ಸ್ತಬ್ಧಚಿತ್ರಗಳು, ಜಾನಪದ ಕಲಾತಂಡಗಳು, ವೇದ, ಮಂತ್ರ ಘೋಷ, ಮಂಗಳವಾದ್ಯ ಸಹಿತ ಭಜನಾ ತಂಡಗಳು ಭಾಗವಹಿಸಲಿವೆ. 18ರಂದು ಬೆಳಗಿನ ಜಾವ 5.50ಕ್ಕೆ ಪುತ್ತಿಗೆ ಶ್ರೀಗಳು ಸಂಪ್ರದಾಯದಂತೆ ಅಕ್ಷಯ ಪಾತ್ರೆ ಸ್ವೀಕರಿಸಿ ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ. ಈ ಮೂಲಕ ಪುತ್ತಿಗೆ ಮಠದ ಪರ್ಯಾಯ ಅಧಿಕೃತವಾಗಿ ಆರಂಭವಾಗಲಿದ್ದು ಮುಂದಿನ 2 ವರ್ಷ ಕೃಷ್ಣನ ಪೂಜಾ ಕೈಂಕರ್ಯ ಹಾಗೂ ಕೃಷ್ಣಮಠದ ಆಡಳಿತ ನಿರ್ವಹಿಸಲಿದ್ದಾರೆ.