<p><strong>ಶಿರ್ವ</strong>: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಒಂದು ಭಾಗದಲ್ಲಿ ಅಂಡರ್ಪಾಸ್ ರಸ್ತೆ ನಿರ್ಮಿಸಲಾಗಿದ್ದು, ಮಂಗಳೂರು ಕಡೆಯಿಂದ ಉಡುಪಿಗೆ ಬರುವ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.</p>.<p>ಮತ್ತೊಂದು ಕಡೆ ರಸ್ತೆ ಭಾಗವನ್ನು ಆಳವಾಗಿ ಅಗೆಯಲಾಗಿದ್ದು, ಮುಂಬರುವ ಮಳೆಗಾಲದಲ್ಲಿ ಮೇಲ್ಭಾಗದ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆ. ನಾಲ್ಕಾರು ದಿನಗಳಿಂದ ಮಳೆಯಾಗುತ್ತಿದ್ದು, ಮುಂಗಾರು ಶುರುವಾಗುವ ಮುನ್ನ ಹೆದ್ದಾರಿ ಕಾಮಗಾರಿಗೆ ಇನ್ನಷ್ಟು ವೇಗ ನೀಡಬೇಕಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಇದೇ ಇಕ್ಕಟ್ಟಿನ ಸರ್ವಿಸ್ ರಸ್ತೆಯಲ್ಲಿ ಪ್ರತಿದಿನ ಭಾರಿ ವಾಹನಗಳು, ಬಸ್ಗಳು ಹಾಗೂ ಇತರ ಘನ ವಾಹನಗಳು ನಿರಂತರವಾಗಿ ಸಂಚರಿಸುತ್ತವೆ.</p>.<p>ಮಳೆಗಾಲ ಆರಂಭವಾಗಿರುವ ಕಾರಣ ಕಾಮಗಾರಿ ಪ್ರದೇಶದ ಸುತ್ತಮುತ್ತ ಮಣ್ಣು ಸಡಿಲಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಎತ್ತರದಲ್ಲಿರುವ ಸರ್ವಿಸ್ ರಸ್ತೆ ಕುಸಿತ ಅಥವಾ ಭೂಕುಸಿತದಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಎದುರಾಗಿದೆ. ಮೇಲ್ಭಾಗದಲ್ಲಿ ವಾಹನ ಸಂಚಾರ ನಡೆಯುತ್ತಿರುವಾಗ ರಸ್ತೆಯ ಅಂಚಿನಲ್ಲಿಯೇ ಕೆಳಭಾಗದಲ್ಲಿ ಆಳವಾದ ತೋಡು ನಿರ್ಮಾಣವಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಬೇಕಿದೆ.</p>.<p>ಕಾಮಗಾರಿ ನಡೆಯುತ್ತಿರುವ ಸರ್ವಿಸ್ ರಸ್ತೆ ಪಕ್ಕದಲ್ಲಿ ತಾತ್ಕಾಲಿಕ ತಡೆಬೇಲಿ ಅಳವಡಿಸಬೇಕಾಗಿದೆ. ರಾತ್ರಿ ಸಮಯದಲ್ಲಿ ವಾಹನಗಳ ಸಂಚಾರಕ್ಕೆ ಮತ್ತು ಪಾದಚಾರಿಗಳಿಗೆ ಸುರಕ್ಷತೆ ಬೇಕಾಗಿದೆ. ನಿರಂತರ ಮಳೆ ಸುರಿದರೆ ರಸ್ತೆಯ ಬದಿಯಲ್ಲಿ ಮಣ್ಣು ಕುಸಿತದ ಭೀತಿ ಇರುತ್ತದೆ ಎನ್ನುತ್ತಾರೆ ಸ್ಥಳೀಯ ದಯಾನಂದ ಶೆಟ್ಟಿ ದೆಂದೂರು.</p>.<p>ಹೆದ್ದಾರಿ ಕಾಮಗಾರಿ ನಡೆಯುವಲ್ಲಿ ಮಣ್ಣು ಕುಸಿಯದಂತೆ ಸುರಕ್ಷತಾ ತಡೆಗೋಡೆ ಅಳವಡಿಸಿ, ಮೃದು ಮಣ್ಣು ಜಾರದಂತೆ ಬಲಪಡಿಸುವ ವ್ಯವಸ್ಥೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಫಲಕಗಳನ್ನು ಅಲ್ಲಲ್ಲಿ ಅಳವಡಿಕೆ ಮಾಡಬೇಕು ಮತ್ತು ರಾತ್ರಿ ವೇಳೆ ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.</p>.<p>ಸಾರ್ವಜನಿಕರ ಜೀವ ಭದ್ರತೆಗಿಂತ ಯಾವುದೇ ಕಾಮಗಾರಿ ಮುಖ್ಯವಲ್ಲ. ಅನಾಹುತ ಸಂಭವಿಸುವುದಕ್ಕಿಂತ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮವಹಿಸುವ ಅಗತ್ಯವಿದೆ. ಆರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕಾಮಗಾರಿ ನಿರ್ವಹಣಾ ಸಂಸ್ಥೆಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ತಕ್ರಮ ಕೈಗೊಳ್ಳಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ಯಾಂಕಿ ಡಿಸೋಜ ಕೊಳಲಗಿರಿ ಆಗ್ರಹಿಸಿದ್ದಾರೆ.</p>.<div><blockquote>ಉಡುಪಿ ಮಂಗಳೂರು ಕಡೆಯ ಅಂಡರ್ಪಾಸ್ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿ ವೇಳೆ ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಬೇಕು. </blockquote><span class="attribution">– ದಯಾನಂದ ಶೆಟ್ಟಿ, ಸ್ಥಳೀಯ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260526-28-757865887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರ್ವ</strong>: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಒಂದು ಭಾಗದಲ್ಲಿ ಅಂಡರ್ಪಾಸ್ ರಸ್ತೆ ನಿರ್ಮಿಸಲಾಗಿದ್ದು, ಮಂಗಳೂರು ಕಡೆಯಿಂದ ಉಡುಪಿಗೆ ಬರುವ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.</p>.<p>ಮತ್ತೊಂದು ಕಡೆ ರಸ್ತೆ ಭಾಗವನ್ನು ಆಳವಾಗಿ ಅಗೆಯಲಾಗಿದ್ದು, ಮುಂಬರುವ ಮಳೆಗಾಲದಲ್ಲಿ ಮೇಲ್ಭಾಗದ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆ. ನಾಲ್ಕಾರು ದಿನಗಳಿಂದ ಮಳೆಯಾಗುತ್ತಿದ್ದು, ಮುಂಗಾರು ಶುರುವಾಗುವ ಮುನ್ನ ಹೆದ್ದಾರಿ ಕಾಮಗಾರಿಗೆ ಇನ್ನಷ್ಟು ವೇಗ ನೀಡಬೇಕಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಇದೇ ಇಕ್ಕಟ್ಟಿನ ಸರ್ವಿಸ್ ರಸ್ತೆಯಲ್ಲಿ ಪ್ರತಿದಿನ ಭಾರಿ ವಾಹನಗಳು, ಬಸ್ಗಳು ಹಾಗೂ ಇತರ ಘನ ವಾಹನಗಳು ನಿರಂತರವಾಗಿ ಸಂಚರಿಸುತ್ತವೆ.</p>.<p>ಮಳೆಗಾಲ ಆರಂಭವಾಗಿರುವ ಕಾರಣ ಕಾಮಗಾರಿ ಪ್ರದೇಶದ ಸುತ್ತಮುತ್ತ ಮಣ್ಣು ಸಡಿಲಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಎತ್ತರದಲ್ಲಿರುವ ಸರ್ವಿಸ್ ರಸ್ತೆ ಕುಸಿತ ಅಥವಾ ಭೂಕುಸಿತದಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಎದುರಾಗಿದೆ. ಮೇಲ್ಭಾಗದಲ್ಲಿ ವಾಹನ ಸಂಚಾರ ನಡೆಯುತ್ತಿರುವಾಗ ರಸ್ತೆಯ ಅಂಚಿನಲ್ಲಿಯೇ ಕೆಳಭಾಗದಲ್ಲಿ ಆಳವಾದ ತೋಡು ನಿರ್ಮಾಣವಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಬೇಕಿದೆ.</p>.<p>ಕಾಮಗಾರಿ ನಡೆಯುತ್ತಿರುವ ಸರ್ವಿಸ್ ರಸ್ತೆ ಪಕ್ಕದಲ್ಲಿ ತಾತ್ಕಾಲಿಕ ತಡೆಬೇಲಿ ಅಳವಡಿಸಬೇಕಾಗಿದೆ. ರಾತ್ರಿ ಸಮಯದಲ್ಲಿ ವಾಹನಗಳ ಸಂಚಾರಕ್ಕೆ ಮತ್ತು ಪಾದಚಾರಿಗಳಿಗೆ ಸುರಕ್ಷತೆ ಬೇಕಾಗಿದೆ. ನಿರಂತರ ಮಳೆ ಸುರಿದರೆ ರಸ್ತೆಯ ಬದಿಯಲ್ಲಿ ಮಣ್ಣು ಕುಸಿತದ ಭೀತಿ ಇರುತ್ತದೆ ಎನ್ನುತ್ತಾರೆ ಸ್ಥಳೀಯ ದಯಾನಂದ ಶೆಟ್ಟಿ ದೆಂದೂರು.</p>.<p>ಹೆದ್ದಾರಿ ಕಾಮಗಾರಿ ನಡೆಯುವಲ್ಲಿ ಮಣ್ಣು ಕುಸಿಯದಂತೆ ಸುರಕ್ಷತಾ ತಡೆಗೋಡೆ ಅಳವಡಿಸಿ, ಮೃದು ಮಣ್ಣು ಜಾರದಂತೆ ಬಲಪಡಿಸುವ ವ್ಯವಸ್ಥೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಫಲಕಗಳನ್ನು ಅಲ್ಲಲ್ಲಿ ಅಳವಡಿಕೆ ಮಾಡಬೇಕು ಮತ್ತು ರಾತ್ರಿ ವೇಳೆ ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.</p>.<p>ಸಾರ್ವಜನಿಕರ ಜೀವ ಭದ್ರತೆಗಿಂತ ಯಾವುದೇ ಕಾಮಗಾರಿ ಮುಖ್ಯವಲ್ಲ. ಅನಾಹುತ ಸಂಭವಿಸುವುದಕ್ಕಿಂತ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮವಹಿಸುವ ಅಗತ್ಯವಿದೆ. ಆರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕಾಮಗಾರಿ ನಿರ್ವಹಣಾ ಸಂಸ್ಥೆಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ತಕ್ರಮ ಕೈಗೊಳ್ಳಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ಯಾಂಕಿ ಡಿಸೋಜ ಕೊಳಲಗಿರಿ ಆಗ್ರಹಿಸಿದ್ದಾರೆ.</p>.<div><blockquote>ಉಡುಪಿ ಮಂಗಳೂರು ಕಡೆಯ ಅಂಡರ್ಪಾಸ್ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿ ವೇಳೆ ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಬೇಕು. </blockquote><span class="attribution">– ದಯಾನಂದ ಶೆಟ್ಟಿ, ಸ್ಥಳೀಯ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260526-28-757865887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>