<p>ಉಡುಪಿ: ‘ಗುರು ಹಿರಿಯರನ್ನು ಗೌರವಿಸಿ, ದೇವರಲ್ಲಿ ಶ್ರದ್ಧೆ, ನಂಬಿಕೆ ಇರಲಿ. ತಮ್ಮ ತಮ್ಮ ಕೆಲಸಗಳಲ್ಲಿ ಭಗವಂತನನ್ನು ಕಾಣಲು ಪ್ರಯತ್ನಿಸಿ’ ಎಂದು ಉಡುಪಿ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.</p>.<p>ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಡಯೆಟ್ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ‘ವಿದ್ಯಾರ್ಥಿಗಳು ಲಭ್ಯವಿರುವ ಸಮಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಕೊಂಡು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಬಹುಮುಖ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಗೌರವ ಪ್ರಧಾನ ಕಾರ್ಯದರ್ಶಿ ಎ.ಪಿ.ಭಟ್, ರಮೇಶ್ ಹಂದೆ ಮಾತನಾಡಿದರು.</p>.<p>ಕಾಲೇಜಿನ ಪ್ರಾಂಶುಪಾಲ ಸಿ.ಸುರೇಶ್ ತುಂಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಶ್ರೀದೇವಿ ಬಾಳಿಗ ಅವರು ಶೈಕ್ಷಣಿಕ ಶಿಸ್ತಿನ ಕುರಿತು ಮಾಹಿತಿ ನೀಡಿದರು. ಪ್ರತಿಮಾ ಬಾಳಿಗ ಕಾರ್ಯಕ್ರಮ ನಿರೂಪಿಸಿದರು. ದೀಪಿಕಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-636485012</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ‘ಗುರು ಹಿರಿಯರನ್ನು ಗೌರವಿಸಿ, ದೇವರಲ್ಲಿ ಶ್ರದ್ಧೆ, ನಂಬಿಕೆ ಇರಲಿ. ತಮ್ಮ ತಮ್ಮ ಕೆಲಸಗಳಲ್ಲಿ ಭಗವಂತನನ್ನು ಕಾಣಲು ಪ್ರಯತ್ನಿಸಿ’ ಎಂದು ಉಡುಪಿ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.</p>.<p>ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಡಯೆಟ್ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ‘ವಿದ್ಯಾರ್ಥಿಗಳು ಲಭ್ಯವಿರುವ ಸಮಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಕೊಂಡು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಬಹುಮುಖ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಗೌರವ ಪ್ರಧಾನ ಕಾರ್ಯದರ್ಶಿ ಎ.ಪಿ.ಭಟ್, ರಮೇಶ್ ಹಂದೆ ಮಾತನಾಡಿದರು.</p>.<p>ಕಾಲೇಜಿನ ಪ್ರಾಂಶುಪಾಲ ಸಿ.ಸುರೇಶ್ ತುಂಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಶ್ರೀದೇವಿ ಬಾಳಿಗ ಅವರು ಶೈಕ್ಷಣಿಕ ಶಿಸ್ತಿನ ಕುರಿತು ಮಾಹಿತಿ ನೀಡಿದರು. ಪ್ರತಿಮಾ ಬಾಳಿಗ ಕಾರ್ಯಕ್ರಮ ನಿರೂಪಿಸಿದರು. ದೀಪಿಕಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-636485012</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>