<p><strong>ಉಡುಪಿ:</strong> ಉಡುಪಿಯ ಕೃಷ್ಣಮಠದಲ್ಲಿಇದೇ 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಗುರುವಾರ ನೆರವೇರಿತು.</p>.<p>ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ನೆರವೇರಿಸಿದ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.</p>.<p>ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ.</p>.<p>28ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿರುವ ಮೋದಿ ಅವರು 11.30 ರವರೆಗೆ 1.5 ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳುವವರು. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>
<p><strong>ಉಡುಪಿ:</strong> ಉಡುಪಿಯ ಕೃಷ್ಣಮಠದಲ್ಲಿಇದೇ 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಗುರುವಾರ ನೆರವೇರಿತು.</p>.<p>ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ನೆರವೇರಿಸಿದ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.</p>.<p>ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ.</p>.<p>28ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿರುವ ಮೋದಿ ಅವರು 11.30 ರವರೆಗೆ 1.5 ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳುವವರು. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>