<p><strong>ಉಡುಪಿ</strong>: ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೆಬಲ್ ರಾಜೇಶ್ ಕುಂದರ್ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.</p>.<p>ಡಿಎಆರ್ ಎಪಿಸಿಗಳಾದ ಉಮೇಶ್ ಹಾಗೂ ಅಶ್ಫಕ್, ಗಂಗೊಳ್ಳಿ ಠಾಣೆಯ ಪಿಎಸ್ಐ ನಂಜಪ್ಪ ತನ್ನ ಸಾವಿಗೆ ಕಾರಣ ಎಂದು ರಾಜೇಶ್ ಕುಂದರ್ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಗಳ ವಿರುದ್ಧ 306 ಆರ್ಡಬ್ಲ್ಯು, 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಡೆತ್ನೋಟ್ ಪತ್ತೆಯಾಗಿದ್ದು ಹೇಗೆ?</strong></p>.<p>ಮೃತ ರಾಜೇಶ್ ಕುಂದರ್ ಜತೆ ‘ಆದಿ ಉಡುಪಿ ಶಾಲೆ’ಯಲ್ಲಿ ಕರ್ತವ್ಯಕ್ಕೆ ನಿಯೋಜಿತಗೊಂಡಿದ್ದ ಉಡುಪಿ ಡಿಎಆರ್ ಘಟಕದ ಕಾನ್ಸ್ಟೇಬಲ್ ಗಣೇಶ್ ಶನಿವಾರ ಕರ್ತವ್ಯ ಮುಗಿಸಿಕೊಂಡು ಡಿಎಆರ್ ಮುಖ್ಯ ಕಚೇರಿಗೆ ಬಂದು ಕಿಟ್ ಬಾಕ್ಸ್ ಪರೀಶಿಲಿಸಿದ್ದಾರೆ. ಈ ಸಂದರ್ಭ ಬ್ಯಾಗ್ನಲ್ಲಿದ್ದ ಸಮವಸ್ತ್ರ ಹಾಗೂ ಬೆಡ್ಶೀಟ್ ಹೊರತೆಗೆದಾಗ ಡೆತ್ನೋಟ್ ಪತ್ತೆಯಾಗಿದೆ.</p>.<p>ಮಾಹಿತಿಯನ್ನು ಮೇಲಧಿಕಾರಿಗಳಿಗೆ ತಿಳಿಸಿದ ಗಣೇಶ್ ಡೆತ್ನೋಟ್ ಅನ್ನು ನಗರ ಠಾಣೆಗೆ ಹಾಜರುಪಡಿಸಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ.</p>.<p>ಇದಕ್ಕೂ ಮುನ್ನ ಕರ್ತವ್ಯ ನಿರತರಾಗಿದ್ದ ಸಂದರ್ಭ ರೈಫಲ್ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ರಾಜೇಶ್ ಕುಂದರ್ ಮೃತಪಟ್ಟಿದ್ದರು ಎಂದು ಪ್ರಕರಣ ದಾಖಲಾಗಿತ್ತು.</p>.<p><a href="https://www.prajavani.net/district/udupi/head-constable-died-after-bullet-fired-in-a-police-gun-at-udupi-932598.html" itemprop="url">ಸರ್ವೀಸ್ ಬಂದೂಕಿನಿಂದ ಗುಂಡು ಸಿಡಿದು ಹೆಡ್ಕಾನ್ಸ್ಟೆಬಲ್ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೆಬಲ್ ರಾಜೇಶ್ ಕುಂದರ್ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.</p>.<p>ಡಿಎಆರ್ ಎಪಿಸಿಗಳಾದ ಉಮೇಶ್ ಹಾಗೂ ಅಶ್ಫಕ್, ಗಂಗೊಳ್ಳಿ ಠಾಣೆಯ ಪಿಎಸ್ಐ ನಂಜಪ್ಪ ತನ್ನ ಸಾವಿಗೆ ಕಾರಣ ಎಂದು ರಾಜೇಶ್ ಕುಂದರ್ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಗಳ ವಿರುದ್ಧ 306 ಆರ್ಡಬ್ಲ್ಯು, 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಡೆತ್ನೋಟ್ ಪತ್ತೆಯಾಗಿದ್ದು ಹೇಗೆ?</strong></p>.<p>ಮೃತ ರಾಜೇಶ್ ಕುಂದರ್ ಜತೆ ‘ಆದಿ ಉಡುಪಿ ಶಾಲೆ’ಯಲ್ಲಿ ಕರ್ತವ್ಯಕ್ಕೆ ನಿಯೋಜಿತಗೊಂಡಿದ್ದ ಉಡುಪಿ ಡಿಎಆರ್ ಘಟಕದ ಕಾನ್ಸ್ಟೇಬಲ್ ಗಣೇಶ್ ಶನಿವಾರ ಕರ್ತವ್ಯ ಮುಗಿಸಿಕೊಂಡು ಡಿಎಆರ್ ಮುಖ್ಯ ಕಚೇರಿಗೆ ಬಂದು ಕಿಟ್ ಬಾಕ್ಸ್ ಪರೀಶಿಲಿಸಿದ್ದಾರೆ. ಈ ಸಂದರ್ಭ ಬ್ಯಾಗ್ನಲ್ಲಿದ್ದ ಸಮವಸ್ತ್ರ ಹಾಗೂ ಬೆಡ್ಶೀಟ್ ಹೊರತೆಗೆದಾಗ ಡೆತ್ನೋಟ್ ಪತ್ತೆಯಾಗಿದೆ.</p>.<p>ಮಾಹಿತಿಯನ್ನು ಮೇಲಧಿಕಾರಿಗಳಿಗೆ ತಿಳಿಸಿದ ಗಣೇಶ್ ಡೆತ್ನೋಟ್ ಅನ್ನು ನಗರ ಠಾಣೆಗೆ ಹಾಜರುಪಡಿಸಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ.</p>.<p>ಇದಕ್ಕೂ ಮುನ್ನ ಕರ್ತವ್ಯ ನಿರತರಾಗಿದ್ದ ಸಂದರ್ಭ ರೈಫಲ್ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ರಾಜೇಶ್ ಕುಂದರ್ ಮೃತಪಟ್ಟಿದ್ದರು ಎಂದು ಪ್ರಕರಣ ದಾಖಲಾಗಿತ್ತು.</p>.<p><a href="https://www.prajavani.net/district/udupi/head-constable-died-after-bullet-fired-in-a-police-gun-at-udupi-932598.html" itemprop="url">ಸರ್ವೀಸ್ ಬಂದೂಕಿನಿಂದ ಗುಂಡು ಸಿಡಿದು ಹೆಡ್ಕಾನ್ಸ್ಟೆಬಲ್ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>