<p><strong>ಪಡುಬಿದ್ರಿ (ಉಡುಪಿ):</strong> ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಮಂಗಳವಾರ ತರಾಟೆಗೆ ತೆಗೆದುಕೊಂಡರು.</p><p>ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಕಾರ್ಯನಿರ್ವಾಹಕ ಎಂಜಿನಿಯರ್ ರಘು ಎಲ್. ಹಾಗೂ ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಅಧಿಕಾರಿಗಳು ಬರುವ ಸುದ್ದಿ ತಿಳಿದು ಟೋಲ್ ವಿರೋಧಿ ಹೋರಾಟಗಾರರು ಸ್ಥಳದಲ್ಲಿ ಸೇರಿದ್ದರು. </p><p>ಸ್ಥಳಕ್ಕೆ ಬಂದ ಅಧಿಕಾರಿಗಳು ಟೋಲ್ ವಿರೋಧಿ ಹೋರಾಟಗಾರರ ಮುಖಂಡರಿಗೆ ಟೋಲ್ ಕುರಿತ ಮಾಹಿತಿ ನೀಡಿದರು. ಈ ವೇಳೆ ಯಾವುದೇ ಕಾರಣಕ್ಕೂ ಇಲ್ಲಿ ಟೋಲ್ ಗೇಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೋರಾಟಗಾರರು ಪಟ್ಟುಹಿಡಿದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. </p><p>ಈ ವೇಳೆ ಟೋಲ್ ಗೇಟ್ ಗುತ್ತಿಗೆ ವಹಿಸಿಕೊಂಡ ಕಂಪನಿಯ ಸಿಬ್ಬಂದಿ ಹಾಗೂ ಟೋಲ್ ವಿರೋಧಿ ಹೋರಾಟಗಾರರ ಮಧ್ಯೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪರಿಸ್ಥಿತಿ ಶಾಂತಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ (ಉಡುಪಿ):</strong> ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಮಂಗಳವಾರ ತರಾಟೆಗೆ ತೆಗೆದುಕೊಂಡರು.</p><p>ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಕಾರ್ಯನಿರ್ವಾಹಕ ಎಂಜಿನಿಯರ್ ರಘು ಎಲ್. ಹಾಗೂ ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಅಧಿಕಾರಿಗಳು ಬರುವ ಸುದ್ದಿ ತಿಳಿದು ಟೋಲ್ ವಿರೋಧಿ ಹೋರಾಟಗಾರರು ಸ್ಥಳದಲ್ಲಿ ಸೇರಿದ್ದರು. </p><p>ಸ್ಥಳಕ್ಕೆ ಬಂದ ಅಧಿಕಾರಿಗಳು ಟೋಲ್ ವಿರೋಧಿ ಹೋರಾಟಗಾರರ ಮುಖಂಡರಿಗೆ ಟೋಲ್ ಕುರಿತ ಮಾಹಿತಿ ನೀಡಿದರು. ಈ ವೇಳೆ ಯಾವುದೇ ಕಾರಣಕ್ಕೂ ಇಲ್ಲಿ ಟೋಲ್ ಗೇಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೋರಾಟಗಾರರು ಪಟ್ಟುಹಿಡಿದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. </p><p>ಈ ವೇಳೆ ಟೋಲ್ ಗೇಟ್ ಗುತ್ತಿಗೆ ವಹಿಸಿಕೊಂಡ ಕಂಪನಿಯ ಸಿಬ್ಬಂದಿ ಹಾಗೂ ಟೋಲ್ ವಿರೋಧಿ ಹೋರಾಟಗಾರರ ಮಧ್ಯೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪರಿಸ್ಥಿತಿ ಶಾಂತಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>