<p><strong>ಉಡುಪಿ:</strong> ಕೋವಿಡ್ ಎರಡನೇ ಅಲೆ ನಗರಗಳು ಸೇರಿದಂತೆ ಗ್ರಾಮಗಳಿಗೂ ದಾಂಗುಡಿ ಇಟ್ಟಿದ್ದು ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹಳ್ಳಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಕೈಹಾಕಿದೆ.</p>.<p>ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್, ಕಟಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಮನೆಗಳಿಗೆ ತೆರಳಿ ಸೋಂಕಿತರಿಗೆ ಧೈರ್ಯ ತುಂಬಿದರು. ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯಲು ವ್ಯವಸ್ಥೆ ಇದೆಯೇ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಸಮಸ್ಯೆ ಎದುರಾಗಿದೆಯೇ ಎಂಬ ಮಾಹಿತಿ ಕಲೆ ಹಾಕಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.</p>.<p>ವಾಹನ ಮುಟ್ಟುಗೋಲು:</p>.<p>ಕೋವಿಡ್ ಎರಡನೇ ಅಲೆಯ ತಡೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಿದ್ದರೂ ಅನಗತ್ಯವಾಗಿ ನಗರದಲ್ಲಿ ಓಡಾಡುತ್ತಿದ್ದವರಿಗೆ ಜಿಲ್ಲಾಧಿಕಾರಿ ಮತ್ತೆ ಬಿಸಿ ಮುಟ್ಟಿಸಿದರು.</p>.<p>ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದ್ದರೂ ನಿಯಮ ಉಲ್ಲಂಘಿಸಿ ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಇದೇವೇಳೆ ಲಾಕ್ಡೌನ್ ಜಾರಿಯಾದ ಬಳಿಕವೂ ಅನಗತ್ಯವಾಗಿ ಸಂಚರಿಸುತ್ತಿದ್ದ ಬೈಕ್ಗಳನ್ನು ಮುಟ್ಟುಗೋಲು ಹಾಕಿಕೊಂಡರು.</p>.<p>ಬಳಿಕ ಮಲ್ಪೆಗೆ ತೆರಳಿದ ಜಿಲ್ಲಾಧಿಕಾರಿ ಬೈಕ್ ಸವಾರರನ್ನು ಅಡ್ಡಗಟ್ಟಿ ಎಚ್ಚರಿಕೆ ನೀಡಿದರು. ಅಗತ್ಯ ವಸ್ತುಗಳನ್ನು ಖರೀದಿಸಲು ನಗರಗಳಿಗೆ ಬರಬೇಕಿಲ್ಲ. ಮನೆಯ ಸುತ್ತಮುತ್ತಲಿರುವ ಅಂಗಡಿಗಳಲ್ಲಿ ದಿನಸಿ ಖರೀದಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ರಸ್ತೆಗಿಳಿದ ಅಧಿಕಾರಿಗಳು:</p>.<p>ಹೆಚ್ಚುವರಿ ಜಿಲ್ಲಾಧಿಕಾರಿ, ಕುಂದಾಪುರ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ಗಳು, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸರು ಕೂಡ ರಸ್ತೆಗಿಳಿದು ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಂಡರು.</p>.<p>ಜಿಲ್ಲೆಯಾದ್ಯಂತ ತ್ರಿಚಕ್ರ, ದ್ವಿಚಕ್ರ ಹಾಗೂ ಕಾರುಗಳು ಸೇರಿದಂತೆ 94 ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ಮಾರ್ಗಸೂಚಿ ಉಲ್ಲಂಘಿಸಿ ತೆರೆದಿದ್ದ ಅಂಗಡಿಗಳಿಗೆ ಎಚ್ಚರಿಕೆ ನೀಡಿ ಮುಚ್ಚಿಸಲಾಯಿತು. ₹ 70,000 ದಂಡ ವಸೂಲಿ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೋವಿಡ್ ಎರಡನೇ ಅಲೆ ನಗರಗಳು ಸೇರಿದಂತೆ ಗ್ರಾಮಗಳಿಗೂ ದಾಂಗುಡಿ ಇಟ್ಟಿದ್ದು ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹಳ್ಳಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಕೈಹಾಕಿದೆ.</p>.<p>ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್, ಕಟಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಮನೆಗಳಿಗೆ ತೆರಳಿ ಸೋಂಕಿತರಿಗೆ ಧೈರ್ಯ ತುಂಬಿದರು. ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯಲು ವ್ಯವಸ್ಥೆ ಇದೆಯೇ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಸಮಸ್ಯೆ ಎದುರಾಗಿದೆಯೇ ಎಂಬ ಮಾಹಿತಿ ಕಲೆ ಹಾಕಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.</p>.<p>ವಾಹನ ಮುಟ್ಟುಗೋಲು:</p>.<p>ಕೋವಿಡ್ ಎರಡನೇ ಅಲೆಯ ತಡೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಿದ್ದರೂ ಅನಗತ್ಯವಾಗಿ ನಗರದಲ್ಲಿ ಓಡಾಡುತ್ತಿದ್ದವರಿಗೆ ಜಿಲ್ಲಾಧಿಕಾರಿ ಮತ್ತೆ ಬಿಸಿ ಮುಟ್ಟಿಸಿದರು.</p>.<p>ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದ್ದರೂ ನಿಯಮ ಉಲ್ಲಂಘಿಸಿ ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಇದೇವೇಳೆ ಲಾಕ್ಡೌನ್ ಜಾರಿಯಾದ ಬಳಿಕವೂ ಅನಗತ್ಯವಾಗಿ ಸಂಚರಿಸುತ್ತಿದ್ದ ಬೈಕ್ಗಳನ್ನು ಮುಟ್ಟುಗೋಲು ಹಾಕಿಕೊಂಡರು.</p>.<p>ಬಳಿಕ ಮಲ್ಪೆಗೆ ತೆರಳಿದ ಜಿಲ್ಲಾಧಿಕಾರಿ ಬೈಕ್ ಸವಾರರನ್ನು ಅಡ್ಡಗಟ್ಟಿ ಎಚ್ಚರಿಕೆ ನೀಡಿದರು. ಅಗತ್ಯ ವಸ್ತುಗಳನ್ನು ಖರೀದಿಸಲು ನಗರಗಳಿಗೆ ಬರಬೇಕಿಲ್ಲ. ಮನೆಯ ಸುತ್ತಮುತ್ತಲಿರುವ ಅಂಗಡಿಗಳಲ್ಲಿ ದಿನಸಿ ಖರೀದಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ರಸ್ತೆಗಿಳಿದ ಅಧಿಕಾರಿಗಳು:</p>.<p>ಹೆಚ್ಚುವರಿ ಜಿಲ್ಲಾಧಿಕಾರಿ, ಕುಂದಾಪುರ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ಗಳು, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸರು ಕೂಡ ರಸ್ತೆಗಿಳಿದು ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಂಡರು.</p>.<p>ಜಿಲ್ಲೆಯಾದ್ಯಂತ ತ್ರಿಚಕ್ರ, ದ್ವಿಚಕ್ರ ಹಾಗೂ ಕಾರುಗಳು ಸೇರಿದಂತೆ 94 ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ಮಾರ್ಗಸೂಚಿ ಉಲ್ಲಂಘಿಸಿ ತೆರೆದಿದ್ದ ಅಂಗಡಿಗಳಿಗೆ ಎಚ್ಚರಿಕೆ ನೀಡಿ ಮುಚ್ಚಿಸಲಾಯಿತು. ₹ 70,000 ದಂಡ ವಸೂಲಿ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>