<p><strong>ಉಡುಪಿ:</strong> ‘ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಕಾಂಗ್ರೆಸ್ನವರ ಆರೋಪಗಳು ಸುಳ್ಳು ಎಂಬುದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಿಂದ ಸಾಬೀತಾಗಿದೆ’ ಎಂದು ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಮಂಗಳವಾರ ಹೇಳಿದರು.</p>.<p>ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ನಾಯಕರು ವಸ್ತುಸ್ಥಿತಿ ಪರಿಶೀಲಿಸದೆ, ಸುಳ್ಳು ಕಥೆಗಳನ್ನು ಸೃಷ್ಟಿಸಲು ಯತ್ನಿಸಿದರು. ಅವರಿಗೆ ಸೋಲಾಗಿದೆ’ ಎಂದರು.</p>.<p>‘ಮೂರ್ತಿ ಫೈಬರ್ನದ್ದು ಅಲ್ಲ ಹಿತ್ತಾಳೆಯದ್ದು ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಈ ಕುರಿತು ವಿಚಾರಣೆ ನಡೆಯಲಿ. ಥೀಮ್ ಪಾರ್ಕ್ ಕಾಮಗಾರಿ ಶ್ರೀಘ್ರ ಪೂರ್ಣಗೊಳಿಸಲಿ’ ಎಂದು ಒತ್ತಾಯಿಸಿದರು.</p>.<p><strong>‘ಕಂಚಿನ ಪ್ರತಿಮೆ ಎಲ್ಲಿದೆ?’</strong></p>.<p>‘ಪರಶುರಾಮನ ಮೂರ್ತಿ ಕುರಿತು ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ ತಕ್ಷಣ ಕಾರ್ಕಳ ಶಾಸಕರು ಮತ್ತು ಅವರ ಬೆಂಬಲಿಗರು ವಿಚಲಿತರಾದಂತೆ ಕಾಣುತ್ತದೆ’ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. </p>.<p>ಕಾಂಗ್ರೆಸ್ನವರಿಗೆ ಸೋಲಾಗಿದೆ ಎಂದು ಶಾಸಕರು ಹೇಳಿದ್ದಾರೆ. ಆದರೆ ಅವರು ನಿರ್ಮಿಸಿದ್ದ ಕಂಚಿನ ಪ್ರತಿಮೆ ಎಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಕಾಂಗ್ರೆಸ್ನವರ ಆರೋಪಗಳು ಸುಳ್ಳು ಎಂಬುದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಿಂದ ಸಾಬೀತಾಗಿದೆ’ ಎಂದು ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಮಂಗಳವಾರ ಹೇಳಿದರು.</p>.<p>ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ನಾಯಕರು ವಸ್ತುಸ್ಥಿತಿ ಪರಿಶೀಲಿಸದೆ, ಸುಳ್ಳು ಕಥೆಗಳನ್ನು ಸೃಷ್ಟಿಸಲು ಯತ್ನಿಸಿದರು. ಅವರಿಗೆ ಸೋಲಾಗಿದೆ’ ಎಂದರು.</p>.<p>‘ಮೂರ್ತಿ ಫೈಬರ್ನದ್ದು ಅಲ್ಲ ಹಿತ್ತಾಳೆಯದ್ದು ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಈ ಕುರಿತು ವಿಚಾರಣೆ ನಡೆಯಲಿ. ಥೀಮ್ ಪಾರ್ಕ್ ಕಾಮಗಾರಿ ಶ್ರೀಘ್ರ ಪೂರ್ಣಗೊಳಿಸಲಿ’ ಎಂದು ಒತ್ತಾಯಿಸಿದರು.</p>.<p><strong>‘ಕಂಚಿನ ಪ್ರತಿಮೆ ಎಲ್ಲಿದೆ?’</strong></p>.<p>‘ಪರಶುರಾಮನ ಮೂರ್ತಿ ಕುರಿತು ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ ತಕ್ಷಣ ಕಾರ್ಕಳ ಶಾಸಕರು ಮತ್ತು ಅವರ ಬೆಂಬಲಿಗರು ವಿಚಲಿತರಾದಂತೆ ಕಾಣುತ್ತದೆ’ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. </p>.<p>ಕಾಂಗ್ರೆಸ್ನವರಿಗೆ ಸೋಲಾಗಿದೆ ಎಂದು ಶಾಸಕರು ಹೇಳಿದ್ದಾರೆ. ಆದರೆ ಅವರು ನಿರ್ಮಿಸಿದ್ದ ಕಂಚಿನ ಪ್ರತಿಮೆ ಎಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>