ಉಡುಪಿ: ಉಡುಪಿಯ ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ (67) ಗುರುವಾರ ನಿಧನರಾದರು.
ಮೃತರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಮಿದುಳಿನ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶ್ರೀಧರ ಹೊಳ್ಳ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ರೋಗಿಗಳಿಗೆ ನಗುಮೊಗದಿಂದ ಚಿಕಿತ್ಸೆ ನೀಡುತ್ತಿದ್ದ ಡಾ.ಶ್ರೀಧರ ಹೊಳ್ಳ ನಿಧನಕ್ಕೆ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.