<p><strong>ಉಡುಪಿ: </strong>ಸಾರ್ವಜನಿಕರು ಅಗತ್ಯದ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿ ಕಚೇರಿಗೆ ಬರುವುದು ಬೇಡ. ಮನೆಯಲ್ಲಿ ಕುಳಿತು ಸರ್ಕಾರದ ಸೇವೆಗಳನ್ನು ಪಡೆಯಬಹುದು. ಇದಕ್ಕಾಗಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಕೋವಿಡ್ ಸೋಂಕು ಹರಡುವಿಕೆ ತಡೆಗೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಡಳಿತದ ಕಾರ್ಯವೈಖರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಭೇಟಿನೀಡುವ ಬದಲು ಮೊಬೈಲ್ ಮೂಲಕವೇ ಕೆಲಸಗಳನ್ನು ತ್ವರಿತವಾಗಿ ಮಾಡಿಸಿಕೊಳ್ಳಬಹುದು ಎಂದರು.</p>.<p><strong>2 ಹೆಲ್ಪ್ಲೈನ್ ನಂಬರ್:</strong></p>.<p>ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ 0820–2574931, 2571500 ಸಹಾಯವಾಣಿಗೆ ಕರೆಮಾಡಿ ಆಗಬೇಕಾದ ಕೆಲಸದ ಬಗ್ಗೆ ಮಾಹಿತಿ ನೀಡಬೇಕು. ದಾಖಲಾತಿ ಪಡೆಯಲು ಅರ್ಜಿ ಸಲ್ಲಿಸಿದ್ದರೆ ಅದರ ಸ್ಥಿತಿಯ ವಿವರ ಪಡೆಯಬಹುದು.</p>.<p>ಇದಕ್ಕಾಗಿ ಸಹಾಯವಾಣಿ ಕೇಂದ್ರದಲ್ಲಿ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಮೊಬೈಲ್ ಸಂಖ್ಯೆಯ ಸಮೇತ ಸ್ವೀಕರಿಸುವ ಸಿಬ್ಬಂದಿ, ಸಂಬಂಧಪಟ್ಟ ಇಲಾಖೆಗೆ ಮುಟ್ಟಿಸಲಿದ್ದಾರೆ. ಕೆಲಸ ಆದ ಕೂಡಲೇ ಕರೆ ಮಾಡಿ ಅರ್ಜಿದಾರರಿಗೆ ತಿಳಿಸಲಿದ್ದಾರೆ ಎಂದರು.</p>.<p>ದಾಖಲೆಗಳನ್ನು ಪಡೆಯಲು ಪೂರಕ ಮಾಹಿತಿ ಒದಗಿಸಲು ಪ್ರತ್ಯೇಕ ವಾಟ್ಸ್ ಆ್ಯಪ್ ಸಂಖ್ಯೆ 9880831516 ಇದ್ದು ಇಲ್ಲಿಗೆ ಕಳಿಸಬಹುದು. udupidc.helpline@gmail.com ಗೆ ಮೇಲ್ ಮೂಲಕವೂ ಸೇವೆ ಪಡೆಯಬಹುದು ಎಂದು ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಹೆಚ್ಚು ಕಂಟೈನ್ಮೆಂಟ್ ಝೋನ್ಗಳಿದ್ದು, ಸೋಂಕು ಹರಡುವಿಕೆ ತಡೆಗೆ ಪ್ರಾಯೋಗಿಕವಾಗಿ ಹೊಸ ಪ್ರಯತ್ನ ಮಾಡಲಾಗಿದೆ. ಅತಿಅಗತ್ಯ ಸಂದರ್ಭದಲ್ಲಿ ಖುದ್ದು ಭೇಟಿ ಮಾಡಬೇಕಿದ್ದರೆ ಮಾತ್ರ ಕಚೇರಿಗೆ ಬರಬಹುದು. ‘ರೋಗದ ಲಕ್ಷಣ ಇರುವವರಿಗೆ ಪ್ರವೇಶವಿಲ್ಲ’ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಸಾರ್ವಜನಿಕರು