿ ಆಹಾರ ಪದಾರ್ಥಗಳ ದರ ಏರಿಕೆಯಾಗಲಿದೆ ಎಂದರು.</p>.<p>ಅಡುಗೆ ಅನಿಲ ಸಮಸ್ಯೆಯಿಂದಾಗಿ ಉಡುಪಿಯಲ್ಲಿ ಸುಮಾರು 53 ಹೋಟೆಲ್ಗಳು ಬಂದ್ ಆಗಿವೆ. ಕೇಂದ್ರ ಸರ್ಕಾರವು ಉದ್ಯಮಿಗಳಿಗೆ ಅನುಕೂಲವಾಗಲು ದರ ಏರಿಕೆ ಮಾಡುತ್ತದೆ ಎಂದು ಆರೋಪಿಸಿದರು.</p>.<p>ಸುರಯ್ಯ ಅಂಜುಂ ಮಾತನಾಡಿ, ಕಚ್ಚಾತೈಲದ ಬೆಲೆ ಕಡಿಮೆಯಾಗಿದ್ದಾಗ ಜನರಿಗೆ ಅದರ ಪ್ರಯೋಜನ ಸಿಕ್ಕಿಲ್ಲ. ಈಗ ಹೆಚ್ಚಾದಾಗ ಅದರ ಹೊರೆಯನ್ನು ಜನರ ಮೇಲೆ ಹೊರಿಸಲಾಗುತ್ತಿದೆ ಎಂದರು.</p>.<p>ಪ್ರಮುಖರಾದ ನಾಗೇಶ್ ಉದ್ಯಾವರ, ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-29-1562254646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>