<p><strong>ಉಡುಪಿ:</strong> ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲಗಳನ್ನು ಕೇವಲ ವೈಯಕ್ತಿಕ ಯಶಸ್ಸಿಗಾಗಿ ಬಳಸದೆ, ಸಾಮಾಜಿಕ ಪ್ರಗತಿಗಾಗಿಯೂ ಬಳಸಬೇಕು ಎಂದು ಗೂಗಲ್ ಕ್ಲೌಡ್ನ ಏಷ್ಯಾ ಪೆಸಿಫಿಕ್ ಕಾರ್ಯತಂತ್ರ ಕಾರ್ಯಕ್ರಮಗಳ ಉಪಾಧ್ಯಕ್ಷ ಬಿಕ್ರಂ ಸಿಂಗ್ ಬೇಡಿ ಹೇಳಿದರು.</p>.<p>ಮಣಿಪಾಲದ ಕೆಎಂಸಿ ಗ್ರೀನ್ಸ್ನಲ್ಲಿ ಶನಿವಾರ ನಡೆದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ನ (ಮಾಹೆ) 33ನೇ ಘಟಿಕೋತ್ಸವದ ಎರಡನೇಯ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಭಿನ್ನವಾಗಿ ಪ್ರಶ್ನಿಸುವ ಪ್ರಜ್ಞೆ, ಹಳೆಯ ಅತಾರ್ತಿಕ ನಿಲವುಗಳನ್ನು ಪ್ರಶ್ನಿಸುವ ಧೈರ್ಯವನ್ನು ಬೆಳೆಸಿಕೊಳ್ಳುವ ಜೊತೆಗೆ ನಮ್ಮ ಕಲ್ಪನೆಗೂ ಮೀರಿದ ಪರಿಹಾರ ಸೂಚಿಸುವ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್ ಮಾತನಾಡಿ, ಹೊಸ ಆವಿಷ್ಕಾರಗಳು, ಉದ್ಯಮಶೀಲ ಮನೋಭಾವ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣದ ಆಶಯವನ್ನೊಳಗೊಂಡ ಭವಿಷ್ಯದ ಮಾರ್ಗಸೂಚಿಯನ್ನು ಮಾಹೆ ಹೊಂದಿದೆ ಎಂದರು.</p>.<p>ಮಾಹೆಯು ಸಂಶೋಧನೆಗೆ ಪ್ರಮುಖ್ಯತೆ ನೀಡುವುದರ ಜೊತೆಗೆ, ಎಲ್ಲರನ್ನೂ ಒಳಗೊಳ್ಳುವ, ಸ್ಥಳೀಯ ಸಮುದಾಯಕ್ಕೆ ಬೆಂಬಲಿಸುವ ಮತ್ತು ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆ ಬಗ್ಗೆಯೂ ಗಮನ ಹರಿಸಿದೆ ಎಂದು ಹೇಳಿದರು.</p>.<p>ಎಐ ಕ್ರಾಂತಿಯಿಂದ ಎದುರಾಗುತ್ತಿರುವ ಸವಾಲು ಮತ್ತು ಅವಕಾಶಗಳ ನಡುವೆ ಜಾಗ್ರತೆಯಿಂದ ಉತ್ತಮ ಮತ್ತು ಪರಿಸರ ಸ್ನೇಹಿ ನಾಳೆಗಳನ್ನು ಕಟ್ಟುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಹಿರಿದಾಗಿದೆ ಎಂದರು.</p>.<p>ಮಾಹೆ ಟ್ರಸ್ಟ್ನ ಟ್ರಸ್ಟಿ ವಸಂತಿ ಆರ್. ಪೈ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲಗಳನ್ನು ಕೇವಲ ವೈಯಕ್ತಿಕ ಯಶಸ್ಸಿಗಾಗಿ ಬಳಸದೆ, ಸಾಮಾಜಿಕ ಪ್ರಗತಿಗಾಗಿಯೂ ಬಳಸಬೇಕು ಎಂದು ಗೂಗಲ್ ಕ್ಲೌಡ್ನ ಏಷ್ಯಾ ಪೆಸಿಫಿಕ್ ಕಾರ್ಯತಂತ್ರ ಕಾರ್ಯಕ್ರಮಗಳ ಉಪಾಧ್ಯಕ್ಷ ಬಿಕ್ರಂ ಸಿಂಗ್ ಬೇಡಿ ಹೇಳಿದರು.</p>.<p>ಮಣಿಪಾಲದ ಕೆಎಂಸಿ ಗ್ರೀನ್ಸ್ನಲ್ಲಿ ಶನಿವಾರ ನಡೆದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ನ (ಮಾಹೆ) 33ನೇ ಘಟಿಕೋತ್ಸವದ ಎರಡನೇಯ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಭಿನ್ನವಾಗಿ ಪ್ರಶ್ನಿಸುವ ಪ್ರಜ್ಞೆ, ಹಳೆಯ ಅತಾರ್ತಿಕ ನಿಲವುಗಳನ್ನು ಪ್ರಶ್ನಿಸುವ ಧೈರ್ಯವನ್ನು ಬೆಳೆಸಿಕೊಳ್ಳುವ ಜೊತೆಗೆ ನಮ್ಮ ಕಲ್ಪನೆಗೂ ಮೀರಿದ ಪರಿಹಾರ ಸೂಚಿಸುವ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್ ಮಾತನಾಡಿ, ಹೊಸ ಆವಿಷ್ಕಾರಗಳು, ಉದ್ಯಮಶೀಲ ಮನೋಭಾವ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣದ ಆಶಯವನ್ನೊಳಗೊಂಡ ಭವಿಷ್ಯದ ಮಾರ್ಗಸೂಚಿಯನ್ನು ಮಾಹೆ ಹೊಂದಿದೆ ಎಂದರು.</p>.<p>ಮಾಹೆಯು ಸಂಶೋಧನೆಗೆ ಪ್ರಮುಖ್ಯತೆ ನೀಡುವುದರ ಜೊತೆಗೆ, ಎಲ್ಲರನ್ನೂ ಒಳಗೊಳ್ಳುವ, ಸ್ಥಳೀಯ ಸಮುದಾಯಕ್ಕೆ ಬೆಂಬಲಿಸುವ ಮತ್ತು ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆ ಬಗ್ಗೆಯೂ ಗಮನ ಹರಿಸಿದೆ ಎಂದು ಹೇಳಿದರು.</p>.<p>ಎಐ ಕ್ರಾಂತಿಯಿಂದ ಎದುರಾಗುತ್ತಿರುವ ಸವಾಲು ಮತ್ತು ಅವಕಾಶಗಳ ನಡುವೆ ಜಾಗ್ರತೆಯಿಂದ ಉತ್ತಮ ಮತ್ತು ಪರಿಸರ ಸ್ನೇಹಿ ನಾಳೆಗಳನ್ನು ಕಟ್ಟುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಹಿರಿದಾಗಿದೆ ಎಂದರು.</p>.<p>ಮಾಹೆ ಟ್ರಸ್ಟ್ನ ಟ್ರಸ್ಟಿ ವಸಂತಿ ಆರ್. ಪೈ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>