2,000 ಎಕರೆಯಲ್ಲಿ ಭತ್ತ ಬೆಳೆಯಲು ₹ 4 ರಿಂದ₹ 5 ಕೋಟಿ ಖರ್ಚು ರ್ಅಂದಾಜಿಸಲಾಗಿದ್ದು, ಈ ಹಣವನ್ನು ದಾನಿಗಳಿಂದ ಪಡೆಯಲು ಹಾಗೂ ಬಡ್ಡಿ ರಹಿತ ಮುಂಗಡವಾಗಿ ಪಡೆಯಲು ಟ್ರಸ್ಟ್ ನಿರ್ಧರಿಸಿದೆ. ಕರಾವಳಿಯಲ್ಲಿ ಬಹುಬೇಡಿಕೆಯ ಎಂಒ–4 (ಕಜೆ) ತಳಿಯ ಭತ್ತವನ್ನು ಸಾವಯವ ಪದ್ಧತಿಯಲ್ಲಿ ಬೆಳೆಯಲಾಗುತ್ತಿದ್ದು, ಬೆಳೆದ ಭತ್ತವನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಖರ್ಚುವೆಚ್ಚ ಸರಿದೂಗಿಸಲಾಗುವುದು. ಮುಂಗಡ ಕೊಟ್ಟವರಿಗೆ ಮರುಪಾವತಿ ಮಾಡಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷ ಹಾಗೂ ಶಾಸಕರೂ ಆದ ಕೆ.ರಘುಪತಿ ಭಟ್ ತಿಳಿಸಿದರು.