<p><strong>ಪಡುಬಿದ್ರಿ</strong>: ಕಾಪು ಪುರಸಭೆ ವತಿಯಿಂದ ಮೂಳೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೊಳಚೆ ನೀರು ಶುದ್ಧೀಕರಣ ಘಟಕ (ಎಸ್ಟಿಪಿ) ವಿರೋಧಿಸಿ ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ, ಮೂಳೂರು ವತಿಯಿಂದ ಪ್ರತಿಭಟನೆ ನಡೆಯಿತು.</p>.<p>ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡದೆ ಜಮೀನನ್ನು ಹಸ್ತಾಂತರಿಸಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಘಟಕ ನಿರ್ಮಾಣಕ್ಕೆ ಸಂಬಂಧಿಸಿ ಆಕ್ಷೇಪ ಸಲ್ಲಿಸಲಾಗಿದ್ದು, ಈ ಪ್ರದೇಶ ಪರಿಸರ, ನೀರಿನ ಮೂಲಗಳ ದೃಷ್ಟಿಯಿಂದ ಅತಿ ಮಹತ್ವದ್ದಾಗಿದೆ ಎಂದು ಹೇಳಿದರು.</p>.<p>ಪ್ರಸ್ತಾವಿತ ಜಮೀನಿನಲ್ಲಿ ವರ್ಷಪೂರ್ತಿ ನೀರಿನ ಆಶ್ರಯವಿದ್ದು, ವಿಶೇಷವಾಗಿ ಬೇಸಿಗೆಯಲ್ಲಿಯೂ ನೀರು ಸಂಗ್ರಹವಿರುತ್ತದೆ. ಇಲ್ಲಿ ಅಪರೂಪದ ತಾವರೆ ಹೂಗಳು ಬೆಳೆಯುತ್ತವೆ. ಹಲವು ಪ್ರಾಣಿ– ಪಕ್ಷಿಗಳಿಗೆ ಇದು ಆಶ್ರಯ ತಾಣವಾಗಿದೆ. ಸಮೀಪದಲ್ಲಿ ಕೃಷಿ ಜಮೀನುಗಳಿದ್ದು, ಈ ಪ್ರದೇಶ ಕೃಷಿಗೆ ಫಲವತ್ತಾದ ಭೂಮಿಯಾಗಿದೆ. ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸಿದಲ್ಲಿ ಸಮಸ್ಯೆಯಾಗಲಿದೆ ಎಂದು ಸ್ಥಳೀಯರು ಹೇಳಿದರು.</p>.<p>ಈ ಜಾಗದಲ್ಲಿರುವ ನೀರಿನ ಮಟ್ಟದಿಂದ ಸುತ್ತಮುತ್ತಲಿನ ಬಾವಿಗಳಲ್ಲಿಯೂ ನೀರಿನ ಲಭ್ಯತೆ ಉತ್ತಮವಾಗಿದೆ. ಒಂದು ವೇಳೆ ಈ ಹೊಂಡವನ್ನು ಕೃತಕವಾಗಿ ಮುಚ್ಚಿ ಎಸ್.ಟಿ.ಪಿ ನಿರ್ಮಿಸಿದಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಆದ್ದರಿಂದ ಪರಿಸರ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಮೂಳೂರು ಪ್ರದೇಶದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p><strong>ಮನವಿ:</strong> ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಹಶೀಲ್ದಾರ್ ಅಂನತ ಶಂಕರ್, ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರಿಗೆ ಮೂಳೂರು ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿಯವರು ಮನವಿ ಸಲ್ಲಿಸಿದರು.</p>.<p>ಮನೋಹರ ಅಡ್ಯಂತಾಯ ಬಿಕ್ರಿಗುತ್ತು, ಪ್ರಭಾತ್ ಶೆಟ್ಟಿ, ಪ್ರಕಾಶ್ ಅಂಚನ್, ಪುರಸಭೆ ಸದಸ್ಯರಾದ ಸತೀಶ್ಚಂದ್ರ, ಮಹಮ್ಮದ್ ಆಸೀಫ್, ಶಾಂಭವಿ ಕುಲಾಲ್, ಅಶೋಕ್ ಪುತ್ರನ್, ದೀಪಾ ಶೆಟ್ಟಿ, ಚಿತ್ತನ್ ಮೂಳೂರು, ಪುರುಷೋತ್ತಮ ಸಾಲಿಯಾನ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-28-393515376</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong>: ಕಾಪು ಪುರಸಭೆ ವತಿಯಿಂದ ಮೂಳೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೊಳಚೆ ನೀರು ಶುದ್ಧೀಕರಣ ಘಟಕ (ಎಸ್ಟಿಪಿ) ವಿರೋಧಿಸಿ ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ, ಮೂಳೂರು ವತಿಯಿಂದ ಪ್ರತಿಭಟನೆ ನಡೆಯಿತು.</p>.<p>ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡದೆ ಜಮೀನನ್ನು ಹಸ್ತಾಂತರಿಸಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಘಟಕ ನಿರ್ಮಾಣಕ್ಕೆ ಸಂಬಂಧಿಸಿ ಆಕ್ಷೇಪ ಸಲ್ಲಿಸಲಾಗಿದ್ದು, ಈ ಪ್ರದೇಶ ಪರಿಸರ, ನೀರಿನ ಮೂಲಗಳ ದೃಷ್ಟಿಯಿಂದ ಅತಿ ಮಹತ್ವದ್ದಾಗಿದೆ ಎಂದು ಹೇಳಿದರು.</p>.<p>ಪ್ರಸ್ತಾವಿತ ಜಮೀನಿನಲ್ಲಿ ವರ್ಷಪೂರ್ತಿ ನೀರಿನ ಆಶ್ರಯವಿದ್ದು, ವಿಶೇಷವಾಗಿ ಬೇಸಿಗೆಯಲ್ಲಿಯೂ ನೀರು ಸಂಗ್ರಹವಿರುತ್ತದೆ. ಇಲ್ಲಿ ಅಪರೂಪದ ತಾವರೆ ಹೂಗಳು ಬೆಳೆಯುತ್ತವೆ. ಹಲವು ಪ್ರಾಣಿ– ಪಕ್ಷಿಗಳಿಗೆ ಇದು ಆಶ್ರಯ ತಾಣವಾಗಿದೆ. ಸಮೀಪದಲ್ಲಿ ಕೃಷಿ ಜಮೀನುಗಳಿದ್ದು, ಈ ಪ್ರದೇಶ ಕೃಷಿಗೆ ಫಲವತ್ತಾದ ಭೂಮಿಯಾಗಿದೆ. ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸಿದಲ್ಲಿ ಸಮಸ್ಯೆಯಾಗಲಿದೆ ಎಂದು ಸ್ಥಳೀಯರು ಹೇಳಿದರು.</p>.<p>ಈ ಜಾಗದಲ್ಲಿರುವ ನೀರಿನ ಮಟ್ಟದಿಂದ ಸುತ್ತಮುತ್ತಲಿನ ಬಾವಿಗಳಲ್ಲಿಯೂ ನೀರಿನ ಲಭ್ಯತೆ ಉತ್ತಮವಾಗಿದೆ. ಒಂದು ವೇಳೆ ಈ ಹೊಂಡವನ್ನು ಕೃತಕವಾಗಿ ಮುಚ್ಚಿ ಎಸ್.ಟಿ.ಪಿ ನಿರ್ಮಿಸಿದಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಆದ್ದರಿಂದ ಪರಿಸರ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಮೂಳೂರು ಪ್ರದೇಶದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p><strong>ಮನವಿ:</strong> ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಹಶೀಲ್ದಾರ್ ಅಂನತ ಶಂಕರ್, ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರಿಗೆ ಮೂಳೂರು ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿಯವರು ಮನವಿ ಸಲ್ಲಿಸಿದರು.</p>.<p>ಮನೋಹರ ಅಡ್ಯಂತಾಯ ಬಿಕ್ರಿಗುತ್ತು, ಪ್ರಭಾತ್ ಶೆಟ್ಟಿ, ಪ್ರಕಾಶ್ ಅಂಚನ್, ಪುರಸಭೆ ಸದಸ್ಯರಾದ ಸತೀಶ್ಚಂದ್ರ, ಮಹಮ್ಮದ್ ಆಸೀಫ್, ಶಾಂಭವಿ ಕುಲಾಲ್, ಅಶೋಕ್ ಪುತ್ರನ್, ದೀಪಾ ಶೆಟ್ಟಿ, ಚಿತ್ತನ್ ಮೂಳೂರು, ಪುರುಷೋತ್ತಮ ಸಾಲಿಯಾನ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-28-393515376</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>