<p>ಉಡುಪಿ: ಮಕ್ಕಳು ಇಂದು ಮೊಬೈಲ್ ಫೋನ್ಗಳಿಗೆ ಅತಿಯಾಗಿ ದಾಸರಾಗುತ್ತಿದ್ದು, ಅವರ ನೈಸರ್ಗಿಕ ಬೌದ್ಧಿಕ ಬೆಳವಣಿಗೆ ಕುಂಠಿತವಾಗುತ್ತಿದೆ. ಈ ಸಮಸ್ಯೆಯನ್ನು ಮನಗಂಡು ಮಕ್ಕಳನ್ನು ಮೊಬೈಲ್ ಫೋನ್ ಚಟದಿಂದ ಮುಕ್ತಗೊಳಿಸಲು ಪುತ್ತಿಗೆ ಮಠ ವತಿಯಿಂದ ಮೇ 14ರಿಂದ ಮೊಬೈಲ್ ವರ್ಜನ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.</p>.<p>ಗೀತಾಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 6ರಿಂದ 12 ವರ್ಷ ವಯಸ್ಸಿನೊಳಗಿನ ಮಕ್ಕಳಿಗಾಗಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲಮಠದ ಪರಿಸರದಲ್ಲಿ ನಾಲ್ಕು ದಿನಗಳ ಶಿಬಿರ ನಡೆಯಲಿದೆ.</p>.<p>ಮೇ 14ರಿಂದ 18ರವರೆಗೆ ನಡೆಯುವ ಶಿಬಿರದಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಬಳಸದಂತೆ ನಿರ್ಬಂಧ ವಿಧಿಸಿ ಅದಕ್ಕೆ ಬದಲಾಗಿ ದೇಸೀ ಕ್ರೀಡೆಗಳು, ಸಾಂಪ್ರದಾಯಿಕ ಆಟಗಳು ಮತ್ತು ಆಧ್ಯಾತ್ಮಿಕ- ಧಾರ್ಮಿಕ ಚಿಂತನೆಯಲ್ಲಿ ತೊಡಗಿಸಲಾಗುತ್ತದೆ. ಮೊಬೈಲ್ ಫೋನ್ ಇಲ್ಲದೆಯೂ ಸಂತೋಷದಿಂದ ಇರಲು ಸಾಧ್ಯವಿದೆ ಎಂಬ ವಾಸ್ತವವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡುವುದು ಈ ಶಿಬಿರದ ಮೂಲ ಉದ್ದೇಶವಾಗಿದೆ ಎಂದರು.</p>.<p>ಸರ್ಕಾರವೂ ಮಕ್ಕಳ ಮೊಬೈಲ್ ಫೋಣ್ ಬಳಕೆ ನಿಷೇಧ ಕುರಿತ ಕಾನೂನು ರೂಪಿಸಲು ಚಿಂತನೆ ನಡೆಸುತ್ತಿರುವ ಕಾರಣಕ್ಕೆ ಅದಕ್ಕೆ ಪೂರಕವಾಗಿ ಈ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳ ಹೆತ್ತವರು ಮತ್ತು ಪಾಲಕರಿಗೂ ಈ ಕುರಿತು ಮಾಹಿತಿ ನೀಡಲಾಗುವುದು ಎಂದು ಹೇಳಿದರು.</p>.<p>ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಮಕ್ಕಳ ಪೋಷಕರು ಮೇ 10ರೊಳಗಾಗಿ ತಮ್ಮ ಅರ್ಜಿಯನ್ನು ಉಡುಪಿಯ ಗೀತಾ ಮಂದಿರ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಮೇ 14ರಂದು ಬೆಳಿಗ್ಗೆ 10ಕ್ಕೆ ಪುತ್ತಿಗೆ ಮಠದ ನೃಸಿಂಹ ಸಭಾಭವನದಲ್ಲಿ ಶಿಬಿರದ ಉದ್ಘಾಟನೆ ನಡೆಯಲಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ರತೀಶ ತಂತ್ರಿ ಮತ್ತು ರಮೇಶ ಭಟ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-28-231668957</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಮಕ್ಕಳು ಇಂದು ಮೊಬೈಲ್ ಫೋನ್ಗಳಿಗೆ ಅತಿಯಾಗಿ ದಾಸರಾಗುತ್ತಿದ್ದು, ಅವರ ನೈಸರ್ಗಿಕ ಬೌದ್ಧಿಕ ಬೆಳವಣಿಗೆ ಕುಂಠಿತವಾಗುತ್ತಿದೆ. ಈ ಸಮಸ್ಯೆಯನ್ನು ಮನಗಂಡು ಮಕ್ಕಳನ್ನು ಮೊಬೈಲ್ ಫೋನ್ ಚಟದಿಂದ ಮುಕ್ತಗೊಳಿಸಲು ಪುತ್ತಿಗೆ ಮಠ ವತಿಯಿಂದ ಮೇ 14ರಿಂದ ಮೊಬೈಲ್ ವರ್ಜನ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.</p>.<p>ಗೀತಾಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 6ರಿಂದ 12 ವರ್ಷ ವಯಸ್ಸಿನೊಳಗಿನ ಮಕ್ಕಳಿಗಾಗಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲಮಠದ ಪರಿಸರದಲ್ಲಿ ನಾಲ್ಕು ದಿನಗಳ ಶಿಬಿರ ನಡೆಯಲಿದೆ.</p>.<p>ಮೇ 14ರಿಂದ 18ರವರೆಗೆ ನಡೆಯುವ ಶಿಬಿರದಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಬಳಸದಂತೆ ನಿರ್ಬಂಧ ವಿಧಿಸಿ ಅದಕ್ಕೆ ಬದಲಾಗಿ ದೇಸೀ ಕ್ರೀಡೆಗಳು, ಸಾಂಪ್ರದಾಯಿಕ ಆಟಗಳು ಮತ್ತು ಆಧ್ಯಾತ್ಮಿಕ- ಧಾರ್ಮಿಕ ಚಿಂತನೆಯಲ್ಲಿ ತೊಡಗಿಸಲಾಗುತ್ತದೆ. ಮೊಬೈಲ್ ಫೋನ್ ಇಲ್ಲದೆಯೂ ಸಂತೋಷದಿಂದ ಇರಲು ಸಾಧ್ಯವಿದೆ ಎಂಬ ವಾಸ್ತವವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡುವುದು ಈ ಶಿಬಿರದ ಮೂಲ ಉದ್ದೇಶವಾಗಿದೆ ಎಂದರು.</p>.<p>ಸರ್ಕಾರವೂ ಮಕ್ಕಳ ಮೊಬೈಲ್ ಫೋಣ್ ಬಳಕೆ ನಿಷೇಧ ಕುರಿತ ಕಾನೂನು ರೂಪಿಸಲು ಚಿಂತನೆ ನಡೆಸುತ್ತಿರುವ ಕಾರಣಕ್ಕೆ ಅದಕ್ಕೆ ಪೂರಕವಾಗಿ ಈ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳ ಹೆತ್ತವರು ಮತ್ತು ಪಾಲಕರಿಗೂ ಈ ಕುರಿತು ಮಾಹಿತಿ ನೀಡಲಾಗುವುದು ಎಂದು ಹೇಳಿದರು.</p>.<p>ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಮಕ್ಕಳ ಪೋಷಕರು ಮೇ 10ರೊಳಗಾಗಿ ತಮ್ಮ ಅರ್ಜಿಯನ್ನು ಉಡುಪಿಯ ಗೀತಾ ಮಂದಿರ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಮೇ 14ರಂದು ಬೆಳಿಗ್ಗೆ 10ಕ್ಕೆ ಪುತ್ತಿಗೆ ಮಠದ ನೃಸಿಂಹ ಸಭಾಭವನದಲ್ಲಿ ಶಿಬಿರದ ಉದ್ಘಾಟನೆ ನಡೆಯಲಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ರತೀಶ ತಂತ್ರಿ ಮತ್ತು ರಮೇಶ ಭಟ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-28-231668957</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>