<p><strong>ಉಡುಪಿ:</strong> ಹವಾಮಾನ ಬದಲಾವಣೆಯ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಏರಿಕೆಯಾಗುತ್ತಿದ್ದು, ಬಿಸಿಗಾಳಿಯು ತೋಟಗಾರಿಕೆ ಬೆಳೆಗಳ ಬೆಳವಣಿಗೆ, ಹೂವು-ಹಣ್ಣು ಕಚ್ಚುವಿಕೆ, ಹಿಡುವಿಕೆ ಮತ್ತು ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.</p>.<p>ಬೆಳಿಗ್ಗೆ 6 ಗಂಟೆಯೊಳಗೆ ಅಥವಾ ಸಂಜೆ 5 ಗಂಟೆಯ ನಂತರ ಮಾತ್ರ ನೀರಾವರಿ ಮಾಡಬೇಕು. ದಿನಕ್ಕೆ 2 ಬಾರಿ ಲಘು ನೀರಾವರಿ ಮಾಡುವುದರಿಂದ ಉತ್ತಮ ಮಣ್ಣಿನ ತೇವಾಂಶವನ್ನು ಕಾಯ್ದುಕೊಳ್ಳಲು ನಿಯಮಿತವಾಗಿ ನೀರು ನೀಡಬೇಕು. ಹನಿ ನೀರಾವರಿ ವ್ಯವಸ್ಥೆ ಇದ್ದರೆ ಹೆಚ್ಚು ಪ್ರಯೋಜನಕಾರಿಯಾಗಲಿದೆ</p>.<p>ಒಣ ಎಲೆಗಳು, ಹುಲ್ಲು, ತೆಂಗಿನ ತೊಗಟೆ ಮುಂತಾದವುಗಳಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ತೇವಾಂಶ ಉಳಿದುಕೊಂಡು ಬಿಸಿಲಿನ ತಾಪಮಾನ ಕಡಿಮೆಯಾಗುತ್ತದೆ.</p>.<p>ಸಸಿ ನರ್ಸರಿಗಳಲ್ಲಿ ಶೇಡ್ ನೆಟ್ ಬಳಕೆ ಮಾಡಬೇಕು. ಹೊಸದಾಗಿ ನೆಟ್ಟ ಸಸಿಗಳಿಗೆ ತಾತ್ಕಾಲಿಕ ನೆರಳು ಒದಗಿಸಬೇಕು. ಬೇಸಿಗೆಯಲ್ಲಿ ರಾಸಾಯನಿಕ ಗೊಬ್ಬರ ಬಳಕೆ ತಾತ್ಕಾಲಿಕವಾಗಿ ತಪ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-28-2057109530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಹವಾಮಾನ ಬದಲಾವಣೆಯ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಏರಿಕೆಯಾಗುತ್ತಿದ್ದು, ಬಿಸಿಗಾಳಿಯು ತೋಟಗಾರಿಕೆ ಬೆಳೆಗಳ ಬೆಳವಣಿಗೆ, ಹೂವು-ಹಣ್ಣು ಕಚ್ಚುವಿಕೆ, ಹಿಡುವಿಕೆ ಮತ್ತು ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.</p>.<p>ಬೆಳಿಗ್ಗೆ 6 ಗಂಟೆಯೊಳಗೆ ಅಥವಾ ಸಂಜೆ 5 ಗಂಟೆಯ ನಂತರ ಮಾತ್ರ ನೀರಾವರಿ ಮಾಡಬೇಕು. ದಿನಕ್ಕೆ 2 ಬಾರಿ ಲಘು ನೀರಾವರಿ ಮಾಡುವುದರಿಂದ ಉತ್ತಮ ಮಣ್ಣಿನ ತೇವಾಂಶವನ್ನು ಕಾಯ್ದುಕೊಳ್ಳಲು ನಿಯಮಿತವಾಗಿ ನೀರು ನೀಡಬೇಕು. ಹನಿ ನೀರಾವರಿ ವ್ಯವಸ್ಥೆ ಇದ್ದರೆ ಹೆಚ್ಚು ಪ್ರಯೋಜನಕಾರಿಯಾಗಲಿದೆ</p>.<p>ಒಣ ಎಲೆಗಳು, ಹುಲ್ಲು, ತೆಂಗಿನ ತೊಗಟೆ ಮುಂತಾದವುಗಳಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ತೇವಾಂಶ ಉಳಿದುಕೊಂಡು ಬಿಸಿಲಿನ ತಾಪಮಾನ ಕಡಿಮೆಯಾಗುತ್ತದೆ.</p>.<p>ಸಸಿ ನರ್ಸರಿಗಳಲ್ಲಿ ಶೇಡ್ ನೆಟ್ ಬಳಕೆ ಮಾಡಬೇಕು. ಹೊಸದಾಗಿ ನೆಟ್ಟ ಸಸಿಗಳಿಗೆ ತಾತ್ಕಾಲಿಕ ನೆರಳು ಒದಗಿಸಬೇಕು. ಬೇಸಿಗೆಯಲ್ಲಿ ರಾಸಾಯನಿಕ ಗೊಬ್ಬರ ಬಳಕೆ ತಾತ್ಕಾಲಿಕವಾಗಿ ತಪ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-28-2057109530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>