<p><strong>ಉಡುಪಿ:</strong> ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಭಾನುವಾರ ಮುಂಜಾನೆ ನಗರದ ಜೋಡುಕಟ್ಟೆಯಿಂದ ಮಠದ ವರೆಗೆ ಭವ್ಯ ಮೆರವಣಿಗೆ ನಡೆಯಿತು.</p><p>ತಡರಾತ್ರಿ ಕಾಪುವಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ಪೂರೈಸಿ ಜೋಡುಕಟ್ಟೆಗೆ ಬಂದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು.</p><p>ವಾದ್ಯ, ಕೊಂಬು ಮೊದಲಾದ ಮಂಗಳವಾದ್ಯಗಳ ನಿನಾದ ಮುಗಿಲು ಮಟ್ಟಿತ್ತು. ಸಿಡಿಮದ್ದುಗಳನ್ನೂ ಸಿಡಿಸಲಾಯಿತು.</p><p>ಜೋಡುಕಟ್ಟೆಯಲ್ಲಿ ಶ್ರೀಪಾದರು ದೇವರಿಗೆ ಪೂಜೆ ಸಲ್ಲಿಸಿ, ಅಲಂಕೃತ ಮೇನೆಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮೆರವಣಿಗೆ ಆರಂಭವಾಯಿತು.</p><p>ಇತರ ಮಠಗಳ ಯತಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p><p>ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು. ಸಾವಿರಾರು ಮಂದಿ ಭಕ್ತರು ಮೆರವಣಿಗೆಯನ್ನು ಕಣ್ತುಂಬಿಕೊಂಡರು.</p><p>ತಟ್ಟಿರಾಯ, ಕೀಲು ಕುದುರೆ, ವಿವಿಧ ವೇಷಧಾರಿಗಳು, ಕುಣಿತ ಭಜನಾ ತಂಡ, ವಿವಿಧ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.</p><p>ಮೆರವಣಿಗೆ ರಥಬೀದಿ ತಲುಪಿದಾಗ ಶ್ರೀಪಾದರು ಮೇನೆಯಿಂದ ಇಳಿದು ಕನಕನ ಕಿಂಡಿಯಲ್ಲಿ ಕೃಷ್ಣ ದರ್ಶನ ಮಾಡಿದರು, ಬಳಿಕ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಕೃಷ್ಣಮಠ ಪ್ರವೇಶಿಸಿ ನವರತ್ನ ಕಿಂಡಿಯಲ್ಲಿ ಕೃಷ್ಣನ ದರ್ಶನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಭಾನುವಾರ ಮುಂಜಾನೆ ನಗರದ ಜೋಡುಕಟ್ಟೆಯಿಂದ ಮಠದ ವರೆಗೆ ಭವ್ಯ ಮೆರವಣಿಗೆ ನಡೆಯಿತು.</p><p>ತಡರಾತ್ರಿ ಕಾಪುವಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ಪೂರೈಸಿ ಜೋಡುಕಟ್ಟೆಗೆ ಬಂದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು.</p><p>ವಾದ್ಯ, ಕೊಂಬು ಮೊದಲಾದ ಮಂಗಳವಾದ್ಯಗಳ ನಿನಾದ ಮುಗಿಲು ಮಟ್ಟಿತ್ತು. ಸಿಡಿಮದ್ದುಗಳನ್ನೂ ಸಿಡಿಸಲಾಯಿತು.</p><p>ಜೋಡುಕಟ್ಟೆಯಲ್ಲಿ ಶ್ರೀಪಾದರು ದೇವರಿಗೆ ಪೂಜೆ ಸಲ್ಲಿಸಿ, ಅಲಂಕೃತ ಮೇನೆಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮೆರವಣಿಗೆ ಆರಂಭವಾಯಿತು.</p><p>ಇತರ ಮಠಗಳ ಯತಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p><p>ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು. ಸಾವಿರಾರು ಮಂದಿ ಭಕ್ತರು ಮೆರವಣಿಗೆಯನ್ನು ಕಣ್ತುಂಬಿಕೊಂಡರು.</p><p>ತಟ್ಟಿರಾಯ, ಕೀಲು ಕುದುರೆ, ವಿವಿಧ ವೇಷಧಾರಿಗಳು, ಕುಣಿತ ಭಜನಾ ತಂಡ, ವಿವಿಧ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.</p><p>ಮೆರವಣಿಗೆ ರಥಬೀದಿ ತಲುಪಿದಾಗ ಶ್ರೀಪಾದರು ಮೇನೆಯಿಂದ ಇಳಿದು ಕನಕನ ಕಿಂಡಿಯಲ್ಲಿ ಕೃಷ್ಣ ದರ್ಶನ ಮಾಡಿದರು, ಬಳಿಕ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಕೃಷ್ಣಮಠ ಪ್ರವೇಶಿಸಿ ನವರತ್ನ ಕಿಂಡಿಯಲ್ಲಿ ಕೃಷ್ಣನ ದರ್ಶನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>