ಬೈಂದೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ವ್ಯರ್ಥವಾಗಿ ವೃಷಭಾವತಿ ನದಿ ಸೇರುತ್ತಿದ್ದ ಚರಂಡಿ ನೀರನ್ನು ಶುದ್ಧೀಕರಿಸಿ ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ತುಮಕೂರಿಗೆ 300 ಎಂಎಲ್ಡಿ ನೀರು ಪೂರೈಸುವ ಆಲೋಚನೆ ಇದೆ. ಇದರಿಂದ ಈ ಭಾಗದ ಕೈಗಾರಿಕೆಗಳಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದರು.