ಘಟನೆ ಸಂಬಂಧ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಪ್ರಸನ್ನ ‘ಬೋಳ ಗ್ರಾಮ ಪಂಚಾಯಿತಿಯ ಗಮನಕ್ಕೆ ಬಾರದಂತೆ ಕೆಲವರು ಪಡುಗಿರಿ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ ಹಾಕಿದ್ದು, ವಿಷಯ ತಿಳಿದ ಕೂಡಲೇ ತೆರವುಗೊಳಿಸಲಾಗಿದೆ. ಕಾರ್ಕಳ ಕಾರ್ಯ ನಿರ್ವಾಹಕ ಅಧಿಕಾರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಫಲಕ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು