<p><strong>ಉಡುಪಿ: </strong>ನಾರಾಯಣ ಗುರುಗಳಿಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯಗೊಳಿಸಲಾಗಿದ್ದು ರಾಜಕೀಯ ಪ್ರೇರಿತ ಪ್ರತಿಭಟನೆಗೆ ವಿರೋಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.</p>.<p>ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು ‘ನಾರಾಯಣ ಗುರುಗಳ ಬಗ್ಗೆ ಅಪಾರ ಗೌರವವಿದ್ದು, ಅವರ ಚಿಂತನೆಗಳನ್ನು ಸಾಕಾರಗೊಳಿಸಲು ಒತ್ತು ನೀಡಲಾಗುವುದು ಎಂದರು.</p>.<p>ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ಗೊಂದಲ ಹಾಗೂ ಅಸಮಾಧಾನವಿಲ್ಲ. ವಹಿಸಿದ ಕರ್ತವ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ಸರ್ಕಾರದಲ್ಲಿ ಎಲ್ಲರನ್ನೂ ತೃಪ್ತಿಪಡಿಸಲಾಗುವುದಿಲ್ಲ ಎಂದು ಅಂಗಾರ ಹೇಳಿದರು.</p>.<p>ಹಿಜಾಬ್ ವಿವಾದ ಸಂಬಂಧ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಇಚ್ಛೆಯಂತೆ ವರ್ತಿಸಲು ಸಾಧ್ಯವಿಲ್ಲ. ಕಾಲೇಜುಗಳಲ್ಲಿ ಸಮಾನತೆ ಜಾರಿಗೊಳಿಸುವ ದೃಷ್ಟಿಯಿಂದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ವರದಿ ನೀಡಿದ ಬಳಿಕ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.</p>.<p>ಸಿದ್ದರಾಮಯ್ಯ ಅವರಿಗೆ ಯಾವ ವಿಚಾರದಲ್ಲೂ ಸ್ಪಷ್ಟತೆ ಇಲ್ಲ. ಸ್ವತಃ ಅವರೇ ಮುಳುಗುವ ಹಂತ ತಲುಪಿರುವುದರಿಂದ ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಟೀಕಿಸುತ್ತಿದ್ದಾರೆ ಎಂದರು.</p>.<p>ಪ್ರತಿ ಸೋಮವಾರ ಬೆಳಿಗ್ಗೆ ಉಡುಪಿಯಲ್ಲಿ ಲಭ್ಯವಿದ್ದು ಸಾರ್ವಜನಿಕರ ಅಹವಾಲು ಆಲಿಸುತ್ತೇನೆ. ಸೋಮವಾರ ಮಧ್ಯಾಹ್ನ ಮಂಗಳೂರು ಮೀನುಗಾರಿಕಾ ಇಲಾಖೆಯ ಕಚೇರಿಯಲ್ಲಿ ಇರುತ್ತೇನೆ, ಮಂಗಳವಾರ ಸುಳ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಲಭ್ಯನಿರುತ್ತೇನೆ ಎಂದು ಅಂಗಾರ ಹೇಳಿದರು.</p>.<p>ಮೀನುಗಾರಿಕಾ ಇಲಾಖೆಯ ಸಚಿವನಾದ ಬಳಿಕ ಇಡೀ ರಾಜ್ಯ ಸುತ್ತಿದ್ದೇನೆ. ಆತ್ಮನಿರ್ಭರ ಯೋಜನೆಯಡಿ ಸ್ವ ಉದ್ಯೋಗ ಸೃಷ್ಟಿಗೆ ಒತ್ತುನೀಡಲು ಮೀನು ಕೃಷಿಗೆ ಸಂಬಂಧಿಸಿದಂತೆ 5 ಕಡೆಗಳಲ್ಲಿ ಕಾರ್ಯಾಗಾರ ಮಾಡಲಾಗಿದೆ. ಮೀನು ತಳಿಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.</p>.<p>ಈ ಸಂದರ್ಭ ಶಾಸಕ ರಘುಪತಿ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ನಾರಾಯಣ ಗುರುಗಳಿಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯಗೊಳಿಸಲಾಗಿದ್ದು ರಾಜಕೀಯ ಪ್ರೇರಿತ ಪ್ರತಿಭಟನೆಗೆ ವಿರೋಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.</p>.<p>ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು ‘ನಾರಾಯಣ ಗುರುಗಳ ಬಗ್ಗೆ ಅಪಾರ ಗೌರವವಿದ್ದು, ಅವರ ಚಿಂತನೆಗಳನ್ನು ಸಾಕಾರಗೊಳಿಸಲು ಒತ್ತು ನೀಡಲಾಗುವುದು ಎಂದರು.</p>.<p>ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ಗೊಂದಲ ಹಾಗೂ ಅಸಮಾಧಾನವಿಲ್ಲ. ವಹಿಸಿದ ಕರ್ತವ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ಸರ್ಕಾರದಲ್ಲಿ ಎಲ್ಲರನ್ನೂ ತೃಪ್ತಿಪಡಿಸಲಾಗುವುದಿಲ್ಲ ಎಂದು ಅಂಗಾರ ಹೇಳಿದರು.</p>.<p>ಹಿಜಾಬ್ ವಿವಾದ ಸಂಬಂಧ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಇಚ್ಛೆಯಂತೆ ವರ್ತಿಸಲು ಸಾಧ್ಯವಿಲ್ಲ. ಕಾಲೇಜುಗಳಲ್ಲಿ ಸಮಾನತೆ ಜಾರಿಗೊಳಿಸುವ ದೃಷ್ಟಿಯಿಂದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ವರದಿ ನೀಡಿದ ಬಳಿಕ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.</p>.<p>ಸಿದ್ದರಾಮಯ್ಯ ಅವರಿಗೆ ಯಾವ ವಿಚಾರದಲ್ಲೂ ಸ್ಪಷ್ಟತೆ ಇಲ್ಲ. ಸ್ವತಃ ಅವರೇ ಮುಳುಗುವ ಹಂತ ತಲುಪಿರುವುದರಿಂದ ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಟೀಕಿಸುತ್ತಿದ್ದಾರೆ ಎಂದರು.</p>.<p>ಪ್ರತಿ ಸೋಮವಾರ ಬೆಳಿಗ್ಗೆ ಉಡುಪಿಯಲ್ಲಿ ಲಭ್ಯವಿದ್ದು ಸಾರ್ವಜನಿಕರ ಅಹವಾಲು ಆಲಿಸುತ್ತೇನೆ. ಸೋಮವಾರ ಮಧ್ಯಾಹ್ನ ಮಂಗಳೂರು ಮೀನುಗಾರಿಕಾ ಇಲಾಖೆಯ ಕಚೇರಿಯಲ್ಲಿ ಇರುತ್ತೇನೆ, ಮಂಗಳವಾರ ಸುಳ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಲಭ್ಯನಿರುತ್ತೇನೆ ಎಂದು ಅಂಗಾರ ಹೇಳಿದರು.</p>.<p>ಮೀನುಗಾರಿಕಾ ಇಲಾಖೆಯ ಸಚಿವನಾದ ಬಳಿಕ ಇಡೀ ರಾಜ್ಯ ಸುತ್ತಿದ್ದೇನೆ. ಆತ್ಮನಿರ್ಭರ ಯೋಜನೆಯಡಿ ಸ್ವ ಉದ್ಯೋಗ ಸೃಷ್ಟಿಗೆ ಒತ್ತುನೀಡಲು ಮೀನು ಕೃಷಿಗೆ ಸಂಬಂಧಿಸಿದಂತೆ 5 ಕಡೆಗಳಲ್ಲಿ ಕಾರ್ಯಾಗಾರ ಮಾಡಲಾಗಿದೆ. ಮೀನು ತಳಿಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.</p>.<p>ಈ ಸಂದರ್ಭ ಶಾಸಕ ರಘುಪತಿ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>