ಉಡುಪಿ: ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.
ಕೋವಿಡ್ ಸೋಂಕು ತಡೆಗೆ ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್ಗಳಾದ ವೈದ್ಯರು, ಶುಶ್ರೂಷಕರು, ಪೌರಕಾರ್ಮಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಾರ್ವಜನಿಕರು ಮೊಬೈಲ್ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಿರಲಿಲ್ಲ.
ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಕರಾವಳಿ ಕಾವಲು ಪಡೆ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಎಡಿಸಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲುಪಡೆ ಎಸ್ಪಿ ಆರ್.ಚೇತನ್ ಉಪಸ್ಥಿತರಿದ್ದರು.
ಧ್ವಜಾರೋಹಣದ ಬಳಿಕ ಅಜ್ಜರಕಾಡು ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು.