<p><strong>ಉಡುಪಿ:</strong> ಲೋಕ ಕಲ್ಯಾಣದ ಆಶಯದೊಂದಿಗೆ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಂತ್ರ ಜಪಯಜ್ಞ ಆರಂಭಿಸಲಾಗುತ್ತಿದ್ದು, ಮೇ 10 ರಂದು ಅದಕ್ಕೆ ಚಾಲನೆ ನೀಡಲಾಗುವುದು ಎಂದು ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಅಂದು ಸಂಜೆ 5 ಗಂಟೆಗೆ ಬೆಂಗಳೂರಿನ ಇಸ್ಕಾನ್ ಸಂಸ್ಥೆಯ ಚಂಚಲಪತಿದಾಸ್ ಅವರು ಈ ಯೋಜನೆಯ ವೆಬ್ಸೈಟ್ ಉದ್ಘಾಟಿಸುವರು ಎಂದು ಹೇಳಿದರು.</p>.<p>ಕೇವಲ ಮಂತ್ರ ಜಪ ಮಾತ್ರವಲ್ಲದೆ, ಭಕ್ತರು ಆ ಸಮಯದಲ್ಲಿ ತಮ್ಮಲ್ಲಿರುವ ಯಾವುದಾದರೂ ಒಂದು ದುಶ್ಚಟವನ್ನು ತ್ಯಾಗ ಮಾಡುವ ಸಂಕಲ್ಪ ಮಾಡಬೇಕು. ಆ ಮೂಲಕ ಆಧ್ಯಾತ್ಮಿಕ ಶಕ್ತಿಯೊಂದಿಗೆ ಸಮಾಜದಲ್ಲಿ ಸದ್ವರ್ತನೆಯನ್ನು ಬೆಳೆಸುವುದು ನಮ್ಮ ಆಶಯವಾಗಿದೆ ಎಂದರು.</p>.<p>ಮಠದ ದಿವಾನ ಉದಯ ಸರಳತ್ತಾಯ ಮಾತನಾಡಿ, ಕೃಷ್ಣಮಂತ್ರ ಜಪವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಬೇಕು. ಮಂತ್ರಜಪ ಲೇಖನ ಪುಸ್ತಕವನ್ನು ಮಠದಿಂದಲೇ ಒದಗಿಸಲಾಗುವುದು ಎಂದು ಹೇಳಿದರು.</p>.<p>ಮಠಕ್ಕೆ ಬರುವ ಭಕ್ತರು ಮಳೆ ಮತ್ತು ಬಿಸಿಲಿನಿಂದ ತೊಂದರೆ ಅನುಭವಿಸಬಾರದು ಎಂಬ ದೃಷ್ಟಿಯಿಂದ ಸುಸಜ್ಜಿತ ದರ್ಶನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.</p>.<p>ವಿಶೇಷ ದರ್ಶನಕ್ಕೆ ಪಾಸ್ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಪಾಸ್ಗೆ ₹300 ನಿಗದಿ ಮಾಡಲಾಗಿದೆ. ನಿತ್ಯ ಬರುವ ಸ್ಥಳೀಯ ಭಕ್ತರಿಗೆ ಪ್ರತ್ಯೇಕ ಪಾಸ್ ನೀಡಲಾಗುವುದು. ಅದನ್ನು ಬಳಸಿ ನಿತ್ಯ ಕೃಷ್ಣ ದರ್ಶನ ಮಾಡಬಹುದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-28-1551975324</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಲೋಕ ಕಲ್ಯಾಣದ ಆಶಯದೊಂದಿಗೆ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಂತ್ರ ಜಪಯಜ್ಞ ಆರಂಭಿಸಲಾಗುತ್ತಿದ್ದು, ಮೇ 10 ರಂದು ಅದಕ್ಕೆ ಚಾಲನೆ ನೀಡಲಾಗುವುದು ಎಂದು ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಅಂದು ಸಂಜೆ 5 ಗಂಟೆಗೆ ಬೆಂಗಳೂರಿನ ಇಸ್ಕಾನ್ ಸಂಸ್ಥೆಯ ಚಂಚಲಪತಿದಾಸ್ ಅವರು ಈ ಯೋಜನೆಯ ವೆಬ್ಸೈಟ್ ಉದ್ಘಾಟಿಸುವರು ಎಂದು ಹೇಳಿದರು.</p>.<p>ಕೇವಲ ಮಂತ್ರ ಜಪ ಮಾತ್ರವಲ್ಲದೆ, ಭಕ್ತರು ಆ ಸಮಯದಲ್ಲಿ ತಮ್ಮಲ್ಲಿರುವ ಯಾವುದಾದರೂ ಒಂದು ದುಶ್ಚಟವನ್ನು ತ್ಯಾಗ ಮಾಡುವ ಸಂಕಲ್ಪ ಮಾಡಬೇಕು. ಆ ಮೂಲಕ ಆಧ್ಯಾತ್ಮಿಕ ಶಕ್ತಿಯೊಂದಿಗೆ ಸಮಾಜದಲ್ಲಿ ಸದ್ವರ್ತನೆಯನ್ನು ಬೆಳೆಸುವುದು ನಮ್ಮ ಆಶಯವಾಗಿದೆ ಎಂದರು.</p>.<p>ಮಠದ ದಿವಾನ ಉದಯ ಸರಳತ್ತಾಯ ಮಾತನಾಡಿ, ಕೃಷ್ಣಮಂತ್ರ ಜಪವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಬೇಕು. ಮಂತ್ರಜಪ ಲೇಖನ ಪುಸ್ತಕವನ್ನು ಮಠದಿಂದಲೇ ಒದಗಿಸಲಾಗುವುದು ಎಂದು ಹೇಳಿದರು.</p>.<p>ಮಠಕ್ಕೆ ಬರುವ ಭಕ್ತರು ಮಳೆ ಮತ್ತು ಬಿಸಿಲಿನಿಂದ ತೊಂದರೆ ಅನುಭವಿಸಬಾರದು ಎಂಬ ದೃಷ್ಟಿಯಿಂದ ಸುಸಜ್ಜಿತ ದರ್ಶನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.</p>.<p>ವಿಶೇಷ ದರ್ಶನಕ್ಕೆ ಪಾಸ್ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಪಾಸ್ಗೆ ₹300 ನಿಗದಿ ಮಾಡಲಾಗಿದೆ. ನಿತ್ಯ ಬರುವ ಸ್ಥಳೀಯ ಭಕ್ತರಿಗೆ ಪ್ರತ್ಯೇಕ ಪಾಸ್ ನೀಡಲಾಗುವುದು. ಅದನ್ನು ಬಳಸಿ ನಿತ್ಯ ಕೃಷ್ಣ ದರ್ಶನ ಮಾಡಬಹುದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-28-1551975324</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>