ಅಗತ್ಯದ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿ ಕಚೇರಿಗೆ ಬರುವುದು ಬೇಡ. ಮನೆಯಲ್ಲಿ ಕುಳಿತು ಸರ್ಕಾರದ ಸೇವೆಗಳನ್ನು ಪಡೆಯಬಹುದು. ಇದಕ್ಕಾಗಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಕೋವಿಡ್ ಸೋಂಕು ಹರಡುವಿಕೆ ತಡೆಗೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಡಳಿತದ ಕಾರ್ಯವೈಖರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಭೇಟಿನೀಡುವ ಬದಲು ಮೊಬೈಲ್ ಮೂಲಕವೇ ಕೆಲಸಗಳನ್ನು ತ್ವರಿತವಾಗಿ ಮಾಡಿಸಿಕೊಳ್ಳಬಹುದು ಎಂದರು.</p>.<p><strong>2 ಹೆಲ್ಪ್ಲೈನ್ ನಂಬರ್:</strong></p>.<p>ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ 0820–2574931, 2571500 ಸಹಾಯವಾಣಿಗೆ ಕರೆಮಾಡಿ ಆಗಬೇಕಾದ ಕೆಲಸದ ಬಗ್ಗೆ ಮಾಹಿತಿ ನೀಡಬೇಕು. ದಾಖಲಾತಿ ಪಡೆಯಲು ಅರ್ಜಿ ಸಲ್ಲಿಸಿದ್ದರೆ ಅದರ ಸ್ಥಿತಿಯ ವಿವರ ಪಡೆಯಬಹುದು.</p>.<p>ಇದಕ್ಕಾಗಿ ಸಹಾಯವಾಣಿ ಕೇಂದ್ರದಲ್ಲಿ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಮೊಬೈಲ್ ಸಂಖ್ಯೆಯ ಸಮೇತ ಸ್ವೀಕರಿಸುವ ಸಿಬ್ಬಂದಿ, ಸಂಬಂಧಪಟ್ಟ ಇಲಾಖೆಗೆ ಮುಟ್ಟಿಸಲಿದ್ದಾರೆ. ಕೆಲಸ ಆದ ಕೂಡಲೇ ಕರೆ ಮಾಡಿ ಅರ್ಜಿದಾರರಿಗೆ ತಿಳಿಸಲಿದ್ದಾರೆ ಎಂದರು.</p>.<p>ದಾಖಲೆಗಳನ್ನು ಪಡೆಯಲು ಪೂರಕ ಮಾಹಿತಿ ಒದಗಿಸಲು ಪ್ರತ್ಯೇಕ ವಾಟ್ಸ್ ಆ್ಯಪ್ ಸಂಖ್ಯೆ 9880831516 ಇದ್ದು ಇಲ್ಲಿಗೆ ಕಳಿಸಬಹುದು. udupidc.helpline@gmail.com ಗೆ ಮೇಲ್ ಮೂಲಕವೂ ಸೇವೆ ಪಡೆಯಬಹುದು ಎಂದು ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಹೆಚ್ಚು ಕಂಟೈನ್ಮೆಂಟ್ ಝೋನ್ಗಳಿದ್ದು, ಸೋಂಕು ಹರಡುವಿಕೆ ತಡೆಗೆ ಪ್ರಾಯೋಗಿಕವಾಗಿ ಹೊಸ ಪ್ರಯತ್ನ ಮಾಡಲಾಗಿದೆ. ಅತಿಅಗತ್ಯ ಸಂದರ್ಭದಲ್ಲಿ ಖುದ್ದು ಭೇಟಿ ಮಾಡಬೇಕಿದ್ದರೆ ಮಾತ್ರ ಕಚೇರಿಗೆ ಬರಬಹುದು. ‘ರೋಗದ ಲಕ್ಷಣ ಇರುವವರಿಗೆ ಪ್ರವೇಶವಿಲ್ಲ’ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>