<p>ಉಡುಪಿ: ಕಲ್ಯಾಣಪುರ– ಸಂತೆಕಟ್ಟೆಯ ಅಂಡರ್ ಪಾಸ್ನ ಮಧ್ಯದಲ್ಲಿ ನಿರ್ಮಿಸಿರುವ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಸೋಮವಾರ ಮುಕ್ತಗೊಳಿಸಲಾಯಿತು.</p>.<p>ಸಂತೆಕಟ್ಟೆಯ ಅಂಡರ್ ಪಾಸ್ಗೆ ಸೋಮವಾರ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಘೋಷಿಸಿದರು.</p>.<p>ಅಂಡರ್ಪಾಸ್ನ ಬಾಕಿ ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಕೋಟ ತಿಳಿಸಿದರು.</p>.<p>‘ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ 2022ರಲ್ಲಿ ಆರಂಭವಾಗಿದ್ದು, ಕಾಮಗಾರಿ ಸ್ಥಳದಲ್ಲಿ ಎರಡು ಬೃಹತ್ ಗಾತ್ರದ ಬಂಡೆಗಳು ಸಿಕ್ಕಿದ ಕಾರಣ ಅದನ್ನು ಒಡೆಯಬಾರದು ಎಂದು ಅಕ್ಕಪಕ್ಕದವರು ತಡೆಯಾಜ್ಞೆ ತಂದಿದ್ದರು. ಈ ಕಾರಣಕ್ಕೆ ಕಾಮಗಾರಿ ವಿಳಂಬವಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಅಂಡರ್ಪಾಸ್ಗೆ ಸಂಬಂಧಿಸಿದ ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇದ್ದು, ಮಳೆಗಾಲದೊಳಗೆ ಅದನ್ನು ಪೂರ್ಣಗೊಳಿಸಲಾಗುವುದು. ಈಗ ತುರ್ತಾಗಿ ಜನರಿಗೆ ಅನುಕೂಲವಾಗಲು ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ’ ಎಂದರು.</p>.<p>‘ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ಪಾಸ್ ಕಾಮಗಾರಿ ಸ್ಥಳದಲ್ಲಿ ಒಂದು ಬದಿಯ ರಸ್ತೆಯನ್ನು 15 ದಿನಗಳೊಳಗೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಅನಂತರ ಎರಡನೇ ಹಂತದ ಕಾಮಗಾರಿ ನಡೆಯಲಿದೆ’ ಎಂದು ಸಂಸದರು ತಿಳಿಸಿದರು.</p>.<p>‘ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಮರಗಳ ಮತ್ತು ವಿದ್ಯುತ್ ಕಂಬಗಳ ತೆರವು ಕಾರ್ಯ ಈಗಾಗಲೇ ನಡೆದಿದೆ. ಕೆಲವರಿಗೆ ಪರಿಹಾರ ನೀಡುವುದು ಬಾಕಿ ಇತ್ತು. ಅದಷ್ಟು ಶೀಘ್ರ ಸಮಸ್ಯೆಗಳನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.</p>.<p>‘ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ಕೆಲವರು ನ್ಯಾಯಾಲಯಕ್ಕೆ ಹೋಗಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕಾನೂನು ತೊಡಕುಗಳನ್ನು ಪರಿಹರಿಸಿ ಅಲ್ಲೂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ’ ತಿಳಿಸಿದರು.</p>.<p>ಸಂತೆಕಟ್ಟೆಯಲ್ಲಿ ಅಂಡರ್ಪಾಸ್ನ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವುದರಿಂದ ಈಗಾಗಲೇ ಅದರಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-28-264067786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಕಲ್ಯಾಣಪುರ– ಸಂತೆಕಟ್ಟೆಯ ಅಂಡರ್ ಪಾಸ್ನ ಮಧ್ಯದಲ್ಲಿ ನಿರ್ಮಿಸಿರುವ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಸೋಮವಾರ ಮುಕ್ತಗೊಳಿಸಲಾಯಿತು.</p>.<p>ಸಂತೆಕಟ್ಟೆಯ ಅಂಡರ್ ಪಾಸ್ಗೆ ಸೋಮವಾರ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಘೋಷಿಸಿದರು.</p>.<p>ಅಂಡರ್ಪಾಸ್ನ ಬಾಕಿ ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಕೋಟ ತಿಳಿಸಿದರು.</p>.<p>‘ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ 2022ರಲ್ಲಿ ಆರಂಭವಾಗಿದ್ದು, ಕಾಮಗಾರಿ ಸ್ಥಳದಲ್ಲಿ ಎರಡು ಬೃಹತ್ ಗಾತ್ರದ ಬಂಡೆಗಳು ಸಿಕ್ಕಿದ ಕಾರಣ ಅದನ್ನು ಒಡೆಯಬಾರದು ಎಂದು ಅಕ್ಕಪಕ್ಕದವರು ತಡೆಯಾಜ್ಞೆ ತಂದಿದ್ದರು. ಈ ಕಾರಣಕ್ಕೆ ಕಾಮಗಾರಿ ವಿಳಂಬವಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಅಂಡರ್ಪಾಸ್ಗೆ ಸಂಬಂಧಿಸಿದ ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇದ್ದು, ಮಳೆಗಾಲದೊಳಗೆ ಅದನ್ನು ಪೂರ್ಣಗೊಳಿಸಲಾಗುವುದು. ಈಗ ತುರ್ತಾಗಿ ಜನರಿಗೆ ಅನುಕೂಲವಾಗಲು ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ’ ಎಂದರು.</p>.<p>‘ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ಪಾಸ್ ಕಾಮಗಾರಿ ಸ್ಥಳದಲ್ಲಿ ಒಂದು ಬದಿಯ ರಸ್ತೆಯನ್ನು 15 ದಿನಗಳೊಳಗೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಅನಂತರ ಎರಡನೇ ಹಂತದ ಕಾಮಗಾರಿ ನಡೆಯಲಿದೆ’ ಎಂದು ಸಂಸದರು ತಿಳಿಸಿದರು.</p>.<p>‘ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಮರಗಳ ಮತ್ತು ವಿದ್ಯುತ್ ಕಂಬಗಳ ತೆರವು ಕಾರ್ಯ ಈಗಾಗಲೇ ನಡೆದಿದೆ. ಕೆಲವರಿಗೆ ಪರಿಹಾರ ನೀಡುವುದು ಬಾಕಿ ಇತ್ತು. ಅದಷ್ಟು ಶೀಘ್ರ ಸಮಸ್ಯೆಗಳನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.</p>.<p>‘ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ಕೆಲವರು ನ್ಯಾಯಾಲಯಕ್ಕೆ ಹೋಗಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕಾನೂನು ತೊಡಕುಗಳನ್ನು ಪರಿಹರಿಸಿ ಅಲ್ಲೂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ’ ತಿಳಿಸಿದರು.</p>.<p>ಸಂತೆಕಟ್ಟೆಯಲ್ಲಿ ಅಂಡರ್ಪಾಸ್ನ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವುದರಿಂದ ಈಗಾಗಲೇ ಅದರಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-28-264067786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>