ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಲಸಿಕೆಯ ಬಗ್ಗೆ ಎದ್ದಿರುವ ಅನುಮಾನ ನಿವಾರಣೆಯಾಗಬೇಕು, ಎಲ್ಲ ಅಧಿಕಾರಿಗಳೆಲ್ಲರೂ ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಮೊದಲು ಮೇಲಧಿಕಾರಿಗಳು ಲಸಿಕೆ ಹಾಕಿಸಿಕೊಂಡಿದ್ದೇವೆ. ಮೂರು ದಿನ ಜಿಲ್ಲೆಯಾದ್ಯಂತ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, 4,040 ಮಂದಿಗೆ ಲಸಿಕೆ ಹಾಕಲಾಗುತ್ತಿದ್ದು, ಶೇ 100 ಗುರಿ ಸಾಧಿಸುವ ವಿಶ್ವಾಸವಿದೆ. ಆಯಾ ತಾಲ್ಲೂಕುಗಳಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ಗಳು ಮೊದಲು ಲಸಿಕೆ ಪಡೆಯಲಿದ್ದಾರೆ ಎಂದರು.