ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೃಥ್ವಿ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ಖುಲಾಸೆ

ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆದೇಶ
Last Updated 2 ಡಿಸೆಂಬರ್ 2019, 15:50 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರೀಯ ಕ್ರೀಡಾಪಟು ಪೃಥ್ವಿ ಪೂಜಾರಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಮಿಸ್ಬಾನ್ ಹುಸೇನ್ ದೋಷಮುಕ್ತ ಎಂದು ಸೋಮವಾರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ:2011, ಸೆ.27ರಂದು ರಾಷ್ಟ್ರೀಯ ಪೋಲ್‌ವಾಲ್ಟ್‌ ಆಟಗಾರ್ತಿಯಾಗಿದ್ದ ಅಂಪಾರಿನ ಪೃಥ್ವಿ ಪೂಜಾರಿ ವಾರಂಬಳ್ಳಿಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂದರ್ಭ ಸಿಕ್ಕ ಡೆತ್‌ನೋಟ್‌ನಲ್ಲಿ ಬ್ರಹ್ಮಾವರದ ಮಿಸ್ಬಾನ್ ಎಂಬಾತ ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂದು ಪೃಥ್ವಿ ಉಲ್ಲೇಖಿಸಿದ್ದಳು.

ಬ್ರಹ್ಮಾವರ ಪೊಲೀಸರು ಮಿಸ್ಬಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಈ ಪ್ರಕರಣ ಜಿಲ್ಲೆಯಾದ್ಯಂತ ಸಾಕಷ್ಟು ಸುದ್ದಿಯಾಗಿತ್ತು. ಹಲವು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದ್ದವು.

ಅಂದಿನ ಕುಂದಾಪುರ ಎಎಸ್‌ಪಿ ಡಾ.ಎಚ್‌.ರಾಮ್‌ನಿವಾಸ್ ಸೆಪಟ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 24 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. 8 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ ಮಿಸ್ಬಾನ್ ವಿರುದ್ಧದ ಆರೋಪವನ್ನು ನ್ಯಾಯಾಲಯ ತಳ್ಳಿಹಾಕಿದ್ದು, ದೋಷಮುಕ್ತಗೊಳಿಸಿದೆ.

ಆರೋಪಿಯ ಪರವಾಗಿ ವಕೀಲರಾದ ರವಿಕಿರಣ್ ಮುರ್ಡೇಶ್ವರ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT