<p><strong>ಉಡುಪಿ:</strong> ಉಡುಪಿಯ ಕೃಷ್ಣಮಠದಲ್ಲಿಇದೇ 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಗುರುವಾರ ನೆರವೇರಿತು.</p>.<p>ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ನೆರವೇರಿಸಿದ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.</p>.<p>ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ.</p>.<p>28ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿರುವ ಮೋದಿ ಅವರು 11.30 ರವರೆಗೆ 1.5 ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳುವವರು. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಉಡುಪಿಯ ಕೃಷ್ಣಮಠದಲ್ಲಿಇದೇ 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಗುರುವಾರ ನೆರವೇರಿತು.</p>.<p>ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ನೆರವೇರಿಸಿದ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.</p>.<p>ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ.</p>.<p>28ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿರುವ ಮೋದಿ ಅವರು 11.30 ರವರೆಗೆ 1.5 ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳುವವರು. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>