<p><strong>ಉಡುಪಿ: </strong>ಕೆಲವು ಕಿಡಿಗೇಡಿಗಳು ಮಂಬೈನಲ್ಲಿ ಕುಳಿತು ಕರೆ ಮಾಡಿ ಡಾನ್ ರೀತಿ ಮಾತನಾಡುತ್ತಿದ್ದಾರೆ. ಜಿಲ್ಲಾಡಳಿತದ ಮುಂದೆ ಯಾವ ಡಾನ್ಗಳ ಆಟವೂ ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.</p>.<p>ಕೆಲವರು ಸುಖಾಸುಮ್ಮನೆ ಕರೆ ಮಾಡಿ ಆಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಇಂತಹ ಕೃತ್ಯಗಳು ಮತ್ತೆ ಮರುಕಳಿಸಿದರೆ ಮುಲಾಜಿಲ್ಲದೆ ಜೈಲಿಗೆ ಹಾಕಲಾಗುವುದು. ಬಾಂಬೆಯಲ್ಲಿದ್ದರೂ ಅವರನ್ನು ಕರೆಸಿಕೊಳ್ಳುವುದು ಜಿಲ್ಲಾಡಳಿತಕ್ಕೆ ಗೊತ್ತಿದೆ ಎಂದರು.</p>.<p>‘ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಮೂರು ತಿಂಗಳಿನಿಂದ ಹಗಲಿರುಳು ಶ್ರಮಿಸುತ್ತಿದೆ. ಆದರೂ, ಜಿಲ್ಲಾಧಿಕಾರಿ, ಎಸ್ಪಿ, ಎಸಿ, ಎಂಪಿ ಎಂಎಲ್ಎಗಳಿಗೆ ನಿಂಧಿಸುತ್ತಿದ್ದು, ಸುಮ್ಮನಿರಲು ಸಾಧ್ಯವಿಲ್ಲ. ಎಷ್ಟೆ ದೊಡ್ಡ ವ್ಯಕ್ತಿಯಾದರೂ ಜೈಲಿಗೆ ಹಾಕುತ್ತೇನೆ’ ಎಂದು ಖಡಕ್ ಎಚ್ಚರಿಕೆ ನೀಡಿದರು.</p>.<p>ಕೊರೊನಾ ವಿರುದ್ಧದ ಸಮರ ನಿರಂತರವಾಗಿ ಮುಂದುವರಿಯಲಿದೆ. ಇನ್ನೂ 500 ಪ್ರಕರಣಗಳಾದರೂ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಶಕ್ತವಾಗಿದೆ. ಆರೋಗ್ಯಕರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು. ಆದರೆ, ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.</p>.<p><strong>ಊಟ ತಿಂಡಿ ಕಳಿಸಬೇಡಿ:</strong>ಕ್ವಾರಂಟೈನ್ನಲ್ಲಿದ್ದವರಿಗೆ ಮನೆಯಿಂದ ಊಟ, ತಿಂಡಿ, ಬಟ್ಟೆ ಕಳಿಸುವಂತಿಲ್ಲ. ನೀವು ಕಳಿಸುವ ವಸ್ತುಗಳಿಂದಲೇ ನಿಮ್ಮ ಮನೆಗೆ ಕೊರೊನಾ ಸೋಂಕು ತಲುಪುತ್ತದೆ ಎಂಬ ಅರಿವಿರಲಿ. ಜಿಲ್ಲೆಯ ಜನರ ಹಿತದೃಷ್ಟಿಯಿಂದ ಯಾರೂ ಇಂತಹ ಕೆಲಸಕ್ಕೆ ಕೈಹಾಕಬಾರದು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.</p>.<p>ಕ್ವಾರಂಟೈನ್ನಲ್ಲಿದ್ದವರಿಗೆ ಊಟ, ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡುವುದು ಜಿಲ್ಲಾಡಳಿತ ಕರ್ತವ್ಯ. ಇದರಲ್ಲಿ ಅನ್ಯರು ಮೂಗು ತೂರಿಸುವುದು ಬೇಡ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕೆಲವು ಕಿಡಿಗೇಡಿಗಳು ಮಂಬೈನಲ್ಲಿ ಕುಳಿತು ಕರೆ ಮಾಡಿ ಡಾನ್ ರೀತಿ ಮಾತನಾಡುತ್ತಿದ್ದಾರೆ. ಜಿಲ್ಲಾಡಳಿತದ ಮುಂದೆ ಯಾವ ಡಾನ್ಗಳ ಆಟವೂ ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.</p>.<p>ಕೆಲವರು ಸುಖಾಸುಮ್ಮನೆ ಕರೆ ಮಾಡಿ ಆಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಇಂತಹ ಕೃತ್ಯಗಳು ಮತ್ತೆ ಮರುಕಳಿಸಿದರೆ ಮುಲಾಜಿಲ್ಲದೆ ಜೈಲಿಗೆ ಹಾಕಲಾಗುವುದು. ಬಾಂಬೆಯಲ್ಲಿದ್ದರೂ ಅವರನ್ನು ಕರೆಸಿಕೊಳ್ಳುವುದು ಜಿಲ್ಲಾಡಳಿತಕ್ಕೆ ಗೊತ್ತಿದೆ ಎಂದರು.</p>.<p>‘ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಮೂರು ತಿಂಗಳಿನಿಂದ ಹಗಲಿರುಳು ಶ್ರಮಿಸುತ್ತಿದೆ. ಆದರೂ, ಜಿಲ್ಲಾಧಿಕಾರಿ, ಎಸ್ಪಿ, ಎಸಿ, ಎಂಪಿ ಎಂಎಲ್ಎಗಳಿಗೆ ನಿಂಧಿಸುತ್ತಿದ್ದು, ಸುಮ್ಮನಿರಲು ಸಾಧ್ಯವಿಲ್ಲ. ಎಷ್ಟೆ ದೊಡ್ಡ ವ್ಯಕ್ತಿಯಾದರೂ ಜೈಲಿಗೆ ಹಾಕುತ್ತೇನೆ’ ಎಂದು ಖಡಕ್ ಎಚ್ಚರಿಕೆ ನೀಡಿದರು.</p>.<p>ಕೊರೊನಾ ವಿರುದ್ಧದ ಸಮರ ನಿರಂತರವಾಗಿ ಮುಂದುವರಿಯಲಿದೆ. ಇನ್ನೂ 500 ಪ್ರಕರಣಗಳಾದರೂ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಶಕ್ತವಾಗಿದೆ. ಆರೋಗ್ಯಕರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು. ಆದರೆ, ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.</p>.<p><strong>ಊಟ ತಿಂಡಿ ಕಳಿಸಬೇಡಿ:</strong>ಕ್ವಾರಂಟೈನ್ನಲ್ಲಿದ್ದವರಿಗೆ ಮನೆಯಿಂದ ಊಟ, ತಿಂಡಿ, ಬಟ್ಟೆ ಕಳಿಸುವಂತಿಲ್ಲ. ನೀವು ಕಳಿಸುವ ವಸ್ತುಗಳಿಂದಲೇ ನಿಮ್ಮ ಮನೆಗೆ ಕೊರೊನಾ ಸೋಂಕು ತಲುಪುತ್ತದೆ ಎಂಬ ಅರಿವಿರಲಿ. ಜಿಲ್ಲೆಯ ಜನರ ಹಿತದೃಷ್ಟಿಯಿಂದ ಯಾರೂ ಇಂತಹ ಕೆಲಸಕ್ಕೆ ಕೈಹಾಕಬಾರದು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.</p>.<p>ಕ್ವಾರಂಟೈನ್ನಲ್ಲಿದ್ದವರಿಗೆ ಊಟ, ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡುವುದು ಜಿಲ್ಲಾಡಳಿತ ಕರ್ತವ್ಯ. ಇದರಲ್ಲಿ ಅನ್ಯರು ಮೂಗು ತೂರಿಸುವುದು ಬೇಡ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>