<p><strong>ಉಡುಪಿ:</strong> ಕರಾವಳಿ ಜಿಲ್ಲೆಯಾದ ಉಡುಪಿಯ ಜನರ ಪ್ರಮುಖ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲೂ ಮನ್ನಣೆ ಸಿಕ್ಕಿಲ್ಲ.</p>.<p>ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬುದು ಇಲ್ಲಿನ ಜನರ ಹಲವು ವರ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಈ ಬಾರಿಯ ಬಜೆಟ್ನಲ್ಲೂ ಅದು ಸಾಕಾರವಾಗಿಲ್ಲ.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಿದ ಬಳಿಕ ಉಡುಪಿಗೂ ಸರ್ಕಾರಿ ವೈದ್ಯಕೀಯ ಕಾಲೇಜು ಬರುವ ನಿರೀಕ್ಷೆ ಮಸುಕಾಗುತ್ತಿದೆ ಎಂದು ಜನರು ತಿಳಿಸಿದ್ದಾರೆ.</p>.<p>ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಕಳೆದ ವರ್ಷವೇ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವೂ ನಡೆದಿತ್ತು. ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಈ ಹಿಂದೆ ನಿವೇಶನ ಗುರುತಿಸಲಾಗಿದ್ದರೂ ಕಾಲೇಜು ಮಾತ್ರ ಸಾಕಾರವಾಗಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬಹುದೆಂಬ ಅಭಿಪ್ರಾಯ ಇಲ್ಲಿನ ಜನರದ್ದಾಗಿದೆ.</p>.<p>ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪಿಸಬೇಕೆಂಬುದು ಇಲ್ಲಿನ ರೈತಾಪಿ ಜನರ ದಶಕಗಳ ಬೇಡಿಕೆಯಾಗಿದ್ದು, ಅದು ಕೂಡ ಬಜೆಟ್ನಲ್ಲಿ ನೆರವೇರಿಲ್ಲ. ಕೃಷಿ ಕಾಲೇಜು ಸ್ಥಾಪನೆಯಾದರೆ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದರ ಜೊತೆಗೆ ವರ್ಷದಿಂದ ವರ್ಷಕ್ಕೆ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿರುವ ಜಿಲ್ಲೆಯಲ್ಲಿ ಯುವ ಜನರನ್ನು ಆ ಕ್ಷೇತ್ರಕ್ಕೆ ಆಕರ್ಷಿಸಬಹುದು ಎನ್ನುವುದು ರೈತರ ಅಭಿಪ್ರಾಯವಾಗಿದೆ.</p>.<p>ಜಿಲ್ಲೆಯ ತೀರ ಪ್ರದೇಶದ ಜನರನ್ನು ಕಾಡುತ್ತಿರುವ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಅನುದಾನ ಘೋಷಣೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದ ತೀರವಾಸಿಗಳಿಗೆ ನಿರಾಶೆಯಾಗಿದೆ. ಉಡುಪಿ, ಕಾಪು, ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಗಳಲ್ಲಿ ಸಮುದ್ರ ತೀರ ವಾಸಿಗಳು ಪ್ರತಿ ಮಳೆಗಾಲದಲ್ಲೂ ಕಡಲ್ಗೊರೆತ ಸಮಸ್ಯೆಯಿಂದ ಬಸವಳಿಯುತ್ತಾರೆ.</p>.<p>ಮೀನುಗಾರರಿಗೆ ಉಚಿತವಾಗಿ ನೀಡುವ ಸಲಕರಣೆ ಕಿಟ್ ಮೌಲ್ಯವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಏರಿಕೆ ಮಾಡಿರುವುದು, ಮೀನು ಮಾರುಕಟ್ಟೆ ನಿರ್ಮಾಣ ಘೋಷಣೆ ಹೊರತು ಪಡಿಸಿದರೆ ಜಿಲ್ಲೆಯ ಮೀನುಗಾರಿಕಾ ಬಂದರುಗಳ ಅಭಿವೃದ್ಧಿಗೆ, ಮೀನುಗಾರರ ಅಭ್ಯುದಯಕ್ಕೆ ಈ ಬಾರಿಯ ಬಜೆಟ್ನಲ್ಲಿ ಯಾವುದೇ ಪ್ರಮುಖ ಯೋಜನೆಗಳನ್ನು ಘೋಷಿಸಿಲ್ಲ ಎನ್ನುತ್ತಾರೆ ಮೀನುಗಾರರು.</p>.<p>ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವ ಜಿಲ್ಲೆಯ ಯುವಜನರು ನೌಕರಿಗಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ತೆರಳಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ ಜಿಲ್ಲೆಗೂ ಐಟಿ, ಬಿಟಿ ಕಂಪನಿಗಳನ್ನು ಆಕರ್ಷಿಸಲು ಯೋಜನೆ ರೂಪಿಸಬೇಕೆಂಬ ಬೇಡಿಕೆಯೂ ಜನರಿಂದ ಕೇಳಿ ಬಂದಿತ್ತು. ಆದರೆ ಬಜೆಟ್ನಲ್ಲಿ ಆ ಕುರಿತು ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ.</p>.<p>ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಮೂಲಸೌಕರ್ಯ ಕಲ್ಪಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಆದರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯಾವುದೇ ನಿರ್ದಿಷ್ಟ ಯೋಜನೆಗಳಿಗೆ ಅನುಮೋದನೆ ನೀಡಿಲ್ಲ.</p>.<p>ಜಿಲ್ಲೆಯಲ್ಲಿ ಮೀನು ಮಾರುಕಟ್ಟೆ, ಕಾಲು ಸಂಕ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಪಂಜರ ಮೀನು ಸಾಕಣೆಗೆ ಉತ್ತೇಜನ ನೀಡುವುದಾಗಿ ಘೋಷಿಸಿರುವುದು ಜಿಲ್ಲೆಯ ಮೀನುಗಾರರಲ್ಲಿ ಸಂತಸ ತಂದಿದೆ. ಕುಂದಾಪುರ, ಬೈಂದೂರು, ಉಡುಪಿ, ಬ್ರಹ್ಮಾವರ ವ್ಯಾಪ್ತಿಯಲ್ಲಿ ಹಲವು ಮಂದಿ ಮೀನುಗಾರರು ಉಪ ಕಸುಬಾಗಿ ಪಂಜರ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನಷ್ಟು ಮಂದಿ ಅದರತ್ತ ಚಿತ್ತ ಹರಿಸಲು ಇದರಿಂದ ಸಾಧ್ಯವಾಗಲಿದೆ.</p>.<p><strong>- ‘ನಿರಾಶಾದಾಯಕ ಬಜೆಟ್’ ‘</strong></p><p>ಉಡುಪಿ ಸೇರಿದಂತೆ ಕರಾವಳಿಯ ಕೃಷಿಕರಿಗೆ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದೆ. ಹಳೆಯ ಯೋಜನೆಗಳನ್ನೇ ಉಲ್ಲೇಖಿಸಿದ್ದು ಬಿಟ್ಟರೆ ಹೊಸ ಯೋಜನೆಗಳನ್ನು ಘೋಷಿಸಿಲ್ಲ’ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದರು. ‘ಕರಾವಳಿಯಲ್ಲಿ ವರ್ಷದಿಂದ ವರ್ಷಕ್ಕೆ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಕಾರಣಕ್ಕೆ ಇಲ್ಲಿಗೆ ವಿಶೇಷವಾದ ದೊಡ್ಡ ಯೋಜನೆಯನ್ನು ಘೋಷಿಸಬೇಕಿತ್ತು. ಭತ್ತದ ಕೃಷಿಗೆ ಉತ್ತೇಜನ ನೀಡಲು ಯೋಜನೆ ಘೋಷಿಸಬೇಕಿತ್ತು. ಕರಾವಳಿಯಲ್ಲಿ ಯುವಜನರು ಕೃಷಿಯಿಂದ ದೂರ ಸರಿಯುತ್ತಿದ್ದಾರೆ. ಅವರನ್ನು ಕೃಷಿಯತ್ತ ಸೆಳೆಯಲು ಯೋಜನೆ ರೂಪಿಸಬೇಕಿತ್ತು. ಆದರೆ ಸರ್ಕಾರ ಆ ಕೆಲಸ ಮಾಡಿಲ್ಲ’ ’ ಎಂದು ಅವರು ಹೇಳಿದರು.</p>.<p> <strong>‘ಜನಪರ ನಿರ್ಧಾರ’ ‘</strong></p><p>16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಲಾಗುವುದು ಎಂದು ಘೋಷಿಸಿರುವುದು ಸ್ವಾಗತಾರ್ಹ. ಇಂದು ಸಾಮಾಜಿಕ ಮಾಧ್ಯಮಗಳ ಬಳಕೆ ಮಿತಿಮೀರಿ ಯುವಜನರು ವಿವಿಧ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ’ ಎಂದು ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದರು. ‘ಈ ಕುರಿತು ಸರ್ಕಾರ ಕಾನೂನು ತಂದರೆ ಸ್ವಲ್ಪ ಮಟ್ಟಿಗಾದರೂ ಮುಂದಿನ ಪೀಳಿಗೆಯು ಸಾಮಾಜಿಕ ಮಾಧ್ಯಮಗಳಿಂದ ದೂರವಿರುವ ಸಾಧ್ಯತೆ ಇದೆ. ಮೊಬೈಲ್ನ ಅತಿಯಾದ ಬಳಕೆಯಿಂದ ಯುವಜನರು ಆತಂಕ ಖಿನ್ನತೆಗೊಳಗಾಗಿ ಶಾಲೆ ಕಾಲೇಜು ತೊರೆಯುತ್ತಿರುವ ಪ್ರಕರಣಗಳೂ ನಡೆಯುತ್ತಿವೆ. ಸರ್ಕಾರದ ಈ ನಿರ್ಧಾರ ಜನಪರವಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕರಾವಳಿ ಜಿಲ್ಲೆಯಾದ ಉಡುಪಿಯ ಜನರ ಪ್ರಮುಖ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲೂ ಮನ್ನಣೆ ಸಿಕ್ಕಿಲ್ಲ.</p>.<p>ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬುದು ಇಲ್ಲಿನ ಜನರ ಹಲವು ವರ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಈ ಬಾರಿಯ ಬಜೆಟ್ನಲ್ಲೂ ಅದು ಸಾಕಾರವಾಗಿಲ್ಲ.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಿದ ಬಳಿಕ ಉಡುಪಿಗೂ ಸರ್ಕಾರಿ ವೈದ್ಯಕೀಯ ಕಾಲೇಜು ಬರುವ ನಿರೀಕ್ಷೆ ಮಸುಕಾಗುತ್ತಿದೆ ಎಂದು ಜನರು ತಿಳಿಸಿದ್ದಾರೆ.</p>.<p>ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಕಳೆದ ವರ್ಷವೇ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವೂ ನಡೆದಿತ್ತು. ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಈ ಹಿಂದೆ ನಿವೇಶನ ಗುರುತಿಸಲಾಗಿದ್ದರೂ ಕಾಲೇಜು ಮಾತ್ರ ಸಾಕಾರವಾಗಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬಹುದೆಂಬ ಅಭಿಪ್ರಾಯ ಇಲ್ಲಿನ ಜನರದ್ದಾಗಿದೆ.</p>.<p>ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪಿಸಬೇಕೆಂಬುದು ಇಲ್ಲಿನ ರೈತಾಪಿ ಜನರ ದಶಕಗಳ ಬೇಡಿಕೆಯಾಗಿದ್ದು, ಅದು ಕೂಡ ಬಜೆಟ್ನಲ್ಲಿ ನೆರವೇರಿಲ್ಲ. ಕೃಷಿ ಕಾಲೇಜು ಸ್ಥಾಪನೆಯಾದರೆ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದರ ಜೊತೆಗೆ ವರ್ಷದಿಂದ ವರ್ಷಕ್ಕೆ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿರುವ ಜಿಲ್ಲೆಯಲ್ಲಿ ಯುವ ಜನರನ್ನು ಆ ಕ್ಷೇತ್ರಕ್ಕೆ ಆಕರ್ಷಿಸಬಹುದು ಎನ್ನುವುದು ರೈತರ ಅಭಿಪ್ರಾಯವಾಗಿದೆ.</p>.<p>ಜಿಲ್ಲೆಯ ತೀರ ಪ್ರದೇಶದ ಜನರನ್ನು ಕಾಡುತ್ತಿರುವ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಅನುದಾನ ಘೋಷಣೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದ ತೀರವಾಸಿಗಳಿಗೆ ನಿರಾಶೆಯಾಗಿದೆ. ಉಡುಪಿ, ಕಾಪು, ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಗಳಲ್ಲಿ ಸಮುದ್ರ ತೀರ ವಾಸಿಗಳು ಪ್ರತಿ ಮಳೆಗಾಲದಲ್ಲೂ ಕಡಲ್ಗೊರೆತ ಸಮಸ್ಯೆಯಿಂದ ಬಸವಳಿಯುತ್ತಾರೆ.</p>.<p>ಮೀನುಗಾರರಿಗೆ ಉಚಿತವಾಗಿ ನೀಡುವ ಸಲಕರಣೆ ಕಿಟ್ ಮೌಲ್ಯವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಏರಿಕೆ ಮಾಡಿರುವುದು, ಮೀನು ಮಾರುಕಟ್ಟೆ ನಿರ್ಮಾಣ ಘೋಷಣೆ ಹೊರತು ಪಡಿಸಿದರೆ ಜಿಲ್ಲೆಯ ಮೀನುಗಾರಿಕಾ ಬಂದರುಗಳ ಅಭಿವೃದ್ಧಿಗೆ, ಮೀನುಗಾರರ ಅಭ್ಯುದಯಕ್ಕೆ ಈ ಬಾರಿಯ ಬಜೆಟ್ನಲ್ಲಿ ಯಾವುದೇ ಪ್ರಮುಖ ಯೋಜನೆಗಳನ್ನು ಘೋಷಿಸಿಲ್ಲ ಎನ್ನುತ್ತಾರೆ ಮೀನುಗಾರರು.</p>.<p>ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವ ಜಿಲ್ಲೆಯ ಯುವಜನರು ನೌಕರಿಗಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ತೆರಳಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ ಜಿಲ್ಲೆಗೂ ಐಟಿ, ಬಿಟಿ ಕಂಪನಿಗಳನ್ನು ಆಕರ್ಷಿಸಲು ಯೋಜನೆ ರೂಪಿಸಬೇಕೆಂಬ ಬೇಡಿಕೆಯೂ ಜನರಿಂದ ಕೇಳಿ ಬಂದಿತ್ತು. ಆದರೆ ಬಜೆಟ್ನಲ್ಲಿ ಆ ಕುರಿತು ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ.</p>.<p>ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಮೂಲಸೌಕರ್ಯ ಕಲ್ಪಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಆದರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯಾವುದೇ ನಿರ್ದಿಷ್ಟ ಯೋಜನೆಗಳಿಗೆ ಅನುಮೋದನೆ ನೀಡಿಲ್ಲ.</p>.<p>ಜಿಲ್ಲೆಯಲ್ಲಿ ಮೀನು ಮಾರುಕಟ್ಟೆ, ಕಾಲು ಸಂಕ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಪಂಜರ ಮೀನು ಸಾಕಣೆಗೆ ಉತ್ತೇಜನ ನೀಡುವುದಾಗಿ ಘೋಷಿಸಿರುವುದು ಜಿಲ್ಲೆಯ ಮೀನುಗಾರರಲ್ಲಿ ಸಂತಸ ತಂದಿದೆ. ಕುಂದಾಪುರ, ಬೈಂದೂರು, ಉಡುಪಿ, ಬ್ರಹ್ಮಾವರ ವ್ಯಾಪ್ತಿಯಲ್ಲಿ ಹಲವು ಮಂದಿ ಮೀನುಗಾರರು ಉಪ ಕಸುಬಾಗಿ ಪಂಜರ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನಷ್ಟು ಮಂದಿ ಅದರತ್ತ ಚಿತ್ತ ಹರಿಸಲು ಇದರಿಂದ ಸಾಧ್ಯವಾಗಲಿದೆ.</p>.<p><strong>- ‘ನಿರಾಶಾದಾಯಕ ಬಜೆಟ್’ ‘</strong></p><p>ಉಡುಪಿ ಸೇರಿದಂತೆ ಕರಾವಳಿಯ ಕೃಷಿಕರಿಗೆ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದೆ. ಹಳೆಯ ಯೋಜನೆಗಳನ್ನೇ ಉಲ್ಲೇಖಿಸಿದ್ದು ಬಿಟ್ಟರೆ ಹೊಸ ಯೋಜನೆಗಳನ್ನು ಘೋಷಿಸಿಲ್ಲ’ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದರು. ‘ಕರಾವಳಿಯಲ್ಲಿ ವರ್ಷದಿಂದ ವರ್ಷಕ್ಕೆ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಕಾರಣಕ್ಕೆ ಇಲ್ಲಿಗೆ ವಿಶೇಷವಾದ ದೊಡ್ಡ ಯೋಜನೆಯನ್ನು ಘೋಷಿಸಬೇಕಿತ್ತು. ಭತ್ತದ ಕೃಷಿಗೆ ಉತ್ತೇಜನ ನೀಡಲು ಯೋಜನೆ ಘೋಷಿಸಬೇಕಿತ್ತು. ಕರಾವಳಿಯಲ್ಲಿ ಯುವಜನರು ಕೃಷಿಯಿಂದ ದೂರ ಸರಿಯುತ್ತಿದ್ದಾರೆ. ಅವರನ್ನು ಕೃಷಿಯತ್ತ ಸೆಳೆಯಲು ಯೋಜನೆ ರೂಪಿಸಬೇಕಿತ್ತು. ಆದರೆ ಸರ್ಕಾರ ಆ ಕೆಲಸ ಮಾಡಿಲ್ಲ’ ’ ಎಂದು ಅವರು ಹೇಳಿದರು.</p>.<p> <strong>‘ಜನಪರ ನಿರ್ಧಾರ’ ‘</strong></p><p>16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಲಾಗುವುದು ಎಂದು ಘೋಷಿಸಿರುವುದು ಸ್ವಾಗತಾರ್ಹ. ಇಂದು ಸಾಮಾಜಿಕ ಮಾಧ್ಯಮಗಳ ಬಳಕೆ ಮಿತಿಮೀರಿ ಯುವಜನರು ವಿವಿಧ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ’ ಎಂದು ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದರು. ‘ಈ ಕುರಿತು ಸರ್ಕಾರ ಕಾನೂನು ತಂದರೆ ಸ್ವಲ್ಪ ಮಟ್ಟಿಗಾದರೂ ಮುಂದಿನ ಪೀಳಿಗೆಯು ಸಾಮಾಜಿಕ ಮಾಧ್ಯಮಗಳಿಂದ ದೂರವಿರುವ ಸಾಧ್ಯತೆ ಇದೆ. ಮೊಬೈಲ್ನ ಅತಿಯಾದ ಬಳಕೆಯಿಂದ ಯುವಜನರು ಆತಂಕ ಖಿನ್ನತೆಗೊಳಗಾಗಿ ಶಾಲೆ ಕಾಲೇಜು ತೊರೆಯುತ್ತಿರುವ ಪ್ರಕರಣಗಳೂ ನಡೆಯುತ್ತಿವೆ. ಸರ್ಕಾರದ ಈ ನಿರ್ಧಾರ ಜನಪರವಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